Chitradurga News | Nammajana.com | 17-08-2025
ನಮ್ಮಜನ ನ್ಯೂಸ್ ಕಾಂ,ನಾಯಕನಹಟ್ಟಿ: ನಾಯಕನಹಟ್ಟಿ(Sri Guru Thipperudraswamy) ಇತಿಹಾಸ ಪ್ರಸಿದ್ಧ ತಿಪ್ಪೇರುದ್ರಸ್ವಾಮಿ ಮಠಕ್ಕೆ ಚಿತ್ರದುರ್ಗ ಜಿಲ್ಲಾ ಉಸ್ತುವಾರು ಸಚಿವ ಡಿ.ಸುಧಾಕರ್ ಭೇಟಿ ನೀಡಿದ್ರು.
ಹೊರಮಠ ಮಠ ಹಾಗೂ ಒಳ ಮಠಕ್ಕೆ ಭೇಟಿ ನೀಡಿದ ಯೋಜನೆ ಹಾಗೂ ಸಾಂಖ್ಯಿಕ ಸಚಿವ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಡಿ.ಸುಧಾಕರ್ ಶ್ರಾವಣ ಮಾಸದ ಪ್ರಯುಕ್ತ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದರ್ಶನ ಪೆಡೆದು, ವಿಶೇಷ ಪೂಜೆ ಸಲ್ಲಿಸಿದ್ರು. ಮಳೆ ಬೆಳೆ ಸಮೃದ್ಧವಾಗಿ ಜನರ ಬದುಕು ಹಸನಾಗಲಿ ಅಂತಾ ಪ್ರಾರ್ಥಿಸಿದ್ರು.

ಇದನ್ನೂ ಓದಿ: ವಿ.ವಿ.ಸಾಗರ | 17 ಆಗಸ್ಟ್ 2025 | ನೀರಿನ ಒಳ ಹರಿವು ಹೆಚ್ಚಳ
ಈ ಸಂದರ್ಭದಲ್ಲಿ ಮುಖಂಡ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ, ಎತ್ತನಹಟ್ಟಿ ಗೌಡ್ರು, ಶಂಕರ್ ನಿಡಗಲ್, ನಾಯಕನಹಟ್ಟಿ ಸುನಿಲ್ ಜಯಲಕ್ಷ್ಮಿ, ಬಿಜಿಕೆರೆ ಕಾಂಗ್ರೆಸ್ ಮುಖಂಡ ನಾಗೇಶ್, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸಿಬ್ಬಂದಿ ಎಸ್ ಸತೀಶ್, ಮನು, ಶ್ರೀ ಕೃಷ್ಣ ದತ್ತ ಸಾಯಿ ಸೇವಾ ಸಮಿತಿ ಶ್ರೀಶೈಲ ಪಟೇಲ್ ಬಸವನಗೌಡ, ರೋಹಿಣಿ ಪಾಟೇಲ್, ಶಿಲ್ಪಾ ಪ್ರಕಾಶ್, ರಾಧಾ, ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಪಾಂಡುರಂಗಪ್ಪ ಹಾಗೂ ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252