Chitradurga news|nammajana.com|25-03-2025
ನಮ್ಮಜನ.ಕಾಂ, ಹೊಸದುರ್ಗ: ರೈತರು ಸಾಲಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲು 15000 ರೂಪಾಯಿ ಲಂಚ ಪಡೆಯುತ್ತಿದ್ದ ಹೊಸದುರ್ಗ ಡಿ.ಸಿ.ಸಿ. (DCC Bank) ಬ್ಯಾಂಕ್ನ ಮೇಲ್ವಿಚಾರಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನವೀನ್ ಬಂಧಿತ ಆರೋಪಿ. ಮಾಡದಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಕುಮಾರ್ ಇವರು ರೈತರುಗಳು ಸಾಲಕ್ಕಾಗಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಹೊಸದುರ್ಗ ಶಾಖೆಗೆ ಪರಿಶೀಲನೆಗಾಗಿ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಮೇಲ್ವಿಚಾರಕ ನವೀನ್ ಅವರು ರೂ.15,000/-ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿರುತ್ತಾರೆ. ಅವರು ಲಂಚದ ಹಣಕ್ಕೆ ಬೇಡಿಕೆಯಿಟ್ಟ ಸಮಯದಲ್ಲಿ ನಡೆದ ಸಂಭಾಷಣೆಗಳನ್ನು ತಮ್ಮ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡು ಲೋಕಾಯುಕ್ತ ಪೊಲೀಸ್ (DCC Bank) ತನಿಖಾಧಿಕಾರಿಗಳಾದ ಬಸವರಾಜ ಬಿ. ಲಮಾಣಿ ಅವರಿಗೆ ದೂರು ಸಲ್ಲಿಸಿರುತ್ತಾರೆ.
ಇದನ್ನೂ ಓದಿ: Road widening | KDP ಸಭೆಗೆ ಸಿಮೀತವಾದ ಚಿತ್ರದುರ್ಗ ರಸ್ತೆ ಅಗಲೀಕರಣ
ಈ ದೂರಿನ ಮೇರೆಗೆ ಇಂದು ದಾಳಿ ಮಾಡಿದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿ ಡಿಸಿಸಿ ಬ್ಯಾಂಕಿನ (DCC Bank) ಮೇಲ್ವಿಚಾರಕ ನವೀನ್ ಅವರನ್ನು ಬಂಧಿಸಿರುತ್ತಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252