Chitradurga news|nammajana.com|2-10-2024
ನಮ್ಮಜನ.ಕಾಂ, ಹಿರಿಯೂರು: ತಾಲೂಕಿನ ಜೆಜಿಹಳ್ಳಿ ಹೋಬಳಿ ಕೆ.ಆರ್. ಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ದಾಸೇಗೌಡ, ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ (HIRIYUR NEWS) ಜಿಲ್ಲಾಧಿಕಾರಿಗಳು ಸರಕಾರಿ ಸೇವೆಯಿಂದ ಅಮಾನತುಗೊಳಿಸಿ, ಆದೇಶ ಹೊರಡಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿ ದಾಸೇಗೌಡ, ಕಚೇರಿ ಹೊರಗಡೆ ನಿಂತು ಫೋನ್ ಕರೆಯಲ್ಲಿ ಮಾತನಾಡುತ್ತಾ, ನಾನು ಆರ್ಐಗೆ ಕೊಡಬೇಕು, ಪೀಜ್ ಕಟ್ಟಬೇಕು, ಇದೆಲ್ಲಾ ಕೆಲಸ ಮುಗಿಸಿದರೂ ನನಗೆ ಉಳಿಯುವುದು ಐನೂರು ರೂಪಾಯಿ ಮಾತ್ರ. ಇನ್ನೂ (HIRIYUR NEWS) ಹದಿನೈದು ದಿನದಲ್ಲಿ ನಿಮ್ಮ ಕೆಲಸ ಮಾಡಿಕೊಡುತ್ತೇನೆಂದು ಭರವಸೆ ನೀಡಿರುವ ವಿಡಿಯೋ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಇದನ್ನೂ ಓದಿ: Dina Bhavishya:ಇಂದಿನ ದಿನ ಭವಿಷ್ಯದಲ್ಲಿ ಯಾರಿಗೆ ಉದ್ಯೋಗ ಲಾಭ?
ಇದರಿಂದ ಮಂಗಳವಾರ ಜಿಲ್ಲಾಧಿಕಾರಿಗಳು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖೆ ವಿಚಾರಣೆ ಕಾಯ್ದಿರಿಸಿ, ಸರಕಾರಿ ಸೇವೆಯಿಂದ ಆಮಾನತ್ತುಗೊಳಿಸಿದ್ದಾರೆ. ಅಲ್ಲದೇ ಅಮಾನತುಗೊಂಡ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ (HIRIYUR NEWS) ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡದಂತೆ ಹಾಗೂ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಆದೇಶ ಹೊರಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252