Chitradurga news|nammajana.com|20-8-2024
ನಮ್ಮಜನ.ಕಾಂ, ಹೊಸದುರ್ಗ: ಮೀನು ಹಿಡಿಯಲು ಹೋಗಿದ್ದ ಯುವಕನೋರ್ವ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಶ್ರೀರಾಂಪುರ ಪೋಲೀಸ್ ಠಾಣಾ ವ್ಯಾಪ್ತಿಯ (Death young man) ಕೆಲ್ಲೋಡು ಬಳಿ ವೇದಾವತಿ ನದಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತ ಯುವಕನನ್ನು ಜಾನಕಲ್ ಗ್ರಾಮದ ಶಿವು(35) ಎಂದು ಗುರುತಿಸಲಾಗಿದೆ. ವೇದಾವತಿ ನದಿಯಲ್ಲಿ ನೀರಿನ ಹರಿವು (Death young man) ಹೆಚ್ಚಾಗಿದ್ದು ಇದರ ಮಧ್ಯೆಯೇ ಪ್ರತಿ ದಿನ ಮೀನುಗಾರರು ಮೀನು ಹಿಡಿಯುತ್ತಿದ್ದರು.

ಎಂದಿನಂತೆ ಸೋಮವಾರವೂ ತನ್ನ ತಂಡದೊಂದಿಗೆ ಮೀನು ಹಿಡಿಯಲು ಹೋಗಿದ್ದ ಶಿವು ನೀರಿನ ಸೆಳೆತಕ್ಕೆ ಸಿಕ್ಕಿ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಕಾಲ್ಗೆರೆ ಪಿಡಿಓ ಎಸ್.ಬಸವರಾಜ್ ಅಮಾನತು | PDO Suspended
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳಿಯ (Death young man) ಈಜುಗಾರರು ಆಗಮಿಸಿ ಶಿವು ಅವರ ದೇಹವನ್ನು ಹೊರ ತೆಗೆಯಲು ಹುಡುಕಾಟ ನೆಡೆಸಿದ್ದಾರೆ. ಸಂಜೆಯಾದರು ಇನ್ನೂ ಶವ ಸಿಕ್ಕಿಲ್ಲ. ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪಿಐ ಮಧು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252