Chitradurga news|nammajana.com|15-6-2024
ನಮ್ಮಜನ.ಕಾಂ, ಚಿತ್ರದುರ್ಗ: ಯಾರು ತಪ್ಪು ಮಾಡಿದರು ಅದು ತಪ್ಪೇ ದೊಡ್ಡ ವ್ಯಕ್ತಿ , ಚಿಕ್ಕ ವ್ಯಕ್ತಿ ಎಂಬ ಪ್ರಶ್ನೆ ಇಲ್ಲ, ಕಾನೂನಿಗೆ ಯಾರು ದೊಡ್ಟವರಲ್ಲ, ನಾವು ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇವೆ ಎಂದು ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಹೇಳಿದರು.
ನಗರದ ಬಿಗ್ ಬಾಸ್ ಹೋಟೇಲ್ ನಲ್ಲಿ ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber Association visit Chitradurga) ವತಿಯಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಐತಿಹಾಸಿಕ ಚಿತ್ರದುರ್ಗದಲ್ಲಿ ಈ ರೀತಿಯ ಪತ್ರಿಕಾಗೋಷ್ಠಿ ನಡೆಸುತ್ತಿರುವುದು ದುಃಖ ತಂದಿದೆ. ಚಿತ್ರದುರ್ಗ ನಗರದ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಧೈರ್ಯ ತುಂಬಲು ಬಂದಿದ್ದೇವೆ.

ಚಲನಚಿತ್ರ ಮಂಡಳಿಯಿಂದ ದರ್ಶನ್ ಅವರನ್ನು ಬ್ಯಾನ್ ಮಾಡುವುದು ನಮ್ಮ ಕೈಯಲ್ಲಿ ಇಲ್ಲ, ಆದರು ಕಲಾವಿದರ ಸಂಘದ ಜೊತೆ ಮಾತನಾಡಿ ತಿರ್ಮಾನ ಕೈಗೊಳ್ಳುತ್ತೇವೆ.
ಚಿತ್ರರಂಗದಲ್ಲಿ ಕಾರ್ಮಿಕರು ಬಗ್ಗೆ ಚಿಂತನೆಯನ್ನು ಮಾಡಬೇಕಿದೆ. ಯಾವುದೇ ತಿರ್ಮಾನಕ್ಕೆ ಮುಂದಿನ ಎಲ್ಲಾ ಪರಿಣಾಮವನ್ನು ಯೋಚನೆ ಮಾಡುತ್ತೇವೆ. ಒಟ್ಟು ಐದು ಲಕ್ಷ ಪರಿಹಾರ ನೀಡುತ್ತೇವೆ. ಕುಟುಂಬಕ್ಕೆ ಯಾವುದಾದರೂ ಒಂದು ಶಾಶ್ವತ ಪರಿಹಾರ ಒದಗಿಸುತ್ತೇನೆ.
ದರ್ಶನ್ ಅವರಿಂದ ಚಿತ್ರರಂಗದ ಚಲನಚಿತ್ರ ಮಂಡಳಿಯನ್ನು ದೂಷಣೆ ಮಾಡಬೇಡಿ. ವಾಣಿಜ್ಯ ಮಂಡಳಿ ಎಲ್ಲಾ ಸಮಯದಲ್ಲಿ ಕಷ್ಟದಲ್ಲಿ ಸ್ಪಂದಿಸುವ ಕೆಲಸ ಮಾಡಿದ್ದು ಮುಂದಿನ ದಿನಗಳಲ್ಲಿ ಉತ್ತಮ ಕೆಲಸಕ್ಕೆ ಚಲನಚಿತ್ರ ಮಂಡಳಿ ಬೆನ್ನೆಲುಬಾಗಿರುತ್ತದೆ ಎಂದು ತಿಳಿಸಿದರು.
ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾರಾ ಗೋವಿಂದ್ ಅವರು (Film Chamber Association visit Chitradurga) ಮಾತನಾಡಿ ಈ ನಾಡು ಜಲ ನೆಲದ ರಕ್ಷಣೆಗಾಗಿ ಹೋರಟ ಮಾಡಿದ್ದು ನನಗೆ ಸಂತೋಷ ತಂದಿದೆ. ನಾವೆಲ್ಲರೂ ಬಂದಿರುವುದು ರೇಣುಕಾಸ್ವಾಮಿ ಕುಟುಂಬಕ್ಕೆ ಧೈರ್ಯ ತುಂಬಿ ನಿಮ್ಮ ಜೊತೆ ನಾವಿದ್ದೇವೆ ಎಂಬ ಸಂದೇಶಕ್ಕೆ ಬಂದಿದ್ದೇವೆ. ಯಾವುದೇ ಕಾರಣಕ್ಕೂ ನಾವು ರಾಜೀ ಸೂತ್ರಕ್ಕೆ ಬಂದಿದ್ದೇವೆ.
ಮನುಷ್ಯ ತಪ್ಪು ಮಾಡುವುದು ಸಹಜ ಆದರೆ ತಪ್ಪು ಈ ರೀತಿಯ ಘಟನೆ ನಡೆದಿರುವುದಕ್ಕೆ ನೇರವಾಗಿ ಚಿತ್ರರಂಗದ ಒಬ್ಬ ವ್ಯಕ್ತಿ ಮಾತ್ರ ಹೊಣೆಯಲ್ಲ, ಮುಂದಿನ ದಿನಗಳಲ್ಲಿ ರೇಣುಕಾಸ್ವಾಮಿ ಕುಟುಂಬದ ಜೊತೆ ನಾವು ಇರುತ್ತೇವೆ ಎಂಬ ಅಭಯ ನೀಡಿದ್ದೇನೆ. ರಾಜ್, ಅಂಬರೀಶ್, ವಿಷ್ಣು, ಶಂಕರ್ನಾಗ್, ಅನಂತ್ ನಾಗ್ ಅವರಂತಹ ಕಾಲ ಈಗ ಇಲ್ಲ. ನಮ್ಮ ನಾಯಕ ನಟರು ಏಕೆ ದಾರಿ ತಪ್ಪುತ್ತಿದ್ದಾರೆ ತಿಳಿಯುತ್ತಿಲ್ಲ.
ಕಾನೂನಿಗಿಂತ ಯಾರು ದೊಡ್ಡವರಲ್ಲ, ಸರ್ಕಾರ ಮತ್ತು ಪೋಲಿಸ್ ಇಲಾಖೆ ಉತ್ತಮವಾಗಿ ತನಿಖೆ ನಡೆಸುತ್ತಿದೆ. ಯಾರ ಮುಲಾಜಿಗೆ ಒಳಗಾಗುವುದು ಬೇಡ, ಯಾರೋ ಮಾಡಿದ ತಪ್ಪಿಗೆ ಎಲ್ಲಾರೂ ಹೊಣೆಯಾಗುವುದು ಸಾಧ್ಯವಿಲ್ಲ. ರೇಣುಕಾಸ್ವಾಮಿ ಅವರ ಹೆಂಡತಿ ಮತ್ತು ತಾಯಿ ಇಬ್ಬರನ್ನು ನೋಡಿ ಮನ ಕುಲುಕುತ್ತಿದೆ ಎಂದರು.
ಇದನ್ನೂ ಓದಿ: Renukaswamy Murder Case: ಮಗನ ಬಂಧನದ ಸುದ್ದಿ ಟಿವಿ ಯಲ್ಲಿ ನೋಡಿ ಕುಸಿದು ಬಿದ್ದು ತಂದೆ ಸಾವು
ನಿರ್ಮಾಪಕ ಸಂಘದ ಅಧ್ಯಕ್ಷ ಬಾಣಕರ್ ಮಾತನಾಡಿ ಶಾಮನೂರು ಶಿವಶಂಕರಪ್ಪ ಅವರ ಬಳಿ ಮಾತನಾಡಿದ್ದ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಸರ್ಕಾರಿ ಕೆಲಸವನ್ನು ಸಹ ಕೊಡಿಸುವ ಭರವಸೆ ನೀಡಿದ್ದಾರೆ. ಈ ಪ್ರಕರಣಕ್ಕೆ ಚಿತ್ರರಂಗ ಕ್ಷಮೆ ಕೇಳುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಎಸ್.ಎ.ಚಿನ್ನೇಗೌಡ, (Film Chamber Association visit Chitradurga) ಕೆ.ವಿ.ಚಂದ್ರಶೇಖರ್, ಜಿ.ವೆಂಕಟೇಶ್, ಬಾಮ ಗಿರೀಶ್, ರಾಮಕೃಷ್ಣ, ತುಶಾಲ್, ಸಿದ್ದರಾಜು, ಸುದರ್ಶನ್, ಕೆಂಪಣ್ಣ , ಜಯಸಿಂಹ ಮುಸರಿ, ಉಮೇಶ್ ಬಾಣಕರ್, ಕುಮಾರ್, ಬಿ.ಕಾಂತರಾಜ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252