Chitradurga news | nammajana.com | 30-8-2024
ನಮ್ಮಜನ.ಕಾಂ, ಮೊಳಕಾಲ್ಮುರು: ಬೇರೆಯವರ ಜೊತೆ ಮಾತನಾಡುತ್ತೀಯ ಎಂದು ಅನುಮಾನಗೊಂಡು ಗಂಡತನ್ನ ಪತ್ನಿಯ ಕೆನ್ನೆ ಹಾಗೂ ಇನ್ನಿತರೆಡೆ ಇಸ್ತ್ರಿಪೆಟ್ಟಿಗೆಯಿಂದ ಸುಟ್ಟು (Harassment) ಗಾಯಗೊಳಿಸಿದ ಅಮಾನವೀಯ ಘಟನೆ ಪಟ್ಟಣದ ಪದ್ಮಸಾಲಿ ಕಲ್ಯಾಣಮಂಟಪದ ಬಳಿಯ ಬಡಾವಣೆಯಲ್ಲಿ ನಡೆದಿದ್ದು ಹಲವು ದಿನಗಳ ಬಳಿಕ ಬೆಳಕಿಗೆ ಬಂದಿದೆ.
ಎಚ್. ಪೂಜಾ ತನ್ನ ಗಂಡನಿಂದಲೇ ದೌರ್ಜನ್ಯಕ್ಕೊಳಗಾದ ಮಹಿಳೆ. ಆರೋಪಿ ಸಿ.ಎಂ. ನಾಗೇಶ, ಕಳೆದ ಆ. 14ರಂದು ರಾತ್ರಿ 9 ಗಂಟೆಗೆ ತನ್ನ ತಂದೆ-ತಾಯಿಯರನ್ನು ಸರಿಯಾಗಿ (Harassment) ಗೌರವದಿಂದ ನೋಡಿಕೊಳ್ಳುತ್ತಿಲ್ಲವೆಂದು ಆರೋಪಿಸಿ ಬೈದಾಡಿದ್ದಾನೆ.

ನಂತರ ಆ. 15ರಂದು ರಾತ್ರಿ 2 ಗಂಟೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದೇ ಅಲ್ಲದೆ ಮುದ್ದೆ ಕೋಲಿನಿಂದ ತಲೆಗೆ ಹೊಡೆದಿದ್ದ ಹೊಡೆತದಿಂದ ತಪ್ಪಿಸಿಕೊಳ್ಳಲು ಹೊರ ಹೋಗಲು ಹೊರಟಾಗ (Harassment) ಬಚ್ಚಲು ಮನೆಯೊಳಗೆ ಇಸ್ತ್ರಿಪೆಟ್ಟಿಗೆಯಿಂದ ಹೆಂಡತಿಯ ಕೆನ್ನೆ, ( ಬಲಗೈ, ಎಡಗೈ, ಎಡ ಮತ್ತು ಬಲ ತೊಡೆಯ ಹಿಂಭಾಗ ಮತ್ತು ಮುಂಭಾಗಕ್ಕೆ ಸುಟ್ಟು ಗಾಯಗೊಳಿಸಿದ್ದಾನೆ.
ಇದನ್ನೂ ಓದಿ: ಸೆ.01ರಂದು ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ | Pratibha puraskara
ಮಾವನೂ ಸಹ ಸೀರೆಯನ್ನು ಹಿಡಿದು ಎಳೆದಾಡಿ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾನೆ. ಈ ಹಿಂಸೆಯನ್ನು ತಾಳಲಾರದ ಪೂಜಾ ಮನೆಯಲ್ಲಿದ್ದ ಯಾವುದೋ 20 ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಳಾಗಿದ್ದಾಳೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ಗೆ (Harassment) ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕುರಿತು ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252