Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dairy farming | “ಹೈನುಗಾರಿಕೆ” ಕೃಷಿಯಲ್ಲಿ ಬಹಳ ಮುಖ್ಯ: ಎನ್.ಚಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Dairy farming | “ಹೈನುಗಾರಿಕೆ” ಕೃಷಿಯಲ್ಲಿ ಬಹಳ ಮುಖ್ಯ: ಎನ್.ಚಲುವರಾಯಸ್ವಾಮಿ
ಇಂದಿನ ಸುದ್ದಿ

Dairy farming | “ಹೈನುಗಾರಿಕೆ” ಕೃಷಿಯಲ್ಲಿ ಬಹಳ ಮುಖ್ಯ: ಎನ್.ಚಲುವರಾಯಸ್ವಾಮಿ

Editor Nammajana
Last updated: 12 February 2025 2:38 AM
By Editor Nammajana 4 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|12-02-2025

ನಮ್ಮಜನ.ಕಾಂ, ಚಿತ್ರದುರ್ಗ: “ಹೈನುಗಾರಿಕೆ” ಕೃಷಿಯಲ್ಲಿ ಬಹಳ ಮುಖ್ಯವಾಗಿದ್ದು, ಕೃಷಿಯ ಬಲವರ್ಧನೆಗೆ (Dairy farming) ಹೈನುಗಾರಿಕೆಯನ್ನು ಕೂಡ ಸರ್ಕಾರ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಹೇಳಿದರು.

ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮದಲ್ಲಿ ಮಂಗಳವಾರ ಜಲಾನಯನ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಮಳೆಯಾಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು (Dairy farming) ಪುನಶ್ಚೇತನಗೊಳಿಸುವ ಯೋಜನೆಯಡಿ ರೈತ ಫಲಾನುಭವಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರವು ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಾಲು ಉತ್ಪಾದಕರಿಗೆ ರೂ.5 ಸಹಾಯಧನ, ಹಸು ಖರೀದಿಗೆ ರೂ.20 ಸಾವಿರ ಸಹಾಯಧನ, ಮೇವು ಕಟಾವು ಯಂತ್ರ, ಗೊಬ್ಬರ, ಬಿತ್ತನೆ ಬೀಜ ಸಬ್ಸಿಡಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು (Dairy farming) ರೈತರಿಗೆ ನೀಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಗೆ 4.18 ಕೋಟಿ ಅನುದಾನ: (Dairy farming)

ಮಳೆಯಾಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಸುಮಾರು 2,000 ಹಸುಗಳನ್ನು ರೂ.4.18 ಕೋಟಿಗೂ ಅಧಿಕ ವೆಚ್ಚದಲ್ಲಿ ನೀಡಲಾಗಿದ್ದು, ಜಿಲ್ಲೆಯ 60 ಗ್ರಾಮಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪ್ರತಿ ಮನೆಗೂ ಗ್ಯಾರಂಟಿ ಯೋಜನೆ ತಲುಪಿದೆ:

ಗ್ಯಾರಂಟಿ ಯೋಜನೆಗಳಿಂದ ಪ್ರತಿ ಒಂದು ತಾಲ್ಲೂಕಿಗೆ ಸುಮಾರು 200 ರಿಂದ 230 ಕೋಟಿಗೂ ಅಧಿಕ ಹಣ ಯೋಜನೆಗಳ ಫಲಾನುಭವಿಗಳಿಗೆ ನೇರವಾಗಿ ಪಾವತಿಯಾಗಿದೆ.

ಗ್ರಾಮೀಣ ಭಾಗದ ಪ್ರತಿ ಮನೆ ಮನೆಯಲ್ಲಿಯೂ ಸಹ ಶೇ.100ರಷ್ಟು ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಪಡೆದಿದ್ದಾರೆ ಎಂದು ಕೃಷಿ ಸಚಿವರು ತಿಳಿಸಿದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಕಳೆದ ವರ್ಷ ಪರಶುರಾಂಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೃಷಿ ಸಚಿವರು ಚಿತ್ರದುರ್ಗ ಜಿಲ್ಲೆಗೆ ಜಲಾನಯನ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ ನೀಡುವಂತೆ (Dairy farming) ಅಧಿಕಾರಿಗಳಿಗೆ ಸೂಚನೆ ನೀಡಿದ್ದರ ಫಲವಾಗಿ ಕಳೆದ ವರ್ಷ 2023-24ನೇ ಸಾಲಿನಲ್ಲಿ ರೂ.84 ಲಕ್ಷ ಹಾಗೂ 2024-25ನೇ ಸಾಲಿನಲ್ಲಿ ಇದುವರೆಗೂ ರೂ.4.18 ಕೋಟಿ ಅನುದಾನವನ್ನು ಸಚಿವರು ಜಿಲ್ಲೆಗೆ ನೀಡಿದ್ದಾರೆ.

ಮಳೆಯಾಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನೆಯಡಿ ಸುಮಾರು 2,000 ಹಸುಗಳನ್ನು ನೀಡುವ ಮೂಲಕ ಜಿಲ್ಲೆಯ 60 ಗ್ರಾಮಗಳಲ್ಲಿ ಅನುಷ್ಠಾನಗೊಳಿಸಲಾಗಿದೆ.

ರೇಣುಕಾಪುರ ಗ್ರಾಮದಲ್ಲಿಯೇ 200 ಹಸು ಹಾಗೂ ಎಮ್ಮೆಗಳನ್ನು ನೀಡಲಾಗಿದೆ. ಇದರಿಂದ ಸುಮಾರು 839 ಕುಟುಂಬಗಳು ಹೈನುಗಾರಿಕೆಯನ್ನು ಕೈಗೊಂಡಿದ್ದು, ಆರ್ಥಿಕ ಸಬಲತೆ ಕಂಡುಕೊಂಡಿದ್ದಾರೆ ಎಂದರು.

ಈ ಯೋಜನೆ ಅನುಷ್ಠಾನವಾದ ನಂತರದಲ್ಲಿ ರೇಣುಕಾಪುರ ಹಾಲು ಉತ್ಪಾದಕರ ಸಂಘಕ್ಕೆ ಪ್ರತಿ ದಿನವೂ ಸುಮಾರು 1,200 ಲೀಟರ್ ನಿಂದ 1300 ಲೀಟರ್ ಹಾಲು ದೊರೆಯುತ್ತಿದೆ.

ಹೈನುಗಾರಿಕೆ ಮೂಲಕ ಈ ಗ್ರಾಮಕ್ಕೆ ಶಕ್ತಿ ತುಂಬಿದವರು ಕೃಷಿ ಸಚಿವರು. ರೇಣುಕಾಪುರ ಗ್ರಾಮದ ರೈತರು ವಾರ್ಷಿಕವಾಗಿ ಸುಮಾರು ರೂ.2 ಕೋಟಿ ರೂಪಾಯಿಗೂ ಹೆಚ್ಚಿನ ಆರ್ಥಿಕಾಭಿವೃದ್ಧಿ ಚಟುವಟಿಕೆ ಕೈಗೊಂಡಿದ್ದಾರೆ. ಯೋಜನೆ ಅನುಷ್ಠಾನಗೊಂಡ ಜಿಲ್ಲೆಯ 60 ಗ್ರಾಮಗಳಲ್ಲಿ ಸುಮಾರು ರೂ.24 ಕೋಟಿ ವರೆಗೂ ಆದಾಯ ಉತ್ಪನ್ನವಾಗುವ ಕೆಲಸ ಆಗಿದೆ. ಹೈನುಗಾರಿಕೆ ಅಭಿವೃದ್ಧಿಯಿಂದಾಗಿ ಹೊಲ,  ತೋಟಗಳಿಗೆ ಗೊಬ್ಬರ ಹಾಕುವುದರಿಂದ ಮಣ್ಣಿನ ಉತ್ಪಾದನಾ (Dairy farming) ಶಕ್ತಿಯು ಈ ಕಾರ್ಯಕ್ರಮದ ಮೂಲಕ ಆಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಕೆಲಸಗಳು ಸುಸ್ಥಿರವಾಗಿ ನಡೆಯಲು ಕಾರಣ ಆಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನೆಯಡಿ ಫಲಾನುಭವಿಗಳಿಗೆ ರೂ.20 ಸಾವಿರ ಗಳ ಸಹಾಯಧನದ ಚೆಕ್ ಅನ್ನು ಕೃಷಿ ಸಚಿವರು ಸಾಂಕೇತಿಕವಾಗಿ ವಿತರಿಸಿದರು.

ರೈತರಿಗೆ ಪೂರಕ ಹೈನುಗಾರಿಕೆ: (Dairy farming)

ರೈತರಿಗೆ ಹೈನುಗಾರಿಕೆ ಪೂರಕವಾಗಿದ್ದು, ಕುಟುಂಬದ ಖರ್ಚು ನಿರ್ವಹಣೆ, ಆರ್ಥಿಕವಾಗಿ ಸದೃಢವಾಗಲು ಜಲಾನಯನ ಇಲಾಖೆಯ ಮಳೆ ಆಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನೆ ಸಹಾಯಕವಾಗಿದ್ದು, ಈ ಯೋನೆಯಿಂದ ರೇಣುಕಾಪುರದ ಗ್ರಾಮದ ಚಿತ್ರಣ ಬದಲಾಗಿದೆ.

ಈ ಯೋಜನೆ ಮೂಲಕ ಜಲಾನಯನ ಇಲಾಖೆ ವತಿಯಿಂದ ರೇಣುಕಾಪುರ ಗ್ರಾಮದಲ್ಲಿ ಈಗ ಹೈನುಗಾರಿಕೆ ಪ್ರಮುಖ ಆದಾಯ ಮೂಲವಾಗಿದೆ. ಹಾಲು, ಗೊಬ್ಬರಗಳ ಮಾರಾಟದಿಂದ ಗ್ರಾಮಸ್ಥರ ಆರ್ಥಿಕತೆ ವೃದ್ಧಿಸಿದೆ. ರೈತರ ಆತ್ಮ ವಿಶ್ವಾಸ ಹೆಚ್ಚಿಸಿದೆ. ಭೂಮಿಯ ಫಲವತ್ತತೆ ಕೂಡ ಹೆಚ್ಚಿದೆ. ರೇಣುಕಾಪುರಕ್ಕೆ ಯೋಜನೆ ಮೂಲಕ ವರ ತಂದ ಕೃಷಿ ಸಚಿವರು ಎಂದು ಗ್ರಾಮದ ಫಲಾನುಭವಿಗಳಾದ ಅಂಬರೀಶ್ ಹಾಗೂ ನರಸಿಂಹಮೂರ್ತಿ ಅಭಿಮಾನದಿಂದ ನುಡಿದರು.

ಈ ಯೋಜನೆಗೆ ಮುನ್ನ ರೇಣುಕಾಪುರ ಗ್ರಾಮ ಕೇವಲ ಬರಡು ನೆಲವಾಗಿತ್ತು. ಆದರೆ ಜಲಾನಯನ ಇಲಾಖೆ ಪಶು ಸಂಗೋಪನೆಗೆ ಪ್ರೋತ್ಸಾಹ ದೊರೆತ ನಂತರ ರೈತರ ಮನೆಯ ಪರಿಸರ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಬದಲಾಗಿದೆ. ಮಕ್ಕಳ ಶಿಕ್ಷಣ ಹಾಗೂ ಆಸ್ಪತ್ರೆ ಚಿಕಿತ್ಸೆಗೆ ಯಾರ ಮುಂದೆಯೂ ಕೈ ಚಾಚುವಂತಿಲ್ಲ. ನೆಮ್ಮದಿ ಹೆಚ್ಚಿದೆ ಎಂದು ರೇಣುಕಾಪುರ ಗ್ರಾಮದ ಬಸವರಾಜ್ ಹೇಳಿದರು.

ಇದನ್ನೂ ಓದಿ: ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ | Dina Bhavishya

ಕಾರ್ಯಕ್ರಮದಲ್ಲಿ ಸಾವಯವ ಮಿಷನ್ ಮಾಜಿ ಅಧ್ಯಕ್ಷ ಸೋಮಶೇಖರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ನಾಗೇಶ್ ರೆಡ್ಡಿ, ಕೆಡಿಪಿ ಸದಸ್ಯರಾದ ಪಾಲಯ್ಯ, ವಿಶ್ವನಾಥರೆಡ್ಡಿ, ಜಲಾನಯನ ಇಲಾಖೆ ಆಯುಕ್ತ ಮಹೇಶ್ ಬಿ.ಶಿರೂರ, ನಿರ್ದೇಶಕ ಮೊಹಮ್ಮದ ಫರ್ವೇಜ್ ಬಂಥನಾಳ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಕುಮಾರ್, ಸಹಾಯಕ ನಿರ್ದೇಶಕ ರೇವಣ್ಣ, ಉಪಕೃಷಿ ನಿರ್ದೇಶಕ ಪ್ರಭಾಕರ್, ರೈತ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ ಸೇರಿದಂತೆ ರೇಣುಕಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ರೈತರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:Agriculture MinisterChallakere VisitChitradurgaChitradurga NewsDairyEncouragementfarmerKannada Newskannada suddiN. ChaluvarayaswamyNammajana.comಎನ್.ಚಲುವರಾಯಸ್ವಾಮಿಕನ್ನಡ ನ್ಯೂಸ್ಕನ್ನಡ ಸುದ್ದಿಕೃಷಿ ಸಚಿವಚಳ್ಳಕೆರೆ ಭೇಟಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರೋತ್ಸಹರೈತಹೈನುಗಾರಿಕೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ | Dina Bhavishya
Next Article ದೊಡ್ಡ ಉಳ್ಳಾರ್ತಿ ಹೋಬಳಿ ಕೇಂದ್ರ ಮಾಡಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಗೆ ಮನವಿ | Dodduullartiಟ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?