
Chitradurga news | nammajana.com | 20-8-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ನಾಯಕನಹಟ್ಟಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ಕಚೇರಿಯಲ್ಲಿ (Dharamsthala) ಹಿಂದುಳಿದ ವೃತ್ತಿಪರ ಕೋರ್ಸ್ಗಳನ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯ ವೇತನ ಹಾಗೂ ವಿದ್ಯಾಭ್ಯಾಸವನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಮಾಣವನ್ನು ಪತ್ರವನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾಲ್ಲೂಕಿನ ವಕೀಲರ ಸಂಘದ ಅಧ್ಯಕ್ಷ ಹಾಗೂ ಮಧ್ಯವರ್ಜನ ಶಿಬಿರದ ಹಿರಿಯ ಅಧಿಕಾರಿ (Dharamsthala) ಕೆ.ಎಂ.ನಾಗರಾಜು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಮಾಜದ ಎಲ್ಲಾ ವರ್ಗಕ್ಕೂ ಆರ್ಥಿಕ ನೆರವು ನೀಡುವ ಮೂಲಕ ಶಕ್ತಿ ತುಂಬಿದೆ.

ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಕೂಲಿಕಾರ್ಮಿಕರು, ಪುರಾತನ ದೇವಸ್ಥಾನಗಳ ಜೀರ್ಣೋದ್ದಾರ ಹೀಗೆ ಹಲವಾರು ಪ್ರಗತಿಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದು ಸಂತಸ ತಂದಿದೆ ಎಂದರು.
ಜಿಲ್ಲಾ ಯೋಜನಾ ನಿರ್ದೇಶಕ ಜನಾರ್ಧನ್ ಮಾತನಾಡಿ, ಪ್ರಾರಂಭದ ಹಂತದಲ್ಲಿ ಪೂಜ್ಯರ ಮಾರ್ಗದರ್ಶನದಲ್ಲಿ ಮಹಿಳಾ ಸ್ತೀಶಕ್ತಿ ಸಂಘಗಳ ಸ್ಥಾಪನೆ, ಅವುಗಳ ಕ್ರಿಯಾಶೀಲ (Dharamsthala) ಚಟುವಟಿಕೆಗೆ ಆದ್ಯತೆ ನೀಡಲಾಯಿತು. ವಿದ್ಯಾರ್ಥಿಗಳು, ರೈತರು ಹಾಗೂ ಕೂಲಿಕಾರ್ಮಿಕರಿಗೂ ಸಹ ವಿವಿಧ ಯೋಜನೆಯಲ್ಲಿ ಆರ್ಥಿಕ ಸಹಾಯ ನೀಡಲಾಯಿತು.
ವಿಶೇಷವೆಂದರೆ ಇಡೀ ಬದುಕನ್ನೇ ಬೀದಿಗೆ ತರುತ್ತಿದ್ದ ಕುಡಿತದ ಚಟವನ್ನು ಬಿಡಿಸಲು ಮಧ್ಯವರ್ಜನ ಶಿಬಿರವನ್ನು ಎಲ್ಲೆಡೆ ಹಮ್ಮಿಕೊಳ್ಳಲಾಯಿತು. ಸಾವಿರಾರು ಜನರು ಕುಡಿತದಿಂದ (Dharamsthala) ವಿಮುಕ್ತಿ ಪಡೆದು ನೆಮ್ಮದಿಯ ಬದುಕು ನಡೆಸುವಂತಾಗಿದೆ. ಇಂತಹ ಬದಲಾವಣೆಯಿಂದ ಬದುಕು ಸಾರ್ಥಕತೆಯತ್ತ ತೆರಳುತ್ತದೆ ಎಂದರು.
ಇದನ್ನೂ ಓದಿ: PDO Suspended: ಪಿಡಿಓ ಎಸ್. ಬಸವರಾಜ್ ಅಮಾನತು
ಕಾರ್ಯಕ್ರಮದಲ್ಲಿ ನೇತಾಜಿ ಪ್ರಸನ್ನ, ತಾಲ್ಲೂಕು ಯೋಜನಾಧಿಕಾರಿ ಶಶಿಕಲಾ, ವೀರಶೈವ ಸಮಾಜದ ಹಿರಿಯ ಮುಖಂಡ ಪ್ರಕಾಶ್,ನಾಯಕನಹಟ್ಟಿ ಯೋಜನಾಧಿಕಾರಿ ಅಣ್ಣಪ್ಪ, ತಾಲ್ಲೂಕು ನೋಡಲ್ ಅಧಿಕಾರಿ ಪ್ರವೀಣ್, (Dharamsthala) ಮೇಲ್ವಿಚಾರಕ ಚೇತನ್ ಮುಂತಾದವರು ಉಪಸ್ಥಿತರಿದ್ದರು.