Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸರ್ಕಾರಿ ನೌಕರರ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ನೌಕರರಿಂದ ಮೌನ ಪ್ರತಿಭಟನೆ | Government employees protest
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸರ್ಕಾರಿ ನೌಕರರ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ನೌಕರರಿಂದ ಮೌನ ಪ್ರತಿಭಟನೆ | Government employees protest
ಇಂದಿನ ಸುದ್ದಿ

ಸರ್ಕಾರಿ ನೌಕರರ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ನೌಕರರಿಂದ ಮೌನ ಪ್ರತಿಭಟನೆ | Government employees protest

Nammajana Sub Editor
Last updated: 26 September 2025 8:08 PM
By Nammajana Sub Editor 4 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 26-09-2025

ನಮ್ಮಜನ ನ್ಯೂಸ್ ಕಾಂ, ಚಿತ್ರದುರ್ಗ: ಸರ್ಕಾರಿ (Government employees protest) ನೌಕರರ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ ಮೌನ ಪ್ರತಿಭಟನೆ ನಡೆಸಲಾಯಿತು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: Chitradurga today Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

ನಗರದ ಪ್ರವಾಸಿ ಮಂದಿರದಿಂದ ಮೌನ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಸರ್ಕಾರಿ ನೌಕರರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಭಯಮುಕ್ತ ವಾತಾವರಣದಲ್ಲಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು, ವಿನಾಕಾರಣ ಕಿರುಕುಳ ನೀಡುವ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಅವರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಸರ್ಕಾರಿ ನೌಕರರು ಈಗಲೇ ಒತ್ತಡದ ನಡುವೆ ಕೆಲಸ ಮಾಡುತ್ತಿದ್ದಾರೆ. ಕೆಲವು ಕಿಡಿಗೇಡಿಗಳು, ಸರ್ಕಾರಿ ನೌಕರರಿಗೆ ಬೆದರಿಕೆ ಹಾಕುವುದು, ಕಿರುಕುಳ ನೀಡುವಂತಹ ಕಾರ್ಯ ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಇದರಿಂದಾಗಿ ಸರ್ಕಾರಿ ನೌಕರರು ಭಯದ ವಾತಾವರಣದಲ್ಲಿಯೇ ಕೆಲಸ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಅಕ್ರಮಗಳಿಗೆ ಸಹಕಾರ ನೀಡುವಂತೆ ಬೆದರಿಕೆ ಹಾಕುವ ದುಷ್ಕರ್ಮಿಗಳು, ಸಹಕರಿಸದೇ ಇದ್ದರೆ, ಅಂತಹ ನೌಕರರನ್ನು ವಿವಿಧ ರೀತಿಯಲ್ಲಿ ಹೆದರಿಸಿ, ಕಿರುಕುಳ ನೀಡುವುದು, ವಿನಾಕಾರಣ ನೂರಾರು ಸಂಖ್ಯೆಯಲ್ಲಿ ಮಾಹಿತಿ ಹಕ್ಕು ಅರ್ಜಿಗಳನ್ನು ಸಲ್ಲಿಸಿ ಕಾಯ್ದೆಯ ದುರುಪಯೋಗ ಮಾಡುವುದು, ನೌಕರರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ಕೂಡ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿವೆ. ಹೀಗಾಗಿ ಸರ್ಕಾರಿ ನೌಕರರು ಪ್ರಾಮಾಣಿಕತೆಯಿಂದ ಭಯಮುಕ್ತ ವಾತಾವರಣದಲ್ಲಿ ಕೆಲಸ ಮಾಡುವಂತಾಗಬೇಕು. ಈ ನಿಟ್ಟಿನಲ್ಲಿ ಬೆದರಿಕೆ ಒಡ್ಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದರು.

ಇದನ್ನೂ ಓದಿ: ST ಪಟ್ಟಿಗೆ ಅನ್ಯ ಜಾತಿ ಸೇರ್ಪಡೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ನಾಯಕ ಸಮಾಜ ಪ್ರತಿಭಟನೆ

ಇತ್ತೀಚೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಯತ್ನಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಸರ್ಕಾರಿ ದಾಖಲೆಗಳನ್ನು ಹರಿದು ಹಾಕಿರುವ ಎಂ.ಸತೀಶ್ ಕುಮಾರ್ ಎಂಬುವರನ್ನು ಬಂಧಿಸಿ, ಆತನಿಂದಾಗುವ ಮಾನಸಿಕ ಕಿರುಕುಳ ತಪ್ಪಿಸಲು ಹಾಗೂ ಸರ್ಕಾರಿ ಅಧಿಕಾರಿಗಳ ಹಾಗೂ ನೌಕರರ ತೇಜೋವಧೆ ಮಾಡುವುದನ್ನು ತಪ್ಪಿಸಲು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿದರು.

ಸತೀಶ್ ಕುಮಾರ್ ಎಂಬ ವ್ಯಕ್ತಿ ಜಿಲ್ಲೆಯಲ್ಲಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸುಮಾರು 200ಕ್ಕೂ ಹೆಚ್ಚು ಮಾಹಿತಿ ಹಕ್ಕು ಅರ್ಜಿಗಳನ್ನು ಸಲ್ಲಿಸಿ, ಮಾಹಿತಿ ಹಾಗೂ ಹಣ ಕೊಡುವಂತೆ ಕಳೆದ ಸುಮಾರು 9-10 ತಿಂಗಳಿಂದ ಪೀಡಿಸುತ್ತಿದ್ದು, ಯಾವುದೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಣ ನೀಡದೇ ಇದ್ದಾಗ ಹತಾಶನಾಗಿ ದಾಖಲೆರಹಿತವಾಗಿ ಸರ್ಕಾರಕ್ಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಂಸದರಿಗೆ ಸುಳ್ಳು ದೂರು ಅರ್ಜಿ ಸಲ್ಲಿಸಿ, ದೂರು ಅರ್ಜಿಗಳನ್ನು ಸಲ್ಲಿಸಿರುವುದಕ್ಕೆ ಸ್ವೀಕೃತಿ ಪಡೆದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಬೆದರಿಸುತ್ತಾ ಸುಳ್ಳು ದೂರು ಅರ್ಜಿಗಳ ಮೇಲೆ, ನಿಮ್ಮನ್ನು ಅಮಾನತು ಮಾಡಿಸುವುದಾಗಿ ಹಾಗೂ ಆರೋಪಗಳನ್ನು ಸಾಬೀತುಪಡಿಸಿ ನಿಮ್ಮನ್ನು ಕೆಲಸದಿಂದ ವಜಾ ಮಾಡಿಸುತ್ತೇನೆ ಎಂದು ಬೆದರಿಕೆ ಒಡ್ಡುತ್ತಾ ಸರ್ಕಾರಿ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಸಾಧ್ಯವಾಗದೇ ಇರುವಂತಹ ವಾತಾವರಣ ಸೃಷ್ಠಿ ಮಾಡಿರುತ್ತಾನೆ ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ತೇಜೋವಧೆ ಮಾಡಿದ್ದಾರೆ ಎಂದು ದೂರಿದರು.

ಎಂ.ಸತೀಶ್ ಕುಮಾರ್ ಅಲಿಯಾಸ್ ಎಂ.ಸತೀಶ್ ನಾಯ್ಕ್ ಎಂಬ ವ್ಯಕ್ತಿಯು ಪೂರ್ವಾಗ್ರಹ ಪೀಡಿತವಾಗಿದ್ದು, ಇತ್ತೀಚೆಗೆ ಸಂಸದರ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆ ಸಮಯದಲ್ಲಿ ಕೆಲವು ಪುಂಡರ ಜೊತೆ ಜಿ.ಪಂ. ಗೆ ಮುತ್ತಿಗೆ ಹಾಕಿ ಹಿರಿಯ ಅಧಿಕಾರಿಗಳ ತೇಜೋವಧೆ ಮಾಡಿರುತ್ತಾರೆ.

ಜಿಲ್ಲೆಯ ವಿವಿಧ ಸರ್ಕಾರಿ ಅಧಿಕಾರಿಗಳನ್ನು ಹಾಗೂ ನೌಕರರನ್ನು ಹೆದರಿಸಿ, ಬೆದರಿಸಿ ನಿಮ್ಮ ಮೇಲೆ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಅವರಿಂದ ಪ್ರತಿ ತಿಂಗಳು ಹಣ ವಸೂಲಿ ಮಾಡುತ್ತಿರುವುದಾಗಿ ತಿಳಿದುಬಂದಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈತನ ಗೊಡ್ಡು ಬೆದರಿಕೆ ಹಾಗೂ ಬ್ಲಾಕ್ ಮೇಲ್ ತಂತ್ರಕ್ಕೆ ಬಗ್ಗದೇ ಇದ್ದಾಗ ಹತಾಶನಾಗಿ ಪಿಡಿಒ ಟಿ.ವೀರೇಶ್ ಅವರ ಮೇಲೆ ಮರಣಾಂತಿಕ ಹಲ್ಲೆ ಮಾಡಲು ಯತ್ನಿಸಿ, ಸರ್ಕಾರಿ ಕಾಗದ ಪತ್ರಗಳು ಇರುವ ದಾಖಲೆಗಳನ್ನು ಹರಿದು ಹಾಕಿ, ಆಕ್ರೋಶಭರಿತನಾಗಿ ನಿಮ್ಮನ್ನು ಕೊಲೆ ಮಾಡುವುದಾಗಿ ಬೆದರಿಸಿರುತ್ತಾರೆ.

ಈ ಕುರಿತು ಚಿತ್ರದುರ್ಗ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈಗಾಗಲೆ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು.

ಸತೀಶ್ ಕುಮಾರ್ ಅಲಿಯಾಸ್ ಸತೀಶ್ ನಾಯ್ಕ್‍ರವರನ್ನು ಕೂಡಲೇ ಬಂಧಿಸಿ, ಗೂಂಡಾ ಕಾಯ್ದೆಯನ್ವಯ ರೌಡಿ ಶೀಟರ್ ಎಂದು ಪ್ರಕರಣ ದಾಖಲಿಸಬೇಕು. ಸರ್ಕಾರಿ ನೌಕರರಿಗೆ ತೊಂದರೆಯಾಗದ ರೀತಿಯಲ್ಲಿ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿ, ಪ್ರಾಮಾಣಿಕವಾಗಿ ಜಿಲ್ಲೆಗೆ ಕೀರ್ತಿ ತರುವ ರೀತಿಯಲ್ಲಿ, ಭಯಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯ ಮಾಡಿದರು.

ಇದನ್ನೂ ಓದಿ: ಆಯುರ್ವೇದಿಕ್‍ ಪದ್ದತಿಗೆ ಮುಂದೆ ಉತ್ತಮ ಭವಿಷ್ಯವಿದೆ | ಎಂ.ಸಿ.ರಘುಚಂದನ್ | Ayurvedic

ಇದಕ್ಕೂ ಮುನ್ನ ರಾಜ್ಯ ಸರ್ಕಾರಿ(Government employees protest) ನೌಕರರು ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಮೌನ ಮೆರವಣಿಗೆ ನಡೆಸಿ, ಪ್ರತಿಭಟನೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಅಧ್ಯಕ್ಷ ಮಾಲತೇಶ ಮುದ್ದಜ್ಜಿ, ಜಿಲ್ಲಾ ಕಾರ್ಯದರ್ಶಿ ಆರ್.ಶ್ರೀನಿವಾಸ್, ಖಜಾಂಚಿ ಮಲ್ಲಿಕಾರ್ಜುನ್, ರಾಜ್ಯ ಪರಿಷತ್ ಸದಸ್ಯ ಎಸ್.ರಾಜಪ್ಪ, ಉಪಾಧ್ಯಕ್ಷ ಪೂಜಾರ್ ಪ್ರಕಾಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಬಸವರಾಜಪ್ಪ, ಪಿಡಿಒ ಸಂಘದ ಜಿಲ್ಲಾ ಅಧ್ಯಕ್ಷ ನಯಾಜ್ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಉಪಸ್ಥಿತರಿದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:attackChitradurgaChitradurga NewsGovernment EmployeesKannada NewsNammajana.comProtestಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಪಿಡಿಓ ಮೇಲೆ ಹಲ್ಲೆಪ್ರತಿಭಟನೆಮೌನ ಪ್ರತಿಭಟನೆಸರ್ಕಾರಿ ನೌಕರರುಹಲ್ಲೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Today Adike Rate | ಅಡಕೆ ಧಾರಣೆ | 25 ಸೆಪ್ಟೆಂಬರ್ 2025 | ರಾಶಿ ಅಡಿಕೆ ಬೆಲೆ ಎಷ್ಟಿದೆ?
Next Article ತೀವ್ರಗತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ | ಬೆಸ್ಕಾಂ ಅಧಿಕಾರಿಗಳೊಂದಿಗೆ ಮಾಹಿತಿ ಸಮನ್ವಯಕ್ಕೆ ಸೂಚನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?