
ಗೃಹಲಕ್ಷ್ಮಿ ಹಣದಲ್ಲಿ ಹೊಲಿಗೆ ಯಂತ್ರ (Grilahakshmi Yojana) ಖರೀದಿ, ಹೈನುಗಾರಿಕೆ, ಬಟ್ಟೆ ವ್ಯಾಪಾರಕ್ಕೆ ಬಂಡವಾಳ
ಮಕ್ಕಳ ಶಾಲೆ ಶುಲ್ಕ, ವೈದ್ಯಕೀಯ ಖರ್ಚು, ದಿನಸಿ ಖರೀದಿ ಹೀಗೆ ನಾನಾ ರೀತಿಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ನೀಡುವ ರೂ.2000 (Grilahakshmi Yojana) ಸದ್ಬಳಕೆಯಾಗುತ್ತಿದೆ. ಇದರೊಂದಿಗೆ ಕೆಲ ಮಹಿಳೆಯರು ಸ್ವಂತ ವ್ಯಾಪಾರ, ಹೊಲಿಗೆ ಯಂತ್ರ ಖರೀದಿ, ಹೈನುಗಾರಿಕೆ, ಮನೆಗೆ ಪ್ರಿಡ್ಜ್ ಖರೀದಿಸಿ ಗೃಹಲಕ್ಷ್ಮೀ ಯೋಜನೆಯ ಸದುಯೋಗ ಪಡೆದುಕೊಂಡಿದ್ದಾರೆ.
ಜಿಲ್ಲೆಯಲ್ಲಿ ಕಳೆದ 2023 ರ ಆಗಸ್ಟ್ 30 ರಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನೇತೃತ್ವದಲ್ಲಿ ಜರುಗಿದ ಸಮಾರಂಭದಲ್ಲಿ ಗೃಹಲಕ್ಷ್ಮಿ ಯೋಜನೆಗೆ (Grilahakshmi Yojana) ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ಇದೀಗ ಈ ಯೋಜನೆಯ ಸದ್ವಿನಿಯೋಗದ ಪರಿಣಾಮಗಳು ಜಿಲ್ಲೆಯಲ್ಲಿ ಗೋಚರಿಸಲಾರಂಭಿಸಿದ್ದು, ಮಹಿಳೆಯರ ಪಾಲಿಗೆ ಈ ಯೋಜನೆ ನಿಜಕ್ಕೂ ವರದಾನವಾಗಿದೆ.
ರೂ.963 ಕೋಟಿ ಜಮೆ:
ಚಿತ್ರದುರ್ಗ ಜಿಲ್ಲೆಯಲ್ಲಿ 4,05,282 ಪಡಿತರ ಚೀಟಿಗಳು ಇದ್ದು, ಇದರಲ್ಲಿ 3,91,639 ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯಡಿ ನೊಂದಣಿಯಾಗಿರುತ್ತಾರೆ. ಜಿಲ್ಲೆಯ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಸೆಪ್ಟಂಬರ್ ಅಂತ್ಯದ (Grilahakshmi Yojana) ವರೆಗೂ 963.58 ಕೋಟಿ ರೂ. ಜಮೆ ಮಾಡಲಾಗಿದೆ. ಇ-ಕೆವೈಸಿ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್, ನಿಷ್ಕ್ರಿಯಗೊಂಡ ಬ್ಯಾಂಕ್ ಖಾತೆ ಮುಂತಾದ ಸಮಸ್ಯೆಗಳನ್ನು ಪರಿಹರಿಸಿ, ಅರ್ಹ ಮಹಿಳೆಯರಿಗೆ ಸಹ ಗೃಹಲಕ್ಷ್ಮೀ ಹಣ ಜಮೆ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕ್ರಮ ಕೈಗೊಂಡಿದೆ.

ಹೊಲಿಗೆ ಯಂತ್ರ ಖರೀದಿ :

ಜಿಲ್ಲೆಯ ಕಲ್ಕೆರೆ ಗ್ರಾಮದ ದ್ರಾಕ್ಷಾಯಿಣಿ ಪ್ರತಿ ತಿಂಗಳು ಬರುತ್ತಿದ್ದ ಗೃಹಲಕ್ಷಿ ಯೋಜನೆಯ 2000 ಸಾವಿರ ರೂ.ಗಳನ್ನು ಕೂಡಿಸಿಟ್ಟುಕೊಂಡು, ಸ್ವಂತಕ್ಕೆ ಹೊಲಿಗೆ ಯಂತ್ರ ಖರೀದಿಸಿದ್ದು, ಮನೆಯ ಬದುಕಿಗೆ ದಾರಿದೀಪವಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಅದೇ ರೀತಿ ಬೇಡರ ಶಿವನಕೆರೆ ಗ್ರಾಮ ಸುನಿತಾ, ಗೃಹಲಕ್ಷ್ಮೀ ಯೋಜನೆ ಫಲಾನುಭವಿಯಾಗಿದ್ದಾರೆ. 14 ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು (Grilahakshmi Yojana) ರೂ.2000 ಹಣ ಅವರ ಖಾತೆಗೆ ಜಮೆಯಾಗುತ್ತಿದೆ.
ಇದನ್ನೂ ಓದಿ: ಈ ಸ್ಥಳದಲ್ಲಿ ಬೊರ್ವೇಲ್ ಕೊರೆಯಲು ಅನುಮತಿ: ಡಿಸಿ | Tube well
ಮಕ್ಕಳ ಶಾಲೆ ಶುಲ್ಕ ಜೊತೆಗೆ ಟೈಲರ್ ವೃತ್ತಿಯನ್ನು ಆರಂಭಿಸಿ ದುಡಿಮೆಯ ಮಾರ್ಗ ಕಂಡಕೊಳ್ಳಲು ಯೋಚಿಸಿದ ಸುನಿತಾ ಗೃಹಲಕ್ಷ್ಮೀ ಹಣದಲ್ಲಿ ಹೊಸ ಹೊಲಿಗೆ ಯಂತ್ರ ಖರೀದಿ ಮಾಡಿಗೃಹಲಕ್ಷ್ಮಿ ಯೋಜನೆ ಪ್ರತಿಯೊಂದು ಅರ್ಹ ಮಹಿಳೆಯರಿಗೆ ತಲುಪಿಸಬೇಕೆನ್ನುವುದು ಜಿಲ್ಲಾಡಳಿತದ ಆಶಯವಾಗಿದ್ದು, ಅನುಷ್ಠಾನದಲ್ಲಿರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ, ತ್ವರಿತಗತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಬೇಕು.

ಮಹಿಳೆಯರು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎನ್ನುತ್ತಾರೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು.ಜಿಲ್ಲೆಯಲ್ಲಿ ಬಾಕಿ ಉಳಿದ ಪಡಿತರ ಕಾರ್ಡು ಹೊಂದಿರುವವರ ಪೈಕಿ ಅರ್ಹರನ್ನು ಗುರುತಿಸಿ ಯೋಜನೆಯಡಿ ನೊಂದಣಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಯೋಜನೆಯಡಿ (Grilahakshmi Yojana) ನೊಂದಣಿಯಾಗದವರ ವಿವರಗಳನ್ನು ತಾಲ್ಲೂಕು ಹಾಗೂ ಗ್ರಾಮವಾರು ಸಿದ್ದಪಡಿಸಲಾಗಿದೆ.
ಇದನ್ನೂ ಓದಿ: Dina Bhavishya: ದಿನ ಭವಿಷ್ಯ | ಯಾವ್ಯಾವ ರಾಶಿಗೆ ಇಂದು ಹೇಗಿದೆ ಭವಿಷ್ಯ
ಈ ಮಾಹಿತಿಯನ್ನು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮೂಲಕ ಹಾಗೂ ತಾಲ್ಲೂಕು ಪಂಚಾಯಿತಿ ಇಓ ಹಾಗೂ ಸಿಡಿಪಿಓಗಳ ಸಮಿತಿ ರಚಿಸಿ ಸಂಪೂರ್ಣವಾಗಿ ಶೇ.100 ರಷ್ಟು ಯೋಜನೆಯನ್ನು ಜಿಲ್ಲೆಯ ಮಹಿಳೆಯರಿಗೆ (Grilahakshmi Yojana) ತಲುಪಿಸುವುದಾಗಿ ಜಿ.ಪಂ. ಸಿಇಓ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.