Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಬಾಲ ಮಂದಿರಕ್ಕೆ ಭೇಟಿ ನೀಡಿದ ಜಿ.ಪಂ.ಸಿಇಒ ಸೋಮಶೇಖರ್ ಬಳಿ ಮಕ್ಕಳು ಬಿಚ್ಚಿಟ್ಟ ಆಸೆಗಳೇನು? ಇಲ್ಲಿವೆ ಡಿಮ್ಯಾಂಡ್ ಗಳ ಮಾಹಿತಿ | Government Bal Mandir
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಬಾಲ ಮಂದಿರಕ್ಕೆ ಭೇಟಿ ನೀಡಿದ ಜಿ.ಪಂ.ಸಿಇಒ ಸೋಮಶೇಖರ್ ಬಳಿ ಮಕ್ಕಳು ಬಿಚ್ಚಿಟ್ಟ ಆಸೆಗಳೇನು? ಇಲ್ಲಿವೆ ಡಿಮ್ಯಾಂಡ್ ಗಳ ಮಾಹಿತಿ | Government Bal Mandir
ಇಂದಿನ ಸುದ್ದಿ

ಬಾಲ ಮಂದಿರಕ್ಕೆ ಭೇಟಿ ನೀಡಿದ ಜಿ.ಪಂ.ಸಿಇಒ ಸೋಮಶೇಖರ್ ಬಳಿ ಮಕ್ಕಳು ಬಿಚ್ಚಿಟ್ಟ ಆಸೆಗಳೇನು? ಇಲ್ಲಿವೆ ಡಿಮ್ಯಾಂಡ್ ಗಳ ಮಾಹಿತಿ | Government Bal Mandir

Editor Nammajana
Last updated: 27 November 2024 13:47
By Editor Nammajana 2 Min Read
Share
SHARE

Chitradurga news|nammajana.com|27-11-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿರುವ ಬಾಲಕರ ಹಾಗೂ ಬಾಲಕಿಯರ ಸರ್ಕಾರಿ ಬಾಲ ಮಂದಿರಗಳಿಗೆ ಮಂಗಳವಾರದಂದು ಭೇಟಿ ನೀಡಿದ ಜಿಲ್ಲಾ ಪಂಚಾಯತ್ (Government Bal Mandir) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರು, ಬಾಲಮಂದಿರದಲ್ಲಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸುವಂತೆ ತಾಕೀತು ಮಾಡಿದರು.

ಬಾಲಕರ ಸರ್ಕಾರಿ ಬಾಲಮಂದಿರದಲ್ಲಿ ಒಟ್ಟು 30 ಹಾಗೂ ಬಾಲಕಿಯರ ಬಾಲಮಂದಿರದಲ್ಲಿ 29 ಮಕ್ಕಳು ದಾಖಲಾಗಿರುವ ಬಗ್ಗೆ ಮಾಹಿತಿ ಪಡೆದು, ಸಂಕಷ್ಟದಲ್ಲಿರುವ ಮಕ್ಕಳ ಪೋಷಣೆ ಮತ್ತು ರಕ್ಷಣೆಯ ಅವಶ್ಯಕತೆ ಇರುವ ಮಕ್ಕಳಿಗೆ ಉಚಿತವಾಗಿ ತುರ್ತು ಸೇವೆ ಒದಗಿಸುವ ಸಲುವಾಗಿ ಸರ್ಕಾರ (Government Bal Mandir) ಬಾಲಮಂದಿರಗಳನ್ನು ಸ್ಥಾಪಿಸಿದೆ.

ಇಲ್ಲಿ ದಾಖಲಾಗುವ ಮಕ್ಕಳಿಗೆ ಉತ್ತಮ ಆಪ್ತ ಸಮಾಲೋಚನೆ ನಡೆಸುವುದರ ಮೂಲಕ ಮಾನಸಿಕವಾಗಿ ಸ್ಥೈರ್ಯ ತುಂಬುವ ಕಾರ್ಯವನ್ನು ಸಿಬ್ಬಂದಿಗಳು ನಿರ್ವಹಿಸಬೇಕು.  ಮಕ್ಕಳಿಗೆ ಉತ್ತಮ ಊಟೋಪಹಾರ, ಕಾಲಕಾಲಕ್ಕೆ ಅಗತ್ಯ ವೈದ್ಯಕೀಯ ನೆರವು ಜೊತೆಗೆ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶ (Government Bal Mandir) ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.

ಬಾಲಮಂದಿರದಲ್ಲಿನ ಮಕ್ಕಳ ಹಾಜರಾತಿ ವಿವರವನ್ನು ಪರಿಶೀಲಿಸಿ, ಬಾಲ ಮಂದಿರದ ವಸತಿ  ಕೊಠಡಿಗಳಿಗೆ ತೆರಳಿ ಸೌಲಭ್ಯಗಳ ಬಗ್ಗೆ ವೀಕ್ಷಣೆ ನಡೆಸಿದರು.

ಊಟದ ಮೆನು ಮತ್ತು ಗುಣಮಟ್ಟ ಪರಿಶೀಲನೆ

ಅಡುಗೆ ತಯಾರಿಕೆ ಕೊಠಡಿ ತೆರಳಿ, ಮಕ್ಕಳಿಗೆ ನೀಡಲಾಗುವ ಊಟೋಪಹಾರದ ಮೆನು, ಹಾಗೂ ತಯಾರಿಸಲಾಗಿದ್ದ ಅಡುಗೆಯನ್ನು ಪರಿಶೀಲಿಸಿದರು.

ಶುದ್ಧ ಕುಡಿಯುವ  ನೀರು, ಆಹಾರ ಗುಣಮಟ್ಟ, ವಿತರಣೆ ಹಾಗೂ ಸ್ವಚ್ಛತೆಯ ಬಗ್ಗೆ ಸಿಬ್ಬಂದಿಗೆ ಸಲಹೆ, ಸೂಚನೆಗಳನ್ನು ನೀಡಿದರು.

ಶೈಕ್ಷಣಿಕ ಪ್ರಗತಿಯ ಬಗ್ಗೆ ಮಕ್ಕಳು ಹಾಗೂ ಸಿಬ್ಬಂದಿಯವರೊಂದಿಗೆ ಸಂವಾದ ನಡೆಸಿದ ಸಿಇಒ ಅವರು. ತದನಂತರ ಎಲ್ಲ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದರು.  ಪ್ರತಿ ತಿಂಗಳು ವೈದ್ಯರ ಬಳಿ ಮಕ್ಕಳು ತಪಾಸಣೆ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಚರ್ಚಿಸಿ, ಮಕ್ಕಳ ಆರೋಗ್ಯ ಮತ್ತು ಆರೈಕೆಗಳ ಬಗ್ಗೆ ಕೆಲವು ಸಲಹೆಗಳನ್ನು ನೀಡಿದರು.

ಸಂವಾದ ಸಂದರ್ಭದಲ್ಲಿ ಮಕ್ಕಳ ಅಗತ್ಯತೆ ಬಗ್ಗೆ ಕೇಳಿದಾಗ, ಮಕ್ಕಳು ತಮಗೆ ಒಳಾಂಗಣದಲ್ಲಿ ಆಡಬಹುದಾದ ಚೆಸ್, ಕೇರಂ ಮುಂತಾದ ಆಟದ ಸಾಮಗ್ರಿಗಳನ್ನು ಒದಗಿಸುವಂತೆ (Government Bal Mandir) ಕೋರಿದರು.  ಅಲ್ಲದೆ ಮೈಸೂರಿನಲ್ಲಿನ ಅರಮನೆ, ಮೃಗಾಲಯ ಮತ್ತಿತರ ಪ್ರವಾಸಿ ತಾಣಗಳನ್ನು ವೀಕ್ಷಿಸುವ ಆಸೆಯನ್ನು ಇದೇ ಸಂದರ್ಭದಲ್ಲಿ ಮಕ್ಕಳು ವ್ಯಕ್ತಪಡಿಸಿದರು.  ಇದಕ್ಕೆ ಕೂಡಲೆ ಸ್ಪಂದಿಸಿದ ಸಿಇಒ ಅವರು, ಶೀಘ್ರವೇ ಮಕ್ಕಳ ಆಶಯವನ್ನು ಈಡೇರಿಸುವ ಭರವಸೆ ನೀಡಿದರು.

ಇದರ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಲ್ಯಾಪ್‍ಟಾಪ್‍ಗಳನ್ನು ಪೂರೈಸುವುದಾಗಿಯೂ ಭರವಸೆ ನೀಡಿದರು.

ಸಂಕಷ್ಟದಲ್ಲಿರುವ ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಉಚಿತ ಸಹಾಯವಾಣಿ 1098 ಕುರಿತು ವ್ಯಾಪಕವಾಗಿ ಪ್ರಚಾರ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ನಾಳೆ ವಿದ್ಯುತ್ ವ್ಯತ್ಯಯ | ಬೆಳಗ್ಗೆ 10 ರಿಂದ ಸಂಜೆವರಗೆ ಎಲ್ಲೆಲ್ಲಿ ಕರೆಂಟ್ ಇರಲ್ಲ | Power cut

ಜಿಲ್ಲಾ ಮಕ್ಕಳ ಶಿಕ್ಷಣಾಧಿಕಾರಿ ಸವಿತಾ, ಜಿಲ್ಲಾ ಮಕ್ಕಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಹಾಯಕ ಅಧಿಕಾರಿ ಪವಿತ್ರ,  ಬಾಲಕರ ಸರ್ಕಾರಿ ಬಾಲ ಮಂದಿರದ ಅಧೀಕ್ಷಕ ಜಿ. ವಿ. ಸಂತೋಷ, ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿಯರಾದ ಜ್ಯೋತಿ ಹಾಗೂ ಕಾವೇರಮ್ಮ ಉಪಸ್ಥಿತರಿದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsCIOFoodG.P.M.Government Bal Mandirinteraction with childrenKannada Newskannada suddiNammajana.comquality checkS.J.SomashekharVisitwishes of childrenಆಹಾರಎಸ್.ಜೆ.ಸೋಮಶೇಖರ್ಕನ್ನಡ ನ್ಯೂಸ್ಕನ್ನಡ ಸುದ್ದಿಗುಣಮಟ್ಟ ಪರಶೀಲನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿ.ಪಂನಮ್ಮಜನ.ಕಾಂಭೇಟಿಮಕ್ಕಳ ಆಸೆಗಳುಮಕ್ಕಳ ಜೊತೆ ಸಂವಾದಸರ್ಕಾರಿ ಬಾಲ ಮಂದಿರಸಿಐಒ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಇಂದು ವಿದ್ಯುತ್ ವ್ಯತ್ಯಯ | ಬೆಳಗ್ಗೆ 10 ರಿಂದ ಸಂಜೆ 5 ವರಗೆ ಯಾವ್ಯಾವ ಏರಿಯಾದಲ್ಲಿ ಕರೆಂಟ್ ಇರಲ್ಲ | Power cut
Next Article ದಿನ ಭವಿಷ್ಯ | 28 ನವೆಂಬರ್ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ? | Kannada Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?