Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ | ಐವರ ಅಸ್ಥಿಪಂಜರ ಪತ್ತೆ, FSL ವರದಿ ಬಹಿರಂಗ, ಎಸ್ಪಿ ಹೇಳಿದ್ದಿಷ್ಟು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಚಿತ್ರದುರ್ಗ | ಐವರ ಅಸ್ಥಿಪಂಜರ ಪತ್ತೆ, FSL ವರದಿ ಬಹಿರಂಗ, ಎಸ್ಪಿ ಹೇಳಿದ್ದಿಷ್ಟು
ಕ್ರೈಂ ಸುದ್ದಿ

ಚಿತ್ರದುರ್ಗ | ಐವರ ಅಸ್ಥಿಪಂಜರ ಪತ್ತೆ, FSL ವರದಿ ಬಹಿರಂಗ, ಎಸ್ಪಿ ಹೇಳಿದ್ದಿಷ್ಟು

Editor Nammajana
Last updated: 16 May 2024 15:52
By Editor Nammajana 2 Min Read
Share
SHARE

Chitradurga news | nammajana.com | 16-5-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರವನ್ನೆ ಬೆಚ್ಚಿ ಬೀಳಿಸುವ ಮೂಲಕ ಸದ್ದು ಮಾಡಿದ್ದ ಒಂದೇ ಮನೆಯಲ್ಲಿ ಐವರ ಅಸ್ಥಿಪಂಜರ ಕೇಸ್ (five skeletons) ನ FSL ವರದಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೈ ಸೇರಿದೆ, ನಿವೃತ್ತ ಇಇ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಲೀಲ, ಪುತ್ರಿ ತ್ರಿವೇಣಿ, ಪುತ್ರರಾದ ಕೃಷ್ಣ, ನರೇಂದ್ರ ಅವರು ನಿದ್ರೆ ಮಾತ್ರೆ ಸೇವನೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ವೈದ್ಯರ ವರದಿಯಲ್ಲಿ ಉಲ್ಲೇಖವಾಗಿದೆ.

ಅಸ್ಥಿಪಂಜರಗಳ ಮರಣೋತ್ತರ ಪರೀಕ್ಷೆ ವರ್ಗಾವಣೆ

ನಗರದ ಚಳ್ಳಕೆರೆ ವೃತ್ತದ ಹಳೆಯ ಬೆಂಗಳೂರು ರಸ್ತೆ ನಿವ ಜಗನ್ನಾಥರೆಡ್ಡಿ ಮನೆಯಲ್ಲಿ ಕುಟುಂಬದ ಐವರ ಮೃತದೇಹಗಳ ಅಸ್ತಿಪಂಜರ ಪತ್ತೆಯಾಗಿತ್ತು. ಮೃತಪಟ್ಟ ದೇಹಗಳು 4-5 ವರ್ಷಗಳ ಬಳಿಕ ಸಿಕ್ಕಿದ್ದವು, ಪೋಲಿಸರು ಈ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಿ ವರದಿ ನೀಡಲು FSL ವರ್ಗಾಯಿಸಲಾಗಿತ್ತು.

FSL ವರದಿಯಲ್ಲಿ ಇರುವುದು ಏನು?

ಈಗ FSL ವರದಿ ಹೊರ ಬಂದಿದ್ದು ಬಹುತೇಕ ಐವರ ಮೃತದೇಹಗಳಲ್ಲಿ ನಿದ್ದೆ ಮಾತ್ರೆಯ ಅಂಶ ಪತ್ತೆಯಾಗಿದ್ದು, FSL ವರದಿಯಲ್ಲಿ ನಿದ್ದೆಮಾತ್ರೆ ಸೇವಿಸಿ ಸಾವು ಎಂದು ಉಲ್ಲೇಖ ಮಾಡಲಾಗಿದ್ದು ನಿದ್ರೆ ಮಾತ್ರೆ ಸೇವಿಸಿ ಮೃತಪಟ್ಟದ್ದನ್ನ ಅಲ್ಲಗಳೆಯುವಂತಿಲ್ಲ ಎಂದು ವೈದ್ಯರ ವರದಿಯಲ್ಲಿದೆ, ಜಗನ್ನಾಥರೆಡ್ಡಿ ಕುಟುಂಬ ಬಹುತೇಕ ಸಾಮೂಹಿಕ ಆತ್ಮಹತ್ಯೆ  ಎಂಬ ಶಂಕೆ ವ್ಯಕ್ತವಾಗಿದ್ದು ಈ ರಿಪೋರ್ಟ್ ಪ್ರಕರಣದ ತನಿಖಾಧಿಕಾರಿ ಕೈ ಸೇರಿದೆ ಎಂದು ತಿಳಿದಿದೆ.

ಇನ್ನೂ ಪ್ರಕರಣದ ಸಮಗ್ರ ತನಿಖೆಗಾಗಿ ಮನೆಯ ವಿವಿಧ ವಸ್ತುಗಳನ್ನು ಜಾಲಾಡಿದ್ದ ತಜ್ಞರ ತಂಡಕ್ಕೆ ಮನೆಯ ಎರಡು ಪಾತ್ರೆಗಳಲ್ಲಿ ಸೈನೆಡ್ ಐರನ್ ಅಂಶ ಇರುವುದು ಖಚಿತವಾಗಿದೆ.

ಆದರೆ, ಈ ಐದು ಜನ ಸೈನೆಡ್ ಸೇವಿಸಿದ್ದರೆ ಎನ್ನುವುದಕ್ಕೆ ಸೂಕ್ತ ದಾಖಲೆ ಅಥವಾ ಪರೀಕ್ಷೆ ವೇಳೆ ರಾಸಾಯನಿಕಗಳು ಪತ್ತೆಯಾಗಿಲ್ಲ.

ಇದನ್ನೂ  ಓದಿ: IPL ಕ್ರಿಕೆಟ್ ಬೆಟ್ಟಿಂಗ್ ದಂಧೆ, ನಾಲ್ವರ ಬಂಧನ

ಐದು ಜನರು 2019 ಫೆಬ್ರವರಿ ಕೊನೆಯ ವಾರ ಅಥವಾ ಮಾರ್ಚ್ ಮೊದಲ ವಾರದಲ್ಲಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದರು, ಅದರಂತೆ ಎಫ್‍ಎಸ್‍ಎಲ್ ವರದಿಯಲ್ಲೂ ಸಿಕ್ಕಿರುವ ಅಸ್ತಿಪಂಜರಗಳ ಆಧಾರದಲ್ಲಿ ಐದು ಜನ ಮೃತಪಟ್ಟು ನಾಲ್ಕೂವರೆಯಿಂದ ಐದು ವರ್ಷಗಳ ಹಿಂದೆ ಮೃತಪಟ್ಟಿರಬಹುದು ಎಂದು ದಾಖಲಿಸಲಾಗಿದೆ.

ಚಿತ್ರದುರ್ಗ ಎಸ್ಪಿ ಹೇಳಿದ್ದಿಷ್ಟು

ಇನ್ನು ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಚಿತ್ರದುರ್ಗ ಮನೆಯೊಂದರಲ್ಲಿ ಐದು ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ FSL ರಿಪೋರ್ಟ್ ಬಂದಿದೆ. ಅದರಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇನ್ನು 2023ರ ಡಿಸೆಂಬರ್ 28ರಂದು ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣಾರೆಡ್ಡಿ ಹಾಗೂ ನರೇಂದ್ರರೆಡ್ಡಿ ಸೇರಿದಂತೆ ಐವರ ಅಸ್ಥಿಪಂಜರ ಪತ್ತೆ ಆಗಿದ್ದವು. ಇದೀಗ ಎಫ್ಎಫ್‌ಎಸ್‌ ವರದಿ ಬಂದಿದೆ ಎಂದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsFive skeletonsFSL report releaseKannada Newskannada suddiNammajana.comSPಎಫ್ಎಸ್ಎಲ್ ವರದಿ ಬಿಡುಗಡೆಎಸ್ಪಿಐದು ಅಸ್ಥಿಪಂಜರಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article IPL ಕ್ರಿಕೆಟ್ ಬೆಟ್ಟಿಂಗ್ ದಂಧೆ, ನಾಲ್ವರ ಬಂಧನ
Next Article Dina Bhavishya: ಇಂದಿನ ರಾಶಿ ಭವಿಷ್ಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?