Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: cards: ಇಂಡಿಯಾನಾ-ಎಸ್.ಜೆ.ಎಂ. ಹಾರ್ಟ್ ಸೆಂಟರ್ ಸಾಮಾಜಿಕ ಬದ್ದತೆ ಮಾದರಿ | ಶಾಸಕ ಡಾ.ಎಂ.ಚಂದ್ರಪ್ಪ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > cards: ಇಂಡಿಯಾನಾ-ಎಸ್.ಜೆ.ಎಂ. ಹಾರ್ಟ್ ಸೆಂಟರ್ ಸಾಮಾಜಿಕ ಬದ್ದತೆ ಮಾದರಿ | ಶಾಸಕ ಡಾ.ಎಂ.ಚಂದ್ರಪ್ಪ
ಇಂದಿನ ಸುದ್ದಿ

cards: ಇಂಡಿಯಾನಾ-ಎಸ್.ಜೆ.ಎಂ. ಹಾರ್ಟ್ ಸೆಂಟರ್ ಸಾಮಾಜಿಕ ಬದ್ದತೆ ಮಾದರಿ | ಶಾಸಕ ಡಾ.ಎಂ.ಚಂದ್ರಪ್ಪ

Nammajana Sub Editor
Last updated: 29 September 2025 7:55 PM
By Nammajana Sub Editor 5 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com |29-09-2025

ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಒತ್ತಡದ(cards) ನಡುವೆ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ತಾವಾಗಿಯೇ ಮುಂದೆ ಬಂದು ಉಚಿತ ಹೃದಯ ರೋಗ ತಪಾಸಣೆ ಕಾರ್ಡ್ ವಿತರಿಸುತ್ತಿರುವ ಇಂಡಿಯಾನಾ-ಎಸ್.ಜೆ.ಎಂ. ಹಾರ್ಟ್ ಸೆಂಟರ್‍ನ ಸಾಮಾಜಿಕ ಬದ್ದತೆ ಇತರರಿಗೆ ಮಾದರಿಯಾಗಿದೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: leather products: ಚರ್ಮ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ

ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಇಂಡಿಯಾನಾ ಎಸ್.ಜೆ.ಎಂ. ಹಾರ್ಟ್ ಸೆಂಟರ್ ಸಹಯೋಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಉಚಿತ ಹೃದಯ ರೋಗ ತಪಾಸಣೆ ಕಾರ್ಡ್‍ಗಳನ್ನು ವಿತರಿಸಿ ಅವರು ಮಾತನಾಡಿದರು.

ರಾತ್ರಿ ಹಗಲು ಎನ್ನದೇ ಬದ್ದತೆಯಿಂದ ಕೆಲಸ ನಿರ್ವಹಿಸುವ ಪತ್ರಕರ್ತರು ತಮ್ಮ ಸ್ವತಃ ಆರೋಗ್ಯ ಕಾಳಜಿಯನ್ನು ಮರೆಯುತ್ತಾರೆ. ಇದನ್ನು ಅರಿತು ಇಂಡಿಯಾನ-ಎಸ್‍ಜೆಎಂ ಹಾರ್ಟ್ ಸೆಂಟರ್ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಉಚಿತ ಓಪಿಡಿ ಸೇವೆ ಹಾಗೂ ರಿಯಾಯಿತಿ ದರದಲ್ಲಿ ಹೃದ್ರೋಗ ಶಸ್ತ್ರಚಿಕಿತ್ಸೆ ನೀಡುವ ಯೋಜನೆ ಜಾರಿಗೊಳಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ.

ಇಂತಹ ಇವರ ಸೇವಾ ಮನೋಭಾವ ಮಾದರಿಯಾಗಿದೆ. ಆರೋಗ್ಯವೇ ಭಾಗ್ಯ ಇದನ್ನು ಕಾಪಾಡಿಕೊಳ್ಳಬೇಕು. ಆರೋಗ್ಯ ಒಂದು ಇದ್ದರೇ ಬೇಕಾದ ಸಾಧನೆ ಮಾಡಬಹುದು. ನಮ್ಮಲ್ಲೇ ಮೊದಲು ಎನ್ನುವ ಧಾವಂತಕ್ಕೆ ಬಿದ್ದು ಸುದ್ದಿಯನ್ನು ಬಿತ್ತಿರಿಸುವ ಒತ್ತಡದಲ್ಲಿ ಪತ್ರಕರ್ತರು ಇದ್ದಾರೆ. ಇದಕ್ಕೆ ಬದಲಾಗಿ ಸುದ್ದಿಯ ಸತ್ಯಾಸತ್ಯತೆ ಪರಾಮರ್ಶಿಸಿ ಸುದ್ದಿ ಬಿಡುಗಡೆ ಮಾಡಲು ಮುಂದಾಗಬೇಕು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಪತ್ರಕರ್ತರಿಗೆ ಸಲಹೆ ನೀಡಿದರು.

ಇದನ್ನೂ ಓದಿ: Challakere : ಕೇವಲ 5 ದಿನದಲ್ಲಿ ಗಣತಿ ಪೂರೈಸಿದ ದಾರ‍್ಲಹಳ್ಳಿ ಶಿಕ್ಷಕಿ ಎಂ.ರಾಧ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನವದೆಹಲಿಯ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಪತ್ರಕರ್ತರು ಕೆಲಸದ ನಡುವೆ ತಮ್ಮನ್ನು ಹಾಗೂ ಕುಟುಂಬವನ್ನು ಮರೆತು ಬಿಡುತ್ತಾರೆ. ಇತ್ತೀಚಿಗೆ 40 ರಿಂದ 45 ವರ್ಷದವರು ಹೃದಯಾಘಾತಕ್ಕೆ ತುತ್ತಾಗುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣ ರಾಜ್ಯದಾದ್ಯಂತ ಚರ್ಚೆಯಲ್ಲಿತ್ತು. ಪತ್ರಕರ್ತರು ಸಹ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಜಿಲ್ಲೆಯ ಪತ್ರಕರ್ತರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ವರದಿ ಮಾಡುತ್ತೀರಿ. ಇದರ ಜೊತೆಗೆ ಇಂದಿನ ಪರಿಸ್ಥಿತಿಗಳಿಗೆ ಅನುಗುಣವಾಗಿ ಆರೋಗ್ಯದ ಕಾಳಜಿ ಕುರಿತಾದ ಲೇಖನ ಹಾಗೂ ಸುದ್ದಿಗಳನ್ನು ಸಹ ಪ್ರಕಟಿಸುವ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಬೇಕು. ಆರೋಗ್ಯವನ್ನು ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ.

ಉತ್ತಮ ಆಹಾರ ಹಾಗೂ ದೈಹಿಕ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು. ಇಂದಿನ ವಾತಾರಣ ಕಲುಷಿತವಾಗಿದೆ. ಆಹಾರ ಬೆಳೆಗಳಲ್ಲಿ ಸಹ ರಾಸಾಯನಿಕ ಪದಾರ್ಥಗಳನ್ನು ಬಳಸಲಾಗುತ್ತದೆ ಎಂದು ಬಿ.ವಿ.ಮಲ್ಲಿಕಾರ್ಜುನಯ್ಯ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: kit: ಟೂರಿಸ್ಟ್ ಗೈಡ್‍ಗಳಿಗೆ ಕಿಟ್ ವಿತರಣೆ

ಮೊಬೈಲ್ ಬಂದಾಗಿನಿಂದ ಪತ್ರಿಕೆಗಳನ್ನು ಓದುವವರ ಸಂಖ್ಯೆ ಕುಸಿಯುತ್ತಿದೆ. ಎಲ್ಲಾ ಸುದ್ದಿಗಳು ಸಹ ಮೊಬೈಲ್‍ನಲ್ಲಿ ಸಿಗುತ್ತಿವೆ. ಪತ್ರಿಕೆಗಳ ಪ್ರಸಾರ ಸಂಖ್ಯೆ ಕಡಿಮೆಯಾಗಿದೆ. ಇದರ ನಡುವೆಯೂ ಓದುಗರನ್ನು ಉಳಿಸಿಕೊಂಡು ಪತ್ರಿಕೋದ್ಯಮವನ್ನು ಸಹ ಉಳಿಸಿಕೊಳ್ಳುವ ಜವಾಬ್ದಾರಿ ವರದಿಗಾರರ ಮೇಲಿದೆ.

ಇದರ ನಡುವೆ ಪತ್ರಕರ್ತರ ಸಂಕಷ್ಟಗಳಿಗೆ ಸ್ಪಂದಿಸಿ ಇಂಡಿಯಾನಾ-ಎಸ್.ಜೆ.ಎಂ. ಹಾರ್ಟ್ ಸೆಂಟರ್ ಉಚಿತ ಹೃದಯ ರೋಗ ತಪಾಸಣೆ ಕಾರ್ಡ್ ವಿತರಿಸುವುದು ಅಭಿನಂದನಾರ್ಹವಾಗಿದೆ. ಇದರ ಸದುಪಯೋಗ ಪಡೆದುಕೊಂಡು, ನಿರ್ಲಕ್ಷ್ಯ ವಹಿಸದೆ ವರ್ಷಕ್ಕೆ ಎರಡು ಬಾರಿ ಹೃದಯ ತಪಾಸಣೆಯನ್ನು ಪತ್ರಕರ್ತರು ಮಾಡಿಸಿಕೊಳ್ಳಬೇಕು ಎಂದು ಬಿ.ವಿ.ಮಲ್ಲಿಕಾರ್ಜುನಯ್ಯ ಸಲಹೆ ನೀಡಿದರು.

ಪತ್ರಕರ್ತರ ಜೊತೆಗೆ ಪತ್ರಿಕಾ(cards) ವಿತರಕರು ಸಹ ಹಗಲಿರಲು ದುಡಿಯುತ್ತಾರೆ. ಇಂಡಿಯಾ-ಎಸ್.ಜೆ.ಎಂ ಹಾರ್ಟ್ ವಿತರಕರಿಗೂ ಉಚಿತ ತಪಾಸಣೆ ಕಾರ್ಡ್‍ಗಳನ್ನು ವಿತರಿಸುವಂತೆ ಬಿ.ವಿ.ಮಲ್ಲಿಕಾರ್ಜುನಯ್ಯ ಕೋರಿದರ.

ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜೀವನ ಶೈಲಿ ಬದಲಾವಣೆ ಹಾಗೂ ಕೆಲಸದ ಒತ್ತಡದಿಂದ 30 ರಿಂದ 40 ವರ್ಷದೊಳಗಿನ ಬಹಳಷ್ಟು ಜನರು ಹೃದಯ ಸಂಬಂಧಿತ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ನಮ್ಮ ದೇಹದಲ್ಲಿ ಹೃದಯ ಬಹಳ ಮುಖ್ಯವಾಗಿದ್ದು, ಹಾಗಾಗಿ ಕಾಲಕಾಲಕ್ಕೆ ತಪಾಸಣೆ, ಉತ್ತಮ ಜೀವನ ಶೈಲಿ ನಿರ್ವಹಣೆ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಹೃದಯದ ಆರೋಗ್ಯ ಕಾಪಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: Chitradurga today Gold Rate | ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ಮಾತನಾಡಿ, ಪತ್ರಕರ್ತರಿಗೆ ಮಾತ್ರವಲ್ಲದೆ ಪತ್ರಿಕೆಗಳ ನರನಾಡಿಗಳಾಗಿರುವ ಪತ್ರಿಕಾ ವಿತರಿಕರಿಗೂ ಸಹ ಇಂಡಿಯಾನ-ಎಸ್‍ಜೆಎಂ ಹಾರ್ಟ್ ಸೆಂಟರ್ ವತಿಯಿಂದ ಉಚಿತ ಹೃದಯ ರೋಗ ತಪಾಸಣಾ ಕಾರ್ಡ್ ಸೌಲಭ್ಯ ಘೋಷಣೆ ಮಾಡಿರುವುದು ಉತ್ತಮ ಬೆಳವಣಿಗೆ ಹಾಗೂ ತುಂಬಾ ಅವಶ್ಯಕವೂ ಹೌದು ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತರು ನಿತ್ಯವೂ ಒತ್ತಡದ ನಡುವೆ ಕಾರ್ಯನಿರ್ವಹಿಸುತ್ತಿರುತ್ತಾರೆ. ಕಳೆದ ಆರೇಳು ತಿಂಗಳ ಈಚೆಗೆ ಶಿವಮೊಗ್ಗದ ಇಬ್ಬರು ಪತ್ರಕರ್ತರು ಹಾಗೂ ಬಳ್ಳಾರಿಯಲ್ಲಿ ಒರ್ವ ಪತ್ರಕರ್ತರು ಹೃದಯಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ. ನಿಯಮಿತವಾಗಿ ಹೃದ್ರೋಗ ತಪಾಸಣೆ ತಪಾಸಣೆ ಮಾಡಿಸಿಕೊಂಡಿದ್ದರೆ ಬಹುಶಃ ಅಂತಹ ಅವಘಡಗಳು ಸಂಭವಿಸುತ್ತಿರಲಿಲ್ಲ. ಹಾಗಾಗಿ ಎಲ್ಲ ಮಾಧ್ಯಮ ಮಿತ್ರರು ನಿಯಮಿತವಾಗಿ ಹೃದ್ರೋಗ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸೌಲಭ್ಯವನ್ನು ಸದುಪಯೋಗ ಪಡೆಸಿಕೊಂಡು ಹೃದಯದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್.ಅಹೋಬಳಪತಿ ಮಾತನಾಡಿ, ಪತ್ರಕರ್ತರು ಸುದ್ದಿಗಳಿಗೆ ತೆರಳಿದಾಗ ಅಪಘಾತಗಳಿಗೆ ಒಳಗಾದ ಸಂದರ್ಭಗಳನ್ನು ಗಮನಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರರ್ಕರ ಸಂಘದಿಂದ ಮೊದಲ ಬಾರಿಗೆ ಪತ್ರಕರ್ತರಿಗೆ ಅಪಘಾತ ವಿಮೆ ಮಾಡಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಸಂಘದ ನಿಧಿಯ ಲಭ್ಯತೆ ನೋಡಿಕೊಂಡು ಸಂಘದಿಂದಲೇ ಅಪಘಾತ ವಿಮೆ ಭರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಇಂಡಿಯಾನ-ಎಸ್‍ಜೆಎಂ ಹಾರ್ಟ್ ಸೆಂಟರ್ ಕಾರ್ಯನಿರ್ವಾಹಕ ಅಧಿಕಾರಿ ರೂಪೇಶ್ ಕುಮಾರ್ ಶೆಟ್ಟಿ ಮಾತನಾಡಿ, ನನ್ನ ಅಧಿಕಾರದ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕೆಲಸ ಮಾಡಿದ ತೃಪ್ತಿ ಇದೆ.

ಪತ್ರಕರ್ತರಿಗೆ ಉಚಿತ ಆರೋಗ್ಯ ಹೃದಯ ರೋಗ ತಪಾಸಣಾ ಕಾರ್ಡ್ ವಿತರಿಸಲಾಗಿದ್ದು, ಈ ಕಾರ್ಡ್‍ದಾರರಿಗೆ ಒಪಿಡಿ ಸಂಪೂರ್ಣವಾಗಿ ಉಚಿತವಾಗಿದ್ದು, ವರ್ಷದಲ್ಲಿ ಎಷ್ಟು ಬಾರಿಯಾದರೂ ಈ ಸೇವೆ ಪಡೆಯಬಹುದಾಗಿದೆ. ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಶೇ.20ರಷ್ಟು ರಿಯಾಯಿತಿ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ ಅವರು, ಪತ್ರಕರ್ತರಿಗೆ ನೀಡಿರುವಂತೆ ಪತ್ರಿಕಾ ವಿತರಿಕರಿಗೂ ಸಹ ಉಚಿತ ಹೃದಯ ರೋಗ ತಪಾಸಣಾ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಘೋಷಿಸಿದರು.

ಇದನ್ನೂ ಓದಿ: accident: ಐಮಂಗಲ ಬಳಿ KSRTC ಬಸ್ – ಲಾರಿ ನಡುವೆ ಅಪಘಾತ | ಸಂಸದ ಗೋವಿಂದ ಕಾರಜೋಳ ಜಿಲ್ಲಾಸ್ಪತ್ರೆ ಭೇಟಿ ನೀಡಿ, ಗಾಯಾಳುಗಳ ವಿಚಾರಣೆ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪತ್ರಕರ್ತರ ಕ್ಷೇಮಕ್ಕಾಗಿ ಅನೇಕ ಆರೋಗ್ಯ ಶಿಬಿರಗಳನ್ನು ನಡೆಸಲಾಗಿದೆ. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಹಾಗೂ ಜಿಲ್ಲಾ ಸಂಘದ ವತಿಯಿಂದಲೂ ಪರಿಹಾರ ನೀಡಲಾಗಿದೆ.

ಇತ್ತೀಚೆಗೆ ಪಾಶ್ರ್ವವಾಯುಗೆ(cards) ತುತ್ತಾಗಿದ್ದ ಪತ್ರಕರ್ತ ಎನ್.ಎಸ್.ಸುನೀಲ್ ರೆಡ್ಡಿ ಅವರಿಗೆ ಮುಖ್ಯಮಂತ್ರಿಗಳ ಪರಿಹಾರದಿಂದ ರೂ.4 ಲಕ್ಷ ಹಾಗೂ ನಿವೃತ್ತ ಪತ್ರಕರ್ತ ಬಸವರಾಜ್ ಅವರಿಗೆ ರೂ.55 ಸಾವಿರ ಮಂಜೂರು ಮಾಡಿಸಲಾಗಿದೆ. ಸಂಘದ ಕಟ್ಟಡದ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷ ಸಿ.ಪಿ.ಮಾರುತಿ, ಕಾರ್ಯದರ್ಶಿ ವಿರೇಶ್ ವಿ ಅಪ್ಪು, ಖಜಾಂಚಿ ಡಿ. ಕುಮಾರಸ್ವಾಮಿ, ಕಾರ್ಯಕಾರಿ ಸಮಿತಿ ಸದಸ್ಯರಾದ ನಾಗೇಶ್, ಹೆಚ್.ತಿಪ್ಪೇಸ್ವಾಮಿ, ಪರಶುರಾಂಪುರ ಮಂಜುನಾಥ್, ರವಿ ಉಗ್ರಾಣ, ಸಿ. ರಾಜಶೇಖರ್, ನವೀನ್ ಕುಮಾರ್, ಹಿರಿಯ ಪತ್ರರ್ಕರಾದ ಹರಿಯಬ್ಬೆ ಸಿ ಹೆಂಜಾರಪ್ಪ, ಶ.ಮಂಜುನಾಥ್ ಸೇರಿದಂತೆ ಮತ್ತಿತರರು ಇದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:CardChitradurgaChitradurga NewsFree heart checkupIndiana-S.J.M. Heart CenterJournalistsKannada NewsMLA M. ChandrappaNammajana.comಇಂಡಿಯಾನಾ-ಎಸ್.ಜೆ.ಎಂ ಹಾರ್ಟ್ ಸೆಂಟರ್ಉಚಿತ ಹೃದಯ ತಪಾಸಣೆಕನ್ನಡ ನ್ಯೂಸ್ಕನ್ನಡ ಸುದ್ದಿಕಾರ್ಡ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಪತ್ರಕರ್ತರುಶಾಸಕ ಎಂ.ಚಂದ್ರಪ್ಪ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article leather products: ಚರ್ಮ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ
Next Article Dina Bhavishya | 30 ಸೆಪ್ಟೆಂಬರ್ 2025 | ದಿನ ಭವಿಷ್ಯ | ಯಾವ್ಯಾವ ರಾಶಿಗೆ ರಾಜಯೋಗ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?