Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Fasal Bhima Scheme: ಬೆಳೆವಿಮೆ ನೋಂದಣಿ ಪ್ರಕ್ರಿಯೆ ಆರಂಭ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Fasal Bhima Scheme: ಬೆಳೆವಿಮೆ ನೋಂದಣಿ ಪ್ರಕ್ರಿಯೆ ಆರಂಭ
ಇಂದಿನ ಸುದ್ದಿ

Fasal Bhima Scheme: ಬೆಳೆವಿಮೆ ನೋಂದಣಿ ಪ್ರಕ್ರಿಯೆ ಆರಂಭ

Editor Nammajana
Last updated: 1 June 2024 18:29
By Editor Nammajana 2 Min Read
Share
SHARE
Chitradurga news |nammajana.com|1-6-2024
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ನೊಂದಣಿಯಲ್ಲಿ (Fasal Bhima Scheme) ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

ನೀರಾವರಿ ಮತ್ತು ಮಳೆಯಾಶ್ರಿತ ಬೆಳೆಗಳ ವಿವರ ಇಲ್ಲಿದೆ ( Fasal Bhima Scheme)

ಹೆಸರು (ಮಳೆ ಆಶ್ರಿತ), ಈರುಳ್ಳಿ (ನೀರಾವರಿ) ಬೆಳೆ ವಿಮಾ ನೊಂದಣಿಗೆ  2024ರ ಜುಲೈ 15 ಕೊನೆಯ ದಿನ. ಮುಸುಕಿನ ಜೋಳ (ನೀರಾವರಿ)(ಮಳೆಯಾಶ್ರಿತ), ಜೋಳ (ನೀರಾವರಿ)(ಮಳೆಯಾಶ್ರಿತ), ಸಜ್ಜೆ(ಮಳೆಯಾಶ್ರಿತ),  ಸಾವೆ(ಮಳೆಯಾಶ್ರಿತ), ತೊಗರಿ(ಮಳೆಯಾಶ್ರಿತ),  ಹುರುಳಿ(ಮಳೆಯಾಶ್ರಿತ),  ಸೂರ್ಯಕಾಂತಿ(ನೀರಾವರಿ)(ಮಳೆಯಾಶ್ರಿತ),  ಎಳ್ಳು(ಮಳೆಯಾಶ್ರಿತ), ನೆಲಗಡಲೆ(ಶೇಂಗಾ)(ನೀರಾವರಿ) (ಮಳೆಯಾಶ್ರಿತ),  ಹತ್ತಿ(ನೀರಾವರಿ)(ಮಳೆಯಾಶ್ರಿತ),  ಟೊಮ್ಯಾಟೋ,  ಈರುಳ್ಳಿ(ಮಳೆಯಾಶ್ರಿತ), ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ) ಬೆಳೆಗಳಿಗೆ ವಿಮೆ ನೊಂದಣಿಗೆ 2024ರ ಜುಲೈ 31 ಕೊನೆಯ ದಿನವಾಗಿದೆ.
ಭತ್ತ (ನೀರಾವರಿ) ರಾಗಿ(ನೀರಾವರಿ) (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ) ಬೆಳೆಗಳ ವಿಮಾ ನೊಂದಣಿಗೆ 2024ರ ಆಗಸ್ಟ್ 16 ಕೊನೆಯ ದಿನವಾಗಿದೆ. ಈ ಎಲ್ಲಾ ಬೆಳೆಗಳಿಗೆ (Fasal Bhima Scheme) ವಿಮೆಗೆ ನೋಂದಾಯಿಸಲು ಅಧಿಸೂಚನೆ ಮಾಡಲಾಗಿದ್ದು ತಮ್ಮ ಹೋಬಳಿ ಮಟ್ಟದ ಬೆಳೆಯ ವಿವರವನ್ನು ಸಂಬಂಧಪಟ್ಟ ಕೃಷಿ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ.

ಬೆಳೆ ಸಾಲ ಮಂಜೂರಾದ ಎಲ್ಲಾ ರೈತರಿಗೆ ಈ ಯೋಜನೆ ಕಡ್ಡಾಯ (Fasal Bhima Scheme)

ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಲಾಗುವುದು. ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ (Fasal Bhima Scheme) ಯೋಜನೆಯಿಂದ ಕೈಬಿಡಲಾಗುವುದು.
ಆರ್ಥಿಕ ಸಂಸ್ಥೆಗಳು, ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ (Common Service Centers)  ಗಳಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಾಯಿಸಿದಾಗ ಬೆಳೆ ವಿಮೆ ಪ್ರಸ್ತಾವನೆಯನ್ನು ಹಾಗೂ ವಿಮಾ ಕಂತನ್ನು ನಿಗಧಿತ ಸಮಯದೊಳಗೆ ನಿಯಮಾನುಸಾರ ಅನುಷ್ಟಾನ ವಿಮಾ ಸಂಸ್ಥೆಗಳಿಗೆ ವರ್ಗಾಯಿಸಲು ಕ್ರಮಕೈಗೊಳ್ಳತಕ್ಕದ್ದು, ನೋಂದಣಿ ಪ್ರಕ್ರಿಯೆಯ ಹಂತದಲ್ಲಿ ಮೇಲೆ ತಿಳಿಸಿದ ಸಂಸ್ಥೆಗಳ ನಿರ್ಲಕ್ಷದಿಂದ ಯಾವುದೇ ಲೋಪ ದೋಷಗಳು ಉಂಟಾದಲ್ಲಿ ಅದರಿಂಗಾಗುವ ಬೆಳೆ ವಿಮೆ ಪರಿಹಾರ (Fasal Bhima Scheme) ವ್ಯಾಜ್ಯಗಳಿಗೆ ಸಂಬಂಧಿಸಿದ ಸಂಸ್ಥೆಗಳೆ ನೇರ ಹೊಣೆಗಾರರಾಗಿರುತ್ತಾರೆ.
ಆಸಕ್ತ ರೈತರು ತಮ್ಮ ವ್ಯಾಪ್ತಿಯ ಬ್ಯಾಂಕುಗಳಲ್ಲಿ ಹಾಗೂ ಅನುಮೋದಿತ ಸಾರ್ವಜನಿಕ ಸೇವಾ ಕೇಂದ್ರಗಳಲ್ಲೂ ವಿಮೆಗೆ ನೋಂದಣಿ ಮಾಡಬಹುದಾಗಿದೆ. ಚಿತ್ರದುರ್ಗ ಜಿಲ್ಲೆಗೆ Agriculture Insurance Company of India Limited ಅನುಷ್ಟಾನ ಸಂಸ್ಥೆಯಾಗಿರುತ್ತದೆ.ರೈತರು ನೋಂದಾಣಿಗಾಗಿ ಕಡ್ಡಾಯವಾಗಿ FRUITS  ID (FID) ಹೊಂದಿರಬೇಕು.
ಇದನ್ನೂ ಓದಿ: Adarsh ​​Vidyalaya: ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಆಸಕ್ತ ರೈತ ಬಾಂದವರು ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಲು ವಿನಂತಿಸಿದೆ. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೋಂದಾಣಿಯಲ್ಲಿ (Fasal Bhima Scheme) ತಪ್ಪುಗಳು ಸಂಭವಿಸಿ, ವಿಮೆ ಪರಿಹಾರ ಬಾರದಿರುವ ಸಂಭವವಿರುತ್ತದೆ. ಇದಕ್ಕೆ ಅವಕಾಶ ಕೊಡದೇ ಸಕಾಲದಲ್ಲಿ ನೋಂದಾವಣೆ ಮಾಡಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Chitradurga NewsCrop InsuranceEnrollment StartfarmerFasal Bhima YojanaKannada Newskannada suddiLatest NewsNammajana.comReliefToday's Newsಇಂದಿನ ಸುದ್ದಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೊಂದಣಿ ಪ್ರಾರಂಭಪರಿಹಾರಫಸಲ್ ಭೀಮಾ ಯೋಜನೆಬೆಳೆ ವಿಮೆರೈತಹೊಸ ಸುದ್ದಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adarsh ​​Vidyalaya: ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
Next Article Dina Bhavishya: ಇಂದಿನ ರಾಶಿ ಭವಿಷ್ಯ 2-6-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?