Chitradurga news|nammajana.com|9-7-2025
ನಮ್ಮಜನ.ಕಾಂ, ಮೊಳಕಾಲ್ಮುರು: ತಾಲೂಕಿನ ಮಲ್ಲಹಳ್ಳಿಯ (Farmers) ಹೋರಾಟಗಾರ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ದಾನಸೂರ ನಾಯಕ (46) ಮಂಗಳವಾರ ಹಾವು ಕಚ್ಚಿಮೃತರಾಗಿದ್ದಾರೆ.
ಮಂಗಳವಾರ ಬೆಳಗ್ಗೆ ಅವರ ಕೋಳಿ ಫಾರಂನಲ್ಲಿ ಹಾವು ಕಚ್ಚಿದೆ. ನಾಟಿ ಔಷಧಿ ಕೊಡಿಸಲಾಗಿತ್ತು. ಆದರೂ ಆರೋಗ್ಯದಲ್ಲಿ (Farmers) ಏರುಪೇರಾದ ಕಾರಣ ಬಳ್ಳಾರಿ ವಿಮ್ಸ್ ಆಸ್ಪತ್ರೆ ಕರೆದೊಯ್ಯುವಾಗ ದಾರಿ ಮಧ್ಯೆ ಮೃತರಾಗಿದ್ದಾರೆ.

ಮೃತ ದಾನಸೂರ ನಾಯಕ ಕಳೆದ ಎರಡು ದಶಕಗಳಿಂದಲೂ ತಾಲೂಕಿನ ನಾನಾ ಸಮಸ್ಯೆಗಳಿಗೆ ಧ್ವನಿಯಾಗಿ ಹೋರಾಟದಲ್ಲಿ ತೊಡಗಿದ್ದರು. ಸೋಮವಾರ ತಾಲೂಕಿನ ಹಾನಗಲ್ ಗ್ರಾಪಂ ವ್ಯಾಪ್ತಿಯ ಸುಲೇನಹಳ್ಳಿಯಲ್ಲಿ ಚರಂಡಿ ನಿರ್ಮಿಸುವಂತೆ ಒತ್ತಾಯಿಸಿ ರಸ್ತೆ ತಡೆಮಾಡಿ ಪ್ರತಿಭಟಿಸಿದ್ದರು.
ಇದನ್ನೂ ಓದಿ: Municipal Council | ನಗರಸಭೆ ಉಪಾಧ್ಯಕ್ಷೆ ರಾಜೀನಾಮೆ
ಇವರ ಅಂತ್ಯ ಸಂಸ್ಕಾರವು ಗ್ರಾಮದ ರುದ್ರಭೂಮಿಯಲ್ಲಿ ಬುಧವಾರ (Farmers) ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252