Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸೊಸೆಯರು ಭರ್ಜರಿ ಡ್ಯಾನ್ಸ್ ಮಾಡುವ ವಿಶಿಷ್ಟ ಹಬ್ಬ | ‌Dasara
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸೊಸೆಯರು ಭರ್ಜರಿ ಡ್ಯಾನ್ಸ್ ಮಾಡುವ ವಿಶಿಷ್ಟ ಹಬ್ಬ | ‌Dasara
ಇಂದಿನ ಸುದ್ದಿ

ಸೊಸೆಯರು ಭರ್ಜರಿ ಡ್ಯಾನ್ಸ್ ಮಾಡುವ ವಿಶಿಷ್ಟ ಹಬ್ಬ | ‌Dasara

Editor Nammajana
Last updated: 19 October 2024 3:33 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|19-10-2024

ನಮ್ಮಜನ.ಕಾಂ, ಹಿರಿಯೂರು: ಗ್ರಾಮದ ಸೊಸೆಯರು ಕುಣಿಯುವ ವಿಶಿಷ್ಟ ಸಂಪ್ರದಾಯದ ಜಾತ್ರೆಯೊಂದು (Dasara) ತಾಲೂಕಿನ ಬಾಲೇನಹಳ್ಳಿ ಗ್ರಾಮದಲ್ಲಿ ನಡೆಯಿತು.

ಕಾಡುಗೊಲ್ಲರ ಆರಾಧ್ಯ ದೇವತೆ ಗೊಲ್ಲಹಳಮ್ಮನ ಭಂಡಾರೋತ್ಸವ ಗುರುವಾರ ಸಂಭ್ರಮದಿಂದ ಜರುಗಿತು. ಈ ಭಂಡಾರೋತ್ಸವದಲ್ಲಿ ಗ್ರಾಮದ ಸೊಸೆಯಂದಿರು ಪ್ರತಿ (Dasara) ವರ್ಷವೂ ಕುಣಿಯುವುದು ವಾಡಿಕೆಯಾಗಿದೆ.

ದಸರಾ ಹಬ್ಬದ ವಿಜಯದಶಮಿ ಅಂಬಿನೋತ್ಸವದೊಂದಿಗೆ ಆರಂಭವಾಗುವ ಈ ಜಾತ್ರೆ ಏಕಾದಶಿ ವಿಶೇಷ ಪೂಜೆ, ದ್ವಾದಶಿ, ಹರಿಸೇವೆ, ಕುರಿ ಕರೆಯುವ ಉತ್ಸವ, ಪಲ್ಲಕ್ಕಿ ಉತ್ಸವ, ಆರತಿ, ಸಿಡಿ ಮದ್ದಿನ ಉತ್ಸವ, ಮರುದಿನ ಭoಡಾರೋತ್ಸವ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ಕೊನೆಗೊಳ್ಳುತ್ತದೆ.

ಹಬ್ಬದ ಕೊನೆಯ ದಿನದಲ್ಲಿ ಸೊಸೆಯಂದಿರು ಸೀರೆಯುಟ್ಟು, ಕೈಯಲ್ಲಿ ಬೇವಿನ ಸೊಪ್ಪು ಹಿಡಿದು ದೇವಿಯ ಭoಡಾರವನ್ನ ಹಣೆಗೆ ಇಟ್ಟುಕೊಂಡು ಸ್ವಯಂ ಪ್ರೇರಿತರಾಗಿ ವಾಲಗ ಹಾಗೂ ತಮಟೆಯ ಸದ್ದಿಗೆ ಹೆಜ್ಜೆ ಹಾಕುವ ಮೂಲಕ ಹರಕೆ ತೀರಿಸುತ್ತಾರೆ.

ಚಿತ್ತಮುತ್ತಿ ಕುಲದ ಕರಡಿ ಕುಳ್ಳಪ್ಪನ ವಂಶಸ್ಥರಾದ ಕರಡಿಗೊಲ್ಲರು ಈ ಶ್ರೀದೇವಿ ಗೊಲ್ಲಳ್ಳಮ್ಮ, ಶ್ರೀ ಚಿತ್ರಲಿಂಗೇಶ್ವರ ಸ್ವಾಮಿ ಹಾಗೂ ತಿಮ್ಮಪ್ಪ ಸ್ವಾಮಿಯನ್ನು ಆರಾಧನೆ ಮಾಡಿಕೊಂಡು ಬರುತ್ತಿದ್ದಾರೆ.

ವಾರದವರೆಗೂ ದಸರಾ ಹಬ್ಬವನ್ನು ವಿಶೇಷವಾಗಿ ವೈಭವದಿಂದ ಆಚರಿಸಿಕೊಂಡು ಬರಲಾಗುತ್ತದೆ. ಗ್ರಾಮದಲ್ಲಿ ಬಹುತೇಕ ಕರಡಿಗೊಲ್ಲರ ಬೆಡಗಿನ ಮನೆಗಳಿವೆ. ಈ ಕುಟುಂಬಗಳಿಗೆ ಸೊಸೆಯಾಗಿ ಬಂದವರು ಪ್ರತಿಯೊಬ್ಬರು ಈ ಭoಡಾರ ಉತ್ಸವದಲ್ಲಿ ಭಾಗಿಯಾಗಿ ಕುಣಿಯುವ ಮೂಲಕ ಈ ಸಂಪ್ರದಾಯ ಆಚರಣೆ ಮಾಡಿಕೊಂಡು ಬರುತ್ತಿರುವುದು ತಾಲೂಕಿನಲ್ಲಿಯೇ ವಿಶಿಷ್ಟವಾಗಿದೆ.

ಗ್ರಾಮಕ್ಕೆ ಮದುವೆಯಾಗಿ ಬಂದ ಸೊಸೆಯಂದಿರು ಕುಣಿಯದಿದ್ದರೆ ಗ್ರಾಮದೇವತೆ ಗೊಲ್ಲಳಮ್ಮ ಕುಣಿಯುತ್ತಾಳೆ. ಹೀಗಾಗಿ ಅಮ್ಮನ ಅಪ್ಪಣೆಯಂತೆ ಅನಾದಿಕಾಲದಿಂದಲೂ ಸೊಸೆಯಂದಿರು ಈ ಉತ್ಸವದಲ್ಲಿ ಕುಣಿಯುವುದು ವಾಡಿಕೆಯಾಗಿ ಮುಂದುವರೆದುಕೊಂಡು ಬಂದಿದೆ.
ಹಬ್ಬದ ಕೊನೆಯ ಭಂಡಾರೋತ್ಸವದ ದಿನದಂದು ಗ್ರಾಮದಲ್ಲಿ ಶಾಂತಿ, ಸಮೃದ್ಧಿಗಾಗಿ ದೇವರು ಮನೆ ಮನೆಗೆ ಭೇಟಿ ನೀಡುತ್ತದೆ. ಬಳಿಕ ಸೊಸೆಯಂದಿರು ಗ್ರಾಮದ ಹನುಮಂತರಾಯ (Dasara) ದೇವಸ್ಥಾನದಿಂದ ಕುಣಿತ ಆರಂಭಿಸುತ್ತಾರೆ. ಇದಾದ ಬಳಿಕ ಮಣೇವು ಕಾರ್ಯಕ್ರಮದೊಂದಿಗೆ ದಸರಾ ಹಬ್ಬ ಕೊನೆಗೊಳ್ಳುತ್ತದೆ.

ಇದನ್ನೂ ಓದಿ: ಹೊಸ ಕೆರೆ ಕೋಡಿ | ಹಲವು ಗ್ರಾಮಗಳಿಗೆ ಸಂಪರ್ಕ ಕಡಿತ | Hosa kere

ವಿಶೇಷ

ನಮ್ಮೂರಿನ ದೇವಿಗೆ ಕುಣಿಯುವುದು ಎಂದರೆ ಅದು ಭಕ್ತಿಯ ಸಂಕೇತವಾಗಿದೆ. ಹಾಗಾಗಿ ನಾವು ದೇವಿಯನ್ನು (Dasara) ಸಂತೃಪ್ತಿಗೊಳಿಸಲು ಕುಣಿಯುತ್ತೇವೆ. ಮಕ್ಕಳ ಜೊತೆ ಕುಣಿಸಿಕೊಳ್ಳುವುದು ದೇವಿಗೆ ಇಷ್ಟವಿಲ್ಲ. ಹಾಗಾಗಿ ವಿಶೇಷವಾಗಿ ಸೊಸೆಯಂದಿರು ಕುಣಿದಾಗ ದೇವಿ ಸಂತೃಪ್ತಿಯಾಗುತ್ತಾಳೆ. ಗ್ರಾಮದಲ್ಲಿ ಉತ್ತಮ ಮಳೆಯಾಗಲಿ, ಯಾವುದೇ ರೋಗ ರುಜಿನಗಳು ಬಾರದಿರಲಿ, ಊರು ಅಭಿವೃದ್ಧಿಯಾಗಲಿ, ಶಾಂತಿ ನೆಮ್ಮದಿ ದೊರಕಲಿ ಎಂಬುದು ಕುಣಿತದ ಸಂಕೇತವಾಗಿದೆ ಎನ್ನುತ್ತಾರೆ ದೇವಿಯ ಸೊಸೆಯಂದಿರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

TAGGED:a unique traditional fairBalenahallidaughter-in-law danceDussehraದಸರಾಬಾಲೇನಹಳ್ಳಿವಿಶಿಷ್ಟ ಸಂಪ್ರದಾಯದ ಜಾತ್ರೆಸೊಸೆಯರ ಕುಣಿತ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಇಂದಿನ ರಾಶಿ ಭವಿಷ್ಯ, ಈ ರಾಶಿಗಳಿಗೆ ಉದ್ಯೋಗ ಭಾಗ್ಯ, ಉದ್ಯಮದಲ್ಲಿ ಯಶಸ್ಸು? | Kannada Dina Bhavishya
Next Article BCM ಆಫೀಸರ್ ನಮ್ಮ ಮಾವ, ಮಕ್ಕಳ ಮೇಲೆ ವಾರ್ಡನ್ ಗೂಂಡಾ ವರ್ತನೆ, ಸೌಲಭ್ಯ ಕೇಳಿದರೆ ವಿಕೆಟ್ ನಿಂದ ಹಲ್ಲೆ | BCM Hostel
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?