Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Hiriyur: ಹಿರಿಯೂರು ನಗರಸಭೆ ಅಧ್ಯಕ್ಷರ ಆಯ್ಕೆ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಫ್ರೆಂಡ್ಸ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > Hiriyur: ಹಿರಿಯೂರು ನಗರಸಭೆ ಅಧ್ಯಕ್ಷರ ಆಯ್ಕೆ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಫ್ರೆಂಡ್ಸ್
ರಾಜಕೀಯ

Hiriyur: ಹಿರಿಯೂರು ನಗರಸಭೆ ಅಧ್ಯಕ್ಷರ ಆಯ್ಕೆ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಫ್ರೆಂಡ್ಸ್

Editor Nammajana
Last updated: 20 August 2024 10:09
By Editor Nammajana 3 Min Read
Share
SHARE

Chitradurga news | nammajana.com | 20-8-2024

ನಮ್ಮಜ‌ನ.ಕಾಂ, ಹಿರಿಯೂರು: ಹಿರಿಯೂರು ನಗರಸಭೆಯ 2ನೇ ಅವಧಿಗೆ ನೂತನ ಅಧ್ಯಕ್ಷರಾಗಿ 22 ನೇ ವಾರ್ಡ್ ನ ಸದಸ್ಯ ಜೆ.ಆರ್. ಅಜಯ್ ಕುಮಾರ್‌ ಹಾಗೂ ಉಪಾಧ್ಯಕ್ಷೆಯಾಗಿ 28 (Hiriyur) ನೇ ವಾರ್ಡ್ ನ ಅಂಬಿಕಾ ಆರಾಧ್ಯ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ಸುಮಾರು 16 ತಿಂಗಳ ನಂತರ ನಗರಸಭೆಯ 2ನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ಪ್ರಕಟವಾಗಿದ್ದು ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ(ಎ) ಹಾಗೂ ಉಪಾಧ್ಯಕ್ಷ ಸ್ಥಾನವು (Hiriyur) ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾತಿ ಪ್ರಕಟವಾಗಿತ್ತು.

ಸೋಮವಾರ ನಗರಸಭೆ ಸಭಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ 22ನೇ ವಾರ್ಡ್ ಸದಸ್ಯ ಜೆ.ಆರ್.ಆಜಯ್ ಕುಮಾರ್‌ಗೆ ಅಧ್ಯಕ್ಷಸ್ಥಾನಹಾಗೂ 28 ನೇ ವಾರ್ಡ್ ನ ಅಂಬಿಕಾ ಆರಾಧ್ಯ ಉಪಾಧ್ಯಕ್ಷೆ ಸ್ನಾನಕ್ಕೆ ನಾಮಪತ್ರ ಸಲ್ಲಿಸಿದರು.

ಮತ್ಯಾರು ನಾಮಪತ್ರ ಸಲ್ಲಿಸದೆ ಇದ್ದಿದ್ದರಿಂದ ಚುನಾವಣಾಧಿ ಕಾರಿಯಾಗಿದ್ದ ಉಪವಿಭಾಗಾಧಿಕಾರಿ ಕಾರ್ತಿಕ್ ಅಜಯ್ ಕುಮಾರ್‌ಹಾಗೂ ಅಂಬಿಕಾ ಆರಾಧ್ಯರನ್ನು ಅವಿರೋಧ ಆಯ್ಕೆ ಎಂದು ಘೋಷಿಸಿದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರ (Hiriyur) ಆಯ್ಕೆಯ ನಂತರ ನಗರದ ಪ್ರಮುಖ ರಸ್ತೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆಯ ನಂತರ ಮೆರವಣಿಗೆ ನಡೆಸಲಾಯಿತು.

ನಗರಸಭೆ ಮುಂಭಾಗದಲ್ಲಿ ಸದಸ್ಯರು, ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಮುಖಂಡರು ಘೋಷಣೆಗಳನ್ನು ಕೂಗುತ್ತಾ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಅನಂತರ ನಗರದ ಮುಖ್ಯ ರಸ್ತೆಯಲ್ಲಿ ಮೆರವಣೆಗೆ ಮೂಲಕ ತೆರಳಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನ, ನೇಕ್ ಬೇಬಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ನಾಯಕನಹಟ್ಟಿ (Hiriyur) ತಿಪ್ಪೇರುದ್ರಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು. ನಗರಸಭೆಯ ಒಟ್ಟು 31 ಸದಸ್ಯ ಬಲದಲ್ಲಿ 30 ಸದಸ್ಯರು ಒಮ್ಮತದ ತೀರ್ಮಾನ ತೆಗೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಧ್ಯಕ್ಷರಾಗಲು ಸಹಕಾರಿ ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ.

ಇದನ್ನೂ ಓದಿ: ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ | VV Sagara water level

ಆರಂಭದಲ್ಲಿ ಕಾಂಗ್ರೆಸ್ ನ 21, ಜೆಡಿಎಸ್ 1, ಬಿಜೆಪಿಯ 6 ಮತ್ತು ಮೂವರು ಪಕ್ಷೇತರ ಸದಸ್ಯರಿದ್ದರು. ನಂತರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಪರಿಣಾಮ ಜೆಡಿಎಸ್ ಹಾಗೂ ಪಕ್ಷೇತರ ಸದಸ್ಯರು ಕಾಂಗ್ರೆಸ್ ಪಕ್ಷದ ಜೊತೆಗೆ ಗುರುತಿಸಿಕೊಂಡರು.

ವಿಧಾನಸಭಾ ಚುನಾವಣೆಯ ನಂತರ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಕಾರಣ ಬಿಜೆಪಿಯ ಐದು ನಗರಸಭೆ ಸದಸ್ಯರು ಸಹ ಕಾಂಗ್ರೆಸ್ ಜೊತೆಯಲ್ಲಿ ಗುರುತಿಸಿಕೊಂಡರು. ಬಿಜೆಪಿಯ ಒಬ್ಬ ಸದಸ್ಯ ಮಾತ್ರ ಬಿಜೆಪಿಯಲ್ಲಿ ಉಳಿದರು. ಹಾಗಾಗಿ ಕಾಂಗ್ರೆಸ್ (Hiriyur) ಸದಸ್ಯರೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿತ್ತು.

ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಕಾಟಕ್ಷಿಗಳ ಹಿಂಡೇ ಇತ್ತು. ಅಧ್ಯಕ್ಷ ಸ್ಥಾನಕ್ಕೆ ಶಿವರಂಜನಿ, ಚಿತ್ರಜಿತ್ ಯಾದವ್, ಜಬೀವುಲ್ಲಾ, ಶಂಷುನ್ನೀಸಾ, ಆರ್. ಬಾಲಕೃಷ್ಣ, ಗೀತಾ ಗಂಗಾಧರ್, ಜಗದೀಶ್, ಸಮೀವುಲ್ಲಾ ಹಾಗೂ ವೈಪಿಡಿ. ದಾದಾಪೀರ್ ಸೇರಿದಂತೆ 9 ಸದಸ್ಯರು ಪ್ರಯತ್ನಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಜಯವಾಣಿ, ಅಂಬಿಕಾ ಆರಾಧ್ಯ, ದೇವೀರಮ್ಮ ಹಾಗೂ ಎಚ್. ಮಂಜುಳಾ ಆಕಾಂಕ್ಷಿಯಾಗಿದರು.

ಇದನ್ನೂ ಓದಿ: PDO Suspended: ಪಿಡಿಓ ಎಸ್. ಬಸವರಾಜ್ ಅಮಾನತು

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟನಂತರ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇತ್ತೀಚೆಗೆ ಎಲ್ಲಾ ಸದಸ್ಯರ ಸಭೆ ಕರೆದು ಅಭಿಪ್ರಾಯ ಪಡೆದಿದ್ದರು. ಅಂತಿಮವಾಗಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸದಸ್ಯಸುಧಾಕರ್ (Hiriyur) ಜೆ.ಆರ್.ಅಜಯ್ ಕುಮಾರ್‌ ಹೆಸರು ಸೂಚಿಸಿದ ಮೇಲೆ ಆಕಾಟಕ್ಷಿಗಳು ಹಿಂದೆ ಸರಿದರು.

ಬಾಕ್ಸ್

ಮುಖ್ಯವಾಗಿ ಸಚಿವರ ಸಹಕಾರ, ಸದಸ್ಯರ ಸಹಕಾರ ಪಡೆದು ನಗರವನ್ನು ಸುಂದರೀಕರಣ ಮತ್ತು ಸ್ವಚ್ಛ ನಗರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಗರ ವ್ಯಾಪ್ತಿಯ ಎಲ್ಲಾ ನಾಗರೀಕರ ಸೇವೆಗೂ ನಾನು ಸದಾ ಬದ್ಧನಿದ್ದೇನೆ ಎಂದರು.

• ಅಜಯ್ ಕುಮಾರ್ ಹಿರಿಯೂರು ನೂತನ ನಗರಸಭೆ ಅಧ್ಯಕ್ಷ

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

TAGGED:Chitradurga NewsCity CouncilCongress victoryD. SudhakarElectionHiriyurKannada Newskannada suddiMinisterNammajana.comSecond Termಎರಡನೇ ಅವಧಿಕನ್ನಡ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ ಗೆಲುವುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಚುನಾವಣೆಡಿ. ಸುಧಾಕರ್ನಗರಸಭೆನಮ್ಮಜನ.ಕಾಂಸಚಿವಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಧರ್ಮಸ್ಥಳ ಸಂಘದಿಂದ 104 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯ ವೇತನ ವಿತರಣೆ | Dharamsthala
Next Article Chitradurga: ಜಿಲ್ಲಾಸ್ಪತ್ರೆಯಲ್ಲಿ ಎಕ್ಸ್‌ರೇ, ಲ್ಯಾಬ್ ಟೆಸ್ಟ್ ಉಚಿತ | ಯಾರಿಗೆಲ್ಲ ಉಚಿತ ನೋಡಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?