Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಇಂಗಳದಾಳ್ ಹಟ್ಟಿ ಚಿನ್ನದ ಗಣಿ ಪುನರಾರಂಭಿಸಲು ಅಗತ್ಯ ಕ್ರಮಕ್ಕೆ ಕೇಂದ್ರ ಸಚಿವರ ಸೂಚನೆ | Hatti gold mine
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಇಂಗಳದಾಳ್ ಹಟ್ಟಿ ಚಿನ್ನದ ಗಣಿ ಪುನರಾರಂಭಿಸಲು ಅಗತ್ಯ ಕ್ರಮಕ್ಕೆ ಕೇಂದ್ರ ಸಚಿವರ ಸೂಚನೆ | Hatti gold mine
ಇಂದಿನ ಸುದ್ದಿ

ಇಂಗಳದಾಳ್ ಹಟ್ಟಿ ಚಿನ್ನದ ಗಣಿ ಪುನರಾರಂಭಿಸಲು ಅಗತ್ಯ ಕ್ರಮಕ್ಕೆ ಕೇಂದ್ರ ಸಚಿವರ ಸೂಚನೆ | Hatti gold mine

Editor Nammajana
Last updated: 24 December 2024 15:02
By Editor Nammajana 2 Min Read
Share
SHARE

Chitradurga news|nammajana.com|24-12-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಇಂಗಳದಾಳ್ ನಿಂದ ಈ ಹಿಂದೆ ಕೈಗೊಳ್ಳಲಾಗುತ್ತಿದ್ದ ಚಿನ್ನದ (Hatti gold mine) ಗಣಿಗಾರಿಕೆ ಸ್ಥಗಿತಗೊಂಡಿದ್ದು, ಇದನ್ನು ಪುನರಾರಂಭಿಸುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದು, ಇದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

ಈ ಕುರಿತಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕಳೆದ ಸೆಪ್ಟಂಬರ್ 09 ರಂದು ಮನವಿ ಪತ್ರ ಸಲ್ಲಿಸಿದ್ದರು.  1886 ರಲ್ಲಿ ಇಂಗಳದಾಳಿನಲ್ಲಿ ತಾಮ್ರದ (Hatti gold mine) ಗಣಿಗಾರಿಕೆ ಪ್ರಾರಂಭವಾಗಿತ್ತು,

ಬಳಿಕ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಅವರು ಕೈಗೊಂಡ ಸರ್ವೆ ಬಳಿಕ ಇಂಗಳದಾಳು, ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಚಿನ್ನದ ನಿಕ್ಷೇಪವಿರುವುದನ್ನು ಗುರುತಿಸಿತ್ತು.

1972 ರಲ್ಲಿ ಇಂಗಳದಾಳು ತಾಮ್ರದ ಘಟಕ ಪ್ರಾರಂಭಗೊಂಡು, ಬಳಿಕ ಇದನ್ನು ಹಟ್ಟಿ ಚಿನ್ನದ ಗಣಿಯೊಂದಿಗೆ ವಿಲೀನಗೊಳಿಸಲಾಗಿತ್ತು.  1994 ರಲ್ಲಿ ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಚಿನ್ನದ ನಿಕ್ಷೇಪ ಇರುವುದನ್ನು ಖಚಿತಪಡಿಸಿಕೊಂಡು, ಈ ಭಾಗದಲ್ಲಿ ಹಟ್ಟಿ ಚಿನ್ನದ ಗಣಿಯ ಸಹಯೋಗದಲ್ಲಿ 2002 ರವರೆಗೂ ಗಣಿಗಾರಿಕೆ ನಡೆಸಲಾಗಿತ್ತು.

ಗಣಿ ತಜ್ಞರು ಮತ್ತು ಭೂವಿಜ್ಞಾನಿಗಳು ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಉತ್ತಮ ಪ್ರಮಾಣದಲ್ಲಿ ಚಿನ್ನದ ನಿಕ್ಷೇಪವಿದ್ದು, ಚಿನ್ನದ ಗಣಿಗಾರಿಕೆಗೆ ಸೂಕ್ತವಾಗಿದೆ ಎಂಬುದಾಗಿ ತಿಳಿಸಿದ್ದು, ಈ ಕುರಿತಂತೆ ಸಂಬಂಧಪಟ್ಟವರಿಂದ ಮತ್ತೊಮ್ಮೆ ಪರಿಶೀಲನೆ ನಡೆಸಿ, ಚಿತ್ರದುರ್ಗದ ಚಿನ್ನದ ಗಣಿಗಾರಿಕೆ (Hatti gold mine) ಘಟಕವನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಕೇಂದ್ರ ಸಚಿವರಿಂದ ಶಾಸಕ ವೀರೇಂದ್ರ ಪಪ್ಪಿ ಮನವಿಗೆ ಸ್ಪಂದನೆ

ಇದಕ್ಕೆ ಸ್ಪಂದಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲು ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದರು.

ಇದೀಗ ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಜಿ. ಕಿಶನ್ ರೆಡ್ಡಿ ಅವರು ಕೂಡ ಸ್ಪಂದಿಸಿದ್ದು, ಚಿತ್ರದುರ್ಗ ಚಿನ್ನದ ಗಣಿಗಾರಿಕೆ ಘಟಕ ಪುನರಾರಂಭಿಸಲು ನಿಯಮಾನುಸಾರ ಸೂಕ್ತ ಕ್ರಮ (Hatti gold mine) ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: Suspended | ಮಂಚ ದಿಂಬು ಮಾರಿಕೊಂಡ ಹಾಸ್ಟೆಲ್ ವಾರ್ಡನ್ ಸಸ್ಪೆಂಡ್

ಚಿತ್ರದುರ್ಗ ಚಿನ್ನದ ಗಣಿಗಾರಿಕೆ ಪುನರಾರಂಭಕ್ಕೆ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸಲ್ಲಿಸಿರುವ ಮನವಿಗೆ (Hatti gold mine) ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Chitradurga Newshatti chinnada ganiHatti Gold MineIngaldalKannada Newskannada suddiKC Virendra PappiKishan ReddyMLANammajana.comPunarrambhaSpandaneUnion Minister HD Kumaraswamyಇಂಗಳದಾಳ್ಕನ್ನಡ ನ್ಯೂಸ್ಕನ್ನಡ ಸುದ್ದಿಕಿಶನ್ ರೆಡ್ಡಿಕೆ.ಸಿ.ವೀರೇಂದ್ರ ಪಪ್ಪಿಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪುನಾರರಾಂಭಶಾಸಕಸ್ಪಂದನೆಹಟ್ಟಿ ಚಿನ್ನದ ಗಣಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Suspended | ಮಂಚ ದಿಂಬು ಮಾರಿಕೊಂಡ ಹಾಸ್ಟೆಲ್ ವಾರ್ಡನ್ ಸಸ್ಪೆಂಡ್
Next Article ದಿನ ಭವಿಷ್ಯ | ಹೇಗಿದೆ ಇಂದಿ‌ನ ರಾಶಿ‌ ಭವಿಷ್ಯ | Kannada Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?