Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: DC venkatesh: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಯ | ಹತ್ತು ದಿನಗಳ ಶೋಷಿತರ ಧರಣಿ ಸತ್ಯಾಗ್ರಹ ಅಂತ್ಯ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > DC venkatesh: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಯ | ಹತ್ತು ದಿನಗಳ ಶೋಷಿತರ ಧರಣಿ ಸತ್ಯಾಗ್ರಹ ಅಂತ್ಯ
ಇಂದಿನ ಸುದ್ದಿ

DC venkatesh: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಯ | ಹತ್ತು ದಿನಗಳ ಶೋಷಿತರ ಧರಣಿ ಸತ್ಯಾಗ್ರಹ ಅಂತ್ಯ

Nammajana Sub Editor
Last updated: 13 August 2025 10:51 PM
By Nammajana Sub Editor 2 Min Read
Share
SHARE

Chitradurga News | Nammajana.com | 13-08-2025

ನಮ್ಮಜನ.ಕಾಂ, ಚಳ್ಳಕೆರೆ: ಕಳೆದ (DC venkatesh) 10 ದಿನಗಳಿಂದ ತಾಲ್ಲೂಕಿನ ದೊಡ್ಡಬೀರನಹಳ್ಳಿ ಮತ್ತು ಕೋನಿಗರಹಳ್ಳಿ ಗ್ರಾಮಗಳ ಶೋಷಿತ ಸಮುದಾಯಗಳು ತಾಲ್ಲೂಕು ಕಚೇರಿ ಮುಂದೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಹಂತ, ಹಂತವಾಗಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.

ಇದನ್ನೂ ಓದಿ: ಹಿರಿಯ ನಾಗರಿಕರ ನಿರ್ಲಕ್ಷ್ಯ ಸಲ್ಲದು : ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ್

ಹಂತ ಹಂತವಾಗಿ ಬೇಡಿಕೆ ಹಿಡೇರಿಕೆಗೆ ಬದ್ದ

ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾತನಾಡಿ, ನಿಮ್ಮೆಲ್ಲಾ ಬೇಡಿಕೆಗಳ ಬಗ್ಗೆ ಸಂಪೂರ್ಣ ವರದಿ ಪಡೆದಿರುವೆ, ಹಲವಾರು ಬೇಡಿಕೆಗಳು ನಮ್ಮ ಹಂತದಲ್ಲೇ ಈಡೇರಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಕರೆದು ಅವರೊಂದಿಗೆ ಚರ್ಚಿಸಿ ಸೌಲಭ್ಯಗಳನ್ನು ಹಂತ, ಹಂತವಾಗಿ ವಿತರಿಸಲಾಗುವುದು. ಯಾವುದೇ ಕಾರಣಕ್ಕೂ ನಿಮಗೆ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯ ನೀಡುವಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.

ಕನಿಷ್ಠ ಮೂಲಭೂತ ಸೌಲಭ್ಯಕ್ಕೆ ರಾಜಗಿರಿ ಆಗ್ರಹ

ದಲಿತ ಸಂಘರ್ಷಸಮಿತಿ ರಾಜ್ಯಾಧ್ಯಕ್ಷ ಟಿ.ಡಿ.ರಾಜಗಿರಿ, ಕೋನಿಗರಹಳ್ಳಿ ಮತ್ತು ದೊಡ್ಡ ಬೀರನಹಳ್ಳಿ ಗ್ರಾಮಗಳಲ್ಲಿ ದೌರ್ಜನ್ಯಕ್ಕೀಡಾದ ಕುಟುಂಬಗಳಿಗೆ ಕನಿಷ್ಠ ಪಕ್ಷ ಮೂಲಭೂತ ಸೌಕರ್ಯಗಳನ್ನು ತಾಲ್ಲೂಕು ಆಡಳಿತ ವಹಿಸಿಲ್ಲ, ಹಲವಾರು ಬಾರಿ ಮನವಿ ಮಾಡಿದರೂ ಸೂಕ್ತ ಸ್ಪಂದನೆ ಇಲ್ಲ.

ನಿವೇಶನ, ಜಮೀನು, ಪ್ರತ್ಯೇಕ ನ್ಯಾಯಬೆಲೆ(DC venkatesh) ಅಂಗಡಿ, ಗಂಗಾಕಲ್ಯಾಣವೂ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳಲ್ಲಿ ದೌರ್ಜನ್ಯಕೀಡಾದ ಕುಟುಂಬಗಳಿಗೆ ಮೊದಲ ಪ್ರಾಧ್ಯಾನ್ಯತೆ ನೀಡಿ ಸೌಲಭ್ಯಗಳನ್ನು ಕೂಡಲೇ ವಿತರಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ವಿನಂತಿಸಿದರು.

ಇದನ್ನೂ ಓದಿ: ವಾಣಿವಿಲಾಸ ಸಾಗರ ಇಂದಿನ ನೀರಿನ ಮಟ್ಟ

ಶೋಷಿತ ಕುಟುಂಬಗಳಿಗೆ ಸರ್ಕಾರದಿಂದ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಹಂತ, ಹಂತವಾಗಿ ನೀಡುವ ಭರವಸೆ ನೀಡಿದ್ಧಾರೆ. ನಮ್ಮೆಲ್ಲಾ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.

ಅವರ ಭೇಟಿ ನೀಡಿ ನಮಗೂ ಸಹ(DC venkatesh) ವಿಶ್ವಾಸ ಬಂದಿದೆ. ಅವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಮುಷ್ಕರವನ್ನು ಇಂದಿನಿಂದಲೇ ನಿಮ್ಮೆಲ್ಲರ ಒಪ್ಪಿಗೆ ಪಡೆದು ಹಿಂಪಡೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಮುದಾಯ ಪರವಾಗಿ ಯಾವುದೇ ಹೋರಾಟ ನಡೆದರೂ ತಾವೆಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಇಳಿಕೆ

ತಹಶೀಲ್ದಾರ್‌ ರೇಹಾನ್‌ಪಾಷ, ಸಮಾಜ ಕಲ್ಯಾಣಾಧಿಕಾರಿ ದೇವ್ಲಾನಾಯ್ಕ, ಪೌರಾಯುಕ್ತ ಜಗರೆಡ್ಡಿ, ಎಇಇ ಕೆ.ವಿನಯ್‌, ಪರಿಸರ ಇಂಜಿನಿಯರ್‌ ನರೇಂದ್ರಬಾಬು, ಕಂದಾಯಾಧಿಕಾರಿ ತಿಪ್ಫೇಸ್ವಾಮಿ, ರಾಜೇಶ್‌, ಗ್ರಾಮಲೆಕ್ಕಾಧಿಕಾರಿ ಹಿರಿಯಪ್ಪ, ಪ್ರಕಾಶ್‌, ಪ್ರತಿಭಟನಕಾರರಾದ ತಿಮ್ಮಪ್ಪ, ಹರೀಶ್‌, ತಿಪ್ಫೇಸ್ವಾಮಿ, ರತ್ನಮ್ಮ, ಪವಿತ್ರಮ್ಮ, ಪಾರ್ವತಮ್ಮ ಮುಂತಾದವರು ಉಪಸ್ಥಿತರಿದ್ದರು.

You Might Also Like

ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

TAGGED:ChitradurgaChitradurga NewsDharani SatyagrahaDistrict Collector T. VenkateshKannada NewsNammajana.comPromiseProtestVisitಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಧಿಕಾರಿ ಟಿ.ವೆಂಕಟೇಶ್ಧರಣಿ ಸತ್ಯಾಗ್ರಹನಮ್ಮಜನ.ಕಾಂಪ್ರತಿಭಟನೆಭರವಸೆಭೇಟಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Senior citizens: ಹಿರಿಯ ನಾಗರಿಕರ ನಿರ್ಲಕ್ಷ್ಯ ಸಲ್ಲದು : ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ್
Next Article ಯಲಗಟ್ಟೆಗೊಲ್ಲರಹಟ್ಟಿ ಪೀಡರ್‌ ಚಾನಲ್‌ ಒಡೆದು ಜಮೀನಿಗೆ ನುಗ್ಗಿದ ನೀರು : Peeder channel broke
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್
ಕ್ರೈಂ ಸುದ್ದಿ
CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ
Blog ಇಂದಿನ ಸುದ್ದಿ
ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case
ಕ್ರೈಂ ಸುದ್ದಿ
ಚಿತ್ರದುರ್ಗ Varshita murder | ವರ್ಷಿತಾಳ ಕೊಲೆ ಕೇಸ್, ಸಚಿವ ಡಿ.ಸುಧಾಕರ್ ಹೇಳಿದ್ದೇನು | 5 ಲಕ್ಷ ಪರಿಹಾರ ಘೋಷಣೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?