
Chitradurga news|nammajana.com|18-8-2024
ನಮ್ಮಜನ.ಕಾಂ, ಚಿತ್ರದುರ್ಗ: ಲಕ್ಷಾಂತರ ಭಕ್ತರು ಆಗಮಿಸಿ ವಿಜೃಂಭಣೆಯಿಂದ ನಡೆಸುವ ಜಿಲ್ಲೆಯ ಪ್ರಸಿದ್ಧ ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಗೌರಸಮುದ್ರ ಶ್ರೀಮಾರಮ್ಮನ ಜಾತ್ರೆ ಸೆಪ್ಟೆಂಬರ್ 2,3 ಮತ್ತು 4 ಮೂರು ದಿನಗಳ ಕಾಲ (Gourasamudra Maramma) ನಡೆಯಲಿದ್ದು, ಜಾತ್ರೆಯನ್ನು ಯಶಸ್ವಿಗೊಳಿಸಲು ಆಗಮಿಸುವ ಭಕ್ತರಿಗೆ ಸೂಕ್ತ ಸೌಲಭ್ಯ ಕಲ್ಪಿಸಿ, ಅಧಿಕಾರಿಗಳು ಜಾಗ್ರತೆ ವಹಿಸಬೇಕು ಎಂದು ಮೊಳಕಾಲ್ಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಸೂಚಿಸಿದರು.
ತಾಲೂಕು ಕಚೇರಿಯಲ್ಲಿ ಪೂರ್ವಭಾವಿ ಸಭೆ
ಅವರು, ತಾಲೂಕು ಕಚೇರಿ ಆವರಣದಲ್ಲಿ ಶನಿವಾರ ಜಾತ್ರಾ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷವೂ ಜಾತ್ರೆಗೆ ಆಗಮಿಸುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗದಂತೆ ವ್ಯವಸ್ಥೆ ಮಾಡ ಬೇಕಿದೆ. ವಿಶೇಷವಾಗಿ ಕುಡಿಯುವ ನೀರು, ಶೌಚಾಲಯ, ಸ್ವಚ್ಚತೆ, ಸಾರಿಗೆ ವ್ಯವಸ್ಥೆ, (Gourasamudra Maramma) ಪಾರ್ಕಿಂಗ್ ವ್ಯವಸ್ಥೆ, ಆರೋಗ್ಯ, ರಸ್ತೆ ರಿಪೇರಿ ಮುಂತಾದ ಕಾರ್ಯಗಳನ್ನು ಸಮಾರೋಪಾದಿಯಲ್ಲಿ ಆರಂಭಿಸಬೇಕು.

ಸಂಪರ್ಕ ರಸ್ತೆಗಳ ರಿಪೇರಿಗೆ 5 ಕೋಟಿ ಹಣಕ್ಕೆ ಶಿಫಾರಸ್ಸು
ವಿಶೇಷವಾಗಿ ಗೌರಸಮುದ್ರ ಜಾತ್ರೆ ಹಿನ್ನೆಲೆಯಲ್ಲಿ ಆ ಭಾಗದ ಸಂಪರ್ಕ ರಸ್ತೆಗಳ ರಿಪೇರಿಗಾಗಿ ಸುಮಾರು 5 ಕೋಟಿ ಹಣವನ್ನು ನೀಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಇದರ ಜೊತೆಯಲ್ಲಿ ಇನ್ನೂ ಎರಡು ಪ್ರಮುಖ ರಸ್ತೆಗಳ ನಿರ್ಮಾಣ ಕಾರ್ಯದ ಭೂಮಿಪೂಜೆ ಶೀಘ್ರದಲ್ಲೇ ನೆರವೇರಿಸಲಾಗುವುದು ಎಂದರು.
ತಹಸೀಲ್ದಾರ್ ರೇಹಾನ್ ಪಾಷಮಾತನಾಡಿ, ಈಗಾಗಲೇ ತಾಲೂಕು ಆಡಳಿತದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಕಾಯೋನ್ಮುಖರಾಗಲು ನಿರ್ದೇಶನ ನೀಡಲಾಗಿದೆ ಎಂದರು. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿ ಮಾಹಿತಿ ನೀಡಿ, ಈಗಾಗಲೇ ಮೂರಕ್ಕೂ ಹೆಚ್ಚು (Gourasamudra Maramma) ಬೋರ್ಗಳಲ್ಲಿ ನೀರಿದೆ. ಅಗತ್ಯ ಇದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಹೆಚ್ಚುವರಿ ಬೋರ್ಕೊರೆಸಲಾಗುವುದು ಎಂದರು.
ಜಾತ್ರೆಯಲ್ಲಿ ಸಿಸಿ ಕ್ಯಾಮರ ಅಳವಡಿಕೆ
ಡಿವೈಎಸ್ಪಿ ಟಿ.ಬಿ. ರಾಜಣ್ಣ ಮಾಹಿತಿ ನೀಡಿ, ಪೊಲೀಸ್ ಇಲಾಖೆ ಬ್ಯಾರಿಕೇಟ್ ನಿರ್ಮಿಸಿ, ಬಂದೋಬದ್ ನಿರ್ಮಿಸ ಲಾಗುವುದು. 10ಕಡೆ ಸಿಸಿ ಕ್ಯಾಮರ ಅಳವಡಿಸಲಾಗುವುದು ಎಂದರು. ಕೆಎಸ್ಆರ್ಟಿಸಿ ವ್ಯವಸ್ಥಾಪಕ ಪ್ರಭು, ಕಳೆದ ಬಾರಿ 40 ಬಸ್ಗಳ ಸೇವೆ ಒದಗಿಸಿದ್ದು, ಈ ಬಾರಿ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗುವುದು ಎಂದರು.
ಇದನ್ನೂ ಓದಿ: ವಾಣಿ ವಿಲಾಸ ಸಾಗರದ ನೀರಿನ ಮಟ್ಟದಲ್ಲಿ ಭರ್ಜರಿ ಹೆಚ್ಚಳ, ಎಷ್ಟಿದೆ ನೀರಿನ ಮಟ್ಟ | Vani Vilasa Sagara Dam
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್. ಶಶಿಧರ್, ಪಿಡಿಒ ಹನುಮಂತರಾಯ, ಪಶು ವೈದ್ಯಾಧಿಕಾರಿ ರೇವಣ್ಣ, ಬೆಸ್ಕಾಂ ಅಧಿಕಾರಿ ಮಮತಾ, ಲೋಕೋಪಯೋಗಿ ಸಹಾಯಕ ಎಂಜಿನಿಯರ್ ವಿಜಯಭಾಸ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಇತರರು ಇದ್ದರು.