Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: E account | ಇ-ಖಾತಾ ಪಡೆಯಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ | ಈ ಖಾತಾ ಮಾಹಿತಿ ಇಲ್ಲಿದೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > E account | ಇ-ಖಾತಾ ಪಡೆಯಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ | ಈ ಖಾತಾ ಮಾಹಿತಿ ಇಲ್ಲಿದೆ
ಇಂದಿನ ಸುದ್ದಿ

E account | ಇ-ಖಾತಾ ಪಡೆಯಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ | ಈ ಖಾತಾ ಮಾಹಿತಿ ಇಲ್ಲಿದೆ

Editor Nammajana
Last updated: 22 February 2025 7:03 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|22-2-2025

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ ಮತ್ತು ನಿವೇಶನಗಳ ಮಾಲೀಕರು ನಗರಾಭಿವೃದ್ಧಿ ಇಲಾಖೆಯಿಂದ (E account) ನಿಯಮಾನುಸಾರ ಅವಕಾಶ ಕಲ್ಪಿಸಿಕೊಟ್ಟಂತೆ, ಮೂರು ತಿಂಗಳ ಒಳಗಾಗಿ ಅಂದರೆ 2025ರ ಮೇ 10ರೊಳಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದ್ದಾರೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 110 ರ ಅನ್ವಯ ‘ಎ’ ರಿಜಿಸ್ಟರ್‍ನಲ್ಲಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾದ ಬಡಾವಣೆಯಲ್ಲಿನ ಸ್ವತ್ತುಗಳಿಗೆ ಇ-ಖಾತಾ ನೀಡಲಾಗುತ್ತದೆ. ಆದರೆ, ಭೂ ಪರಿವರ್ತನೆ ಆಗದೇ ಉಪ-ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿದ್ದು, ಆದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ ಅಥವಾ ಕಟ್ಟಡಗಳಿಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ. ಈ ಅವಕಾಶವನ್ನು ಒಮ್ಮೆ ಮಾತ್ರ ನೀಡಲಾಗುತ್ತಿದ್ದು, ಕಟ್ಟಡ (E account) ನಿವೇಶನಗಳ ಮಾಲೀಕರು ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.

“ಬಿ” ರಿಜಿಸ್ಟರ್‍ನಲ್ಲಿ ದಾಖಲಿಸುವ ಆಸ್ತಿಗಳಿಗೆ 2024-25ನೇ ಸಾಲಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ತದನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುತ್ತದೆ.  ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಪ್ರಕರಣ 106 ಕ್ಕೆ ತಿದ್ದುಪಡಿ ತರಲಾದಂತೆ ದಿನಾಂಕ: 10.09.2024 ರಿಂದ ಜಾರಿಗೆ ಬಂದಂತೆ ಈ  ತೆರಿಗೆಯನ್ನು ವಿಧಿಸಲಾಗುತ್ತದೆ.

“ಬಿ” ರಿಜಿಸ್ಟರ್‍ನಲ್ಲಿ ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು, ಸರ್ಕಾರದ ನಿಗಮ ಮಂಡಳಿಗಳ ಜಾಗಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಜಾಗಗಳು ಹೊರತುಪಡಿಸಿ ದಿನಾಂಕ: 10.09.2024 ರ ಪೂರ್ವಕ್ಕೆ ನೋಂದಾಯಿತವಾದ ಭೂ ಪರಿವರ್ತನೆ ಆಗದೇ ಉಪ ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ (E account) ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ, ಕಟ್ಟಡಗಳಿಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ.

ಆದುದರಿಂದ, ಇದುವರೆಗೆ ಇ-ಖಾತಾ ಪಡೆಯದ ಅಂತಹ ಎಲ್ಲಾ ಸ್ವತ್ತುಗಳ ಮಾಲೀಕರು ಕೂಡಲೇ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಪರ್ಕಿಸಿ ಅಥವಾ ಈ ಕಛೇರಿಗಳಿಂದ ಏರ್ಪಡಿಸಲಾಗುವ ವಾರ್ಡ್‍ವಾರು ಕ್ಯಾಂಪ್‍ಗಳಿಗೆ ಭೇಟಿ ನೀಡಿ ‘ಬಿ’ ರಿಜಿಸ್ಟರ್‍ನಲ್ಲಿ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿ, ಸರ್ಕಾರ ನೀಡಿರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದ್ದಾರೆ.

ಇದನ್ನೂ ಓದಿ: ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಉದ್ಯೋಗ, ವ್ಯಾಪರದಲ್ಲಿ ಲಾಭ? | Dina Bhavishya

 ಇ-ಖಾತಾಗೆ ಸಂಬಂಧಿಸಿದಂತೆ ಸಹಾಯವಾಣಿ

ಸ್ಥಾಪಿಸಲಾಗಿದ್ದು, ಚಿತ್ರದುರ್ಗ ನಗರಸಭೆ-08194-222401, ಕೆ.ಕಿರಣ್ ಕುಮಾರ್-9606281164. ಚಳ್ಳಕೆರೆ ನಗರಸಭೆ-08195-200093, ಎಸ್.ವೀರಭದ್ರಪ್ಪ-8050551355. ಹಿರಿಯೂರು ನಗರಸ¨s-08193-296220, ಮಲ್ಲಿಕಾರ್ಜುನ ಸ್ವಾಮಿ-9620287514. ಹೊಸದುರ್ಗ ಪುರಸಭೆ- 08199-295095, ಎನ್.ವಿನಯ್-9353833372. ಹೊಳಲ್ಕೆರೆ ಪುರಸಭೆ-08191-275861, ಎಂ.ದೇವರಾಜ್-9845912244.ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ-08198-229044, ಎಲ್.ಹೆಚ್.ತಿಪ್ಪೇಸ್ವಾಮಿ-9845174196, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ-08190-200232, (E account) ಆರ್.ಸಂದೀಪ್-9606307100 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

TAGGED:ApplicationChitradurga DistrictCollector CallE AccountT. Venkateshಅರ್ಜಿಇ ಖಾತೆಚಿತ್ರದುರ್ಗ ಜಿಲ್ಲೆಜಿಲ್ಲಾಧಿಕಾರಿ ಕರೆಟಿ.ವೆಂಕಟೇಶ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಉದ್ಯೋಗ, ವ್ಯಾಪರದಲ್ಲಿ ಲಾಭ? | Dina Bhavishya
Next Article ದಿನ ಭವಿಷ್ಯ , ಯಾವ್ಯಾವ ರಾಶಿಗೆ ಉದ್ಯೋಗ, ವಿವಾಹ ಯೋಗ? | Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?