
Chitradurga news|nammajana.com|22-03-2025
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ರಾಜಕಾರಣದಲ್ಲಿ ಸ್ಪೇಷಲ್ ರಾಜಕಾರಣಿ ಎಂಬ ಖ್ಯಾತಿ ಪಡೆದಿರುವ ಸರಳ (Doctorate) ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿರುವುದಕ್ಕೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತನ್ನ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನ ಮಾಡಲಿದೆ. ಇದರಲ್ಲಿ ನಮ್ಮ (Doctorate) ನಾಯಕರು ಮತ್ತು ಸಹೋದರರು ಆದ ಸತೀಶ್ ಅಣ್ಣ ಅವರಿಗೆ ಡಾಕ್ಟರೇಟ್ ದೊರಕಿರುವುದು ಅವರ ಸರಳತೆ ಸಾಕ್ಷಿಯಾಗಿದ್ದು ನಮಗೆ ಸಂತೋಷ ತಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: Chitraduga clubs | 22 ಕ್ಲಬ್ಗಳ ಮೇಲೆ ಪೋಲಿಸ್ ದಾಳಿ
ಕಾರ್ಯಕ್ರಮ
ಗೌರವ ಡಾಕ್ಟರೇಟ್ ಗೆ ಭಾಜನರಾಗಿರುವ ಸತೀಶ್ ಜಾನಕಿಹೊಳಿ ಸೇರಿ ಮೂವರು ಗಣ್ಯರಿಗೆ ಕರ್ನಾಟಕ ರಾಜ್ಯ ಮುಕ್ತ (Doctorate) ವಿಶ್ವವಿದ್ಯಾಲಯ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲು ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹಲೋಥ್ ಅವರು ಒಪ್ಪಿಗೆ ನೀಡಿದ್ದು, ರಾಜ್ಯಪಾಲರ ಅಧೀನ ಕಾರ್ಯದರ್ಶಿ ಬಿ.ಬಿ. ಪ್ರಶಾಂತ್ ಕುಮಾರ್ ಅವರು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗೆ ಪತ್ರ ಬರೆದು ತಿಳಿಸಿದ್ದಾರೆ.