Chitradurga news | nammajana.com | 06-07-2025
ನಮ್ಮಜನ.ಕಾಂ, ಹಿರಿಯೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರಲ್ಲಿನ ನಿಯಮ 63 ರನ್ವಯ ಒಟ್ಟು 4 ಸ್ಥಾಯಿ ಸಮಿತಿಗಳನ್ನು ರಚಿಸಲು ಸೂಚಿಸಿರುವಂತೆ ಜು.5ರಂದು ಹಿರಿಯೂರು(HIRIYUR) ನಗರಸಭೆಯ ವಿಶೇಷ ಸಾಮಾನ್ಯ ಸಭೆಯಲ್ಲಿ ನಾಲ್ಕು ಸ್ಥಾಯಿಸಮಿತಿಗಳನ್ನು ರಚಿಸಲಾಯಿತು.
ಇದನ್ನೂ ಓದಿ: ಇಂದು ಬಂಗಾರದ ಬೆಲೆ ಎಷ್ಟಿದೆ?

ಪ್ರತಿಯೊಂದು ಸಮಿತಿಯಲ್ಲಿ 7 ಜನ ಸದಸ್ಯರನ್ನು ಹಾಗೂ ಸಮಿತಿಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲುಗಳು ಸಮಿತಿಗೆ ಅಧ್ಯಕ್ಷರಾಗಿ ವಿಠಲ್ ಪಾಂಡು ರಂಗ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿಗೆ ಎಂ ಡಿ ಸಣ್ಣಪ್ಪ, ಪಟ್ಟಣ(HIRIYUR) ಯೋಜನೆ ಮತ್ತು ಪುರೋಭಿವೃದ್ಧಿ ಸಮಿತಿಗೆ ಎಲ್ ಜಿ ರತ್ನಮ್ಮ, ಲೆಕ್ಕಪತ್ರಗಳು ಸಮಿತಿಗೆ ಎನ್.ಮಮತಾರನ್ನು ಅಧ್ಯಕ್ಷರ ನ್ನಾಗಿ ಘೋಷಿಸಲಾಯಿತು.
ಇದನ್ನೂ ಓದಿ: ಭರಮಸಾಗರಕ್ಕೆ ಬಂದ ತುಂಗಭದ್ರೆ
ಪ್ರಭಾರ ಅಧ್ಯಕ್ಷೆ ಎಚ್ ಮಂಜುಳಾ, ಪೌರಾಯುಕ್ತ ಎ.ವಾಸಿಂ, ವ್ಯವಸ್ಥಾಪಕಿ ಬಿ.ಆರ್. ಮಂಜುಳಾ, ನಗರಸಭೆ ಸದಸ್ಯರು, ಸಿಬ್ಬಂದಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252