Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಡುಗೆ ಮನೆಗೆ ಸೀಮಿತಳಾಗಿದ್ದ ಮಹಿಳೆ, ಈಗ ಎಲ್ಲಾ ರಂಗದಲ್ಲಿ ಮುಂಜೂಣಿ: ಎಂಎಲ್ಸಿ ಕೆ.ಎಸ್.ನವೀನ್ | Dharmasthala Sangh
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಅಡುಗೆ ಮನೆಗೆ ಸೀಮಿತಳಾಗಿದ್ದ ಮಹಿಳೆ, ಈಗ ಎಲ್ಲಾ ರಂಗದಲ್ಲಿ ಮುಂಜೂಣಿ: ಎಂಎಲ್ಸಿ ಕೆ.ಎಸ್.ನವೀನ್ | Dharmasthala Sangh
ಇಂದಿನ ಸುದ್ದಿ

ಅಡುಗೆ ಮನೆಗೆ ಸೀಮಿತಳಾಗಿದ್ದ ಮಹಿಳೆ, ಈಗ ಎಲ್ಲಾ ರಂಗದಲ್ಲಿ ಮುಂಜೂಣಿ: ಎಂಎಲ್ಸಿ ಕೆ.ಎಸ್.ನವೀನ್ | Dharmasthala Sangh

Editor Nammajana
Last updated: 6 October 2024 17:54
By Editor Nammajana 2 Min Read
Share
SHARE

Chitradurga news|nammajana.com|6-10-2024

ನಮ್ಮಜನ.ಕಾಂ, ಚಿತ್ರದುರ್ಗ: ಒಂದು ಕಾಲದಲ್ಲಿ ಅಡುಗೆ ಮನೆಗೆ ಮಾತ್ರ ಸೀಮಿತಳಾಗಿದ್ದ ಮಹಿಳೆ ಈಗ ಎಲ್ಲಾ ರಂಗಗಳಲ್ಲಿಯೂ ಮುಂಚೂಣಿಯಲ್ಲಿರುವುದರಿಂದ (Dharmasthala Sangh) ಸಮಾಜದಲ್ಲಿ ಸಾಕಷ್ಟು ಪರಿವರ್ತನೆಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಮಾಳಪ್ಪನಹಟ್ಟಿ ಸಮೀಪವಿರುವ ತಿರುಮಲ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ತಾಲ್ಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ಉದ್ ವಾದಸಿ ಮಾತನಾಡಿದರು.

ವೀರವನಿತೆ ಒನಕೆ ಓಬವ್ವ, ಕಿತ್ತೂರುರಾಣಿಚೆನ್ನಮ್ಮ, ಝಾನ್ಸಿರಾಣಿ ಲಕ್ಷ್ಮಿಬಾಯಿ, ಇವರುಗಳೆಲ್ಲಾ ಸಂಕೋಲೆಯನ್ನು ತೊರೆದು ದೇಶ ಸೇವೆಗಾಗಿ ಹೋರಾಡಿದ ದಿಟ್ಟ ಮಹಿಳೆಯರು. 21 ನೇ ಶತಮಾನ ಮಹಿಳೆಯರ ಶತಮಾನ. ಮಹಿಳೆ ಸ್ವಾವಲಂಬಿಯಾಗಿ ಆರ್ಥಿಕವಾಗಿ ಬಲಶಾಲಿಯಾದರೆ ಇಡಿ ಕುಟುಂಬವೆ ಸದೃಢವಾದಂತೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರಹೆಗಡೆರವರು ದೂರದೃಷ್ಟಿಯಿಂದ ಚಿಂತಿಸಿ ಮಹಿಳೆಯರ ಮೇಲೆ ನಂಬಿಕೆಯಿಟ್ಟು ಬ್ಯಾಂಕ್‍ಗಳಿಂದ ಸಾಲ ಸಿಗುವಂತ ವ್ಯವಸ್ಥೆ ಕಲ್ಪಿಸಿರುವುದು ನಿಜಕ್ಕೂ ಶ್ಲಾಘನೀಯ.

ಜೀವನದಲ್ಲಿ ಏನಾದರೂ ತೊಂದರೆ ಸಮಸ್ಯೆಗಳು ಎದುರಾದಾಗ ಮನಸ್ಸಿನಲ್ಲಿ ಚಿಂತೆಯಿಟ್ಟುಕೊಳ್ಳುವ ಬದಲು ಧೈರ್ಯವಾಗಿ ಎದುರಿಸುವ ಶಕ್ತಿ ಬೆಳೆಸಿಕೊಳ್ಳಬೇಕು. ದೇಶದಲ್ಲಿ ಆರ್ಥಿಕ ಕ್ರಾಂತಿಯಾಗುತ್ತಿರುವುದರ ಲಾಭ ಪಡೆದುಕೊಳ್ಳುವಂತೆ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಕೆ.ಎಸ್.ನವೀನ್ ಕರೆ ನೀಡಿದರು.

ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕೆ.ಆರ್.ಮಂಜುನಾಥ್ ಮಾತನಾಡಿ ಶ್ರೀಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳೆಯರನ್ನು ಸ್ವಾವಲಂಭಿಯನ್ನಾಗಿಸಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ನಾಡಿನಾದ್ಯಂತ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿರುವುದನ್ನು ಕಂಡು ಸಹಿಸದ ಕೆಲವು ಪಟ್ಟಭದ್ರರು.

ಯೂಟೂಬ್‍ನಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರಹೆಗಡೆರವರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಹೋರಾಟದ ಮೂಲಕ ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಅಂಗವಿಕಲರಿಗೆ ಮಾಶಾಸನ, ವಿದ್ಯಾರ್ಥಿವೇತನ, ನಿರಾಶ್ರಿತರಿಗೆ ವಾತ್ಸಲ್ಯ ಮನೆ ಕಟ್ಟಿಸಿಕೊಡುವುದು, ವಯೋವೃದ್ದರಿಗೆ ವಾಟರ್‍ಬೆಡ್ ಇನ್ನಿತರೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ.

ಸ್ವಸಹಾಯ ಸಂಘಗಳ ಮಹಿಳೆಯರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದುಪಯೋಗಪಡಿಸಿಕೊಂಡು (Dharmasthala Sangh) ಜೀವನ ಮಟ್ಟ ಸುಧಾರಿಸಿಕೊಂಡಿದ್ದಾರೆಂದು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡುತ್ತ ಒಕ್ಕೂಟದ ಪದಾಧಿಕಾರಿಗಳ ಸಂಘವನ್ನು ಬಲಪಡಿಸುವ ಉದ್ದೇಶವಿಟ್ಟುಕೊಂಡು ಸಮಾವೇಶಗಳನ್ನು ನಡೆಸಲಾಗುತ್ತಿದೆ. ಕಾರ್ಯಕರ್ತರ ಸಹಭಾಗಿತ್ವದಲ್ಲಿ ಯೋಜನೆಯ ವಿವಿಧ ಸೌಲಭ್ಯಗಳನ್ನು ಪಾಲುದಾರರಿಗೆ ತಲುಪಿಸುವುದು ಸುಲಭವಾಗುತ್ತದೆ.

ಜಿಲ್ಲೆಯಲ್ಲಿ 25 ಸಾವಿರ ಸಂಘಗಳಿದ್ದು, ತಾಲ್ಲೂಕಿನಲ್ಲಿ ಆರುವರೆ ಸಾವಿರ ಸಂಘಗಳಿದೆ. ಸಂಘಟನೆ ಗಟ್ಟಿಗೊಳ್ಳಲು ಒಕ್ಕೂಟದ ಪದಾಧಿಕಾರಿಗಳಲ್ಲಿರುವ ಪ್ರಾಮಾಣಿಕತೆ ಕಾರಣ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರ ಸಾಧನೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಯೂಟೂಬ್‍ನಲ್ಲಿ ಧಕ್ಕೆ ತರಲು ಹೊರಟಿರುವುದರಲ್ಲಿ ಸತ್ಯಾಂಶವಿಲ್ಲವೆಂದು ಒಕ್ಕೂಟದ ಪದಾಧಿಕಾರಿಗಳು ಅರ್ಥಮಾಡಿಕೊಂಡು ಸಂಘಟನೆಯನ್ನು ಸದೃಢಗೊಳಿಸುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್ ಪ್ರಾಸ್ತಾವಿಕವಾಗಿ ಮಾತನಾಡಿ 6751 ಪ್ರಗತಿ ಬಂಧು ಸ್ವಸಹಾಯ ಸಂಘಗಳಿದ್ದು, 62759 ಸದಸ್ಯರುಗಳಿದ್ದಾರೆ. 35 ಕೋಟಿ 11 ಲಕ್ಷ ರೂ.ಉಳಿತಾಯವಾಗಿದೆ. ಡಾ.ಡಿ.ವೀರೇಂದ್ರಹೆಗಡೆರವರು ಕೇವಲ ಸ್ವಸಹಾಯ ಸಂಘಗಳ ಮಹಿಳೆಯರಿಗಷ್ಟೆ ಅಲ್ಲ. ವೃದ್ದರಿಗೆ, ನಿರಾಶ್ರಿತರಿಗೆ, ವಿದ್ಯಾರ್ಥಿಗಳಿಗೆ ಅನೇಕ (Dharmasthala Sangh) ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ಒಕ್ಕೂಟದ ಪದಾಧಿಕಾರಿಗಳು ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಭಿಗಳಾಗುವಂತೆ ತಿಳಿಸಿದರು.

ಇದನ್ನೂ ಓದಿ: ಚಿತ್ರದುರ್ಗ | ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿಗೆ ಜಿಲ್ಲೆಯ ಇಬ್ಬರಿಗೆ ಸ್ಥಾನ | Kannada Rajyotsava AwardAward

ಬ್ಯಾಂಕ್ ಆಫ್ ಬರೋಡ ಚಿತ್ರದುರ್ಗ ಶಾಖೆಯ ಸಹಾಯಕ ಪ್ರಬಂಧಕರಾದ ಶ್ರೀಮತಿ ಮಧುಶ್ರಿ, ಸುಬ್ಬಾರೆಡ್ಡಿ, ಸುರೇಂದ್ರ ವೇದಿಕೆಯಲ್ಲಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsDharmasthala SanghKannada Newskannada suddiMalappanahattiMLC K.S.NaveenNammajana.comRural Development SanghTaluk LevelUnion Office-bearers' Conferenceಎಂಎಲ್ಸಿ ಕೆ.ಎಸ್.ನವೀನ್ಒಕ್ಕೂಟದ ಪದಾಧಿಕಾರಿಗಳ ಸಮಾವೇಶಕನ್ನಡ ನ್ಯೂಸ್ಕನ್ನಡ ಸುದ್ದಿಗ್ರಾಮೀಣಾಭಿವೃದ್ಧಿ ಸಂಘಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಾಲ್ಲೂಕು ಮಟ್ಟಧರ್ಮಸ್ಥಳ ಸಂಘನಮ್ಮಜನ.ಕಾಂಮಾಳಪ್ಪನಹಟ್ಟಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ | ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿಗೆ ಜಿಲ್ಲೆಯ ಇಬ್ಬರಿಗೆ ಸ್ಥಾನ | Kannada Rajyotsava Award
Next Article ಚಿತ್ರದುರ್ಗ | ಶರಣ ಸಂಸ್ಕೃತಿ ಉತ್ಸವದಲ್ಲಿ “ನಸಾಬ್” ಚಲನಚಿತ್ರ ಪೋಸ್ಟರ್ ಬಿಡುಗಡೆ | Nasab movie
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?