Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ | ಜಿಲ್ಲೆಯಲ್ಲಿ 1.20 ಲಕ್ಷ ಜನರಿಂದ 145 ಕಿಲೋ ಮೀಟರ್ ಮಾನವ ಸರಪಳಿ | Human chain
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ | ಜಿಲ್ಲೆಯಲ್ಲಿ 1.20 ಲಕ್ಷ ಜನರಿಂದ 145 ಕಿಲೋ ಮೀಟರ್ ಮಾನವ ಸರಪಳಿ | Human chain
ಇಂದಿನ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ 1.20 ಲಕ್ಷ ಜನರಿಂದ 145 ಕಿಲೋ ಮೀಟರ್ ಮಾನವ ಸರಪಳಿ | Human chain

Editor Nammajana
Last updated: 12 September 2024 15:45
By Editor Nammajana 3 Min Read
Share
SHARE

Chitradurga news | nammajana.com | 12-9-2024

ನಮ್ಮಜನ.ಕಾಂ,  ಚಿತ್ರದುರ್ಗ: ಇದೇ ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 145 ಕಿ.ಮೀ ಮಾನವ ಸರಪಳಿ (Human chain)ನಿರ್ಮಿಸಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಸುಮಾರು 1.20 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ (Human chain) ಮಾನವ ಸರಪಳಿ ರಚಿಸುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಆಗಮಿಸಿದಾಗ ಕಾರ್ಯಕ್ರಮ ಅರ್ಥಪೂರ್ಣವಾಗಲಿದೆ.

ಈ ನಿಟ್ಟಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಕರು, ಸಂಘ-ಸಂಸ್ಥೆಗಳ ಸದಸ್ಯರು,  ಜನಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಕಡ್ಡಾಯವಾಗಿ ಸರ್ಕಾರಿ (Human chain) ಅಧಿಕಾರಿಗಳು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯ ಗಡಿಭಾಗ ಮೊಳಕಾಲ್ಮುರು ತಾಲ್ಲೂಕಿನ ಮೇಲಿನ ಕಣಿವೆ ಗ್ರಾಮದಿಂದ ಹಿರಿಯೂರು ತಾಲ್ಲೂಕಿನ (Human chain) ಜವಗೊಂಡನಹಳ್ಳಿಯವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 145 ಕಿ.ಮೀ ದೂರದವರೆಗೆ ಮಾನವ ಸರಪಳಿ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಸುಮಾರು 1.20 ಲಕ್ಷ ಜನರು ಭಾಗವಹಿಸಲಿದ್ದಾರೆ.

ಈ ಕುರಿತು ಕಳೆದ ವಾರದಿಂದಲೂ ಎಲ್ಲ ತಾಲ್ಲೂಕುಗಳಲ್ಲಿಯೂ ನಿರಂತರವಾಗಿ ಸಭೆಗಳನ್ನು ನಡೆಸಿ, ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕುಗಳಲ್ಲಿ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಉಳಿದ ಮೂರು ತಾಲ್ಲೂಕುಗಳಾದ ಚಿತ್ರದುರ್ಗ, ಹೊಳಲ್ಕೆರೆ (Human chain) ಹಾಗೂ ಹೊಸದುರ್ಗ ತಾಲ್ಲೂಕುಗಳ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಸೆ.15ರಂದು ಬೆಳಿಗ್ಗೆ 9.30 ರಿಂದ 10.30 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮವೂ ನಡೆಯಲಿದೆ.

ರಾಜ್ಯಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮ ನಡೆಯುವುದರಿಂದ ಮಾನವ ಸರಪಳಿ ಕಾರ್ಯಕ್ರಮ ಗಿನ್ನೆಸ್ ದಾಖಲೆಯಾಗಲಿದೆ. ಹಾಗಾಗಿ ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಕರ್ಷಕವಾಗಿ ಹಾಗೂ ವಿಶೇಷ ಕಾಳಜಿ ವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕರ್ನಾಟಕ ಉತ್ತರ ತುದಿಯಿಂದ ದಕ್ಷಿಣ ತುದಿಯವರೆಗೆ ಅಂದರೆ ಬೀದರ್‍ನಿಂದ ಚಾಮರಾಜನಗರ ವರೆಗೆ, ಸುಮಾರು 25 ಲಕ್ಷ ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲು ಸರ್ಕಾರ ನಿರ್ಧರಿಸಿದೆ.

ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭಾತೃತ್ವದ ಆದರ್ಶಗಳು ಭಾರತೀಯ ಸಂವಿಧಾನ ಪೀಠಿಕೆಯ ಭಾಗ. ಪ್ರಜಾಪ್ರಭುತ್ವದ ಅಂಶಗಳನ್ನು ಪ್ರತಿಯೊಬ್ಬರಿಗೂ ಮುಟ್ಟಿಸುವ ಕಾಳಜಿಯಿಂದ ಮಾನವ ಸರಪಳಿ ನಿರ್ಮಾಣ ಮಾಡುವ (Human chain) ಮೂಲಕ ಪ್ರಜಾಪ್ರಭುತ್ವ ಮೌಲ್ಯ ಗೌರವಿಸುವಂತಹ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಅಡಕೆ ಧಾರಣೆ | 12 ಸೆಪ್ಟೆಂಬರ್ 2024 | ಶಿವಮೊಗ್ಗ ಸೇರಿ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್ ? | Adike Rate

ಸಭೆಯಲ್ಲಿ ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ನಾಯಕನಹಟ್ಟಿ ಪ.ಪಂ. ಅಧ್ಯಕ್ಷೆ ಮಂಜುಳಾ ಶ್ರೀಕಾಂತ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ನಗರಸಭೆ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:1.20 lakh people1.20 ಲಕ್ಷ ಜನChitradurgaChitradurga DistrictChitradurga NewsHuman chainKannada Newskannada suddiNammajana.comSeptember 15ಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಾನವ ಸರಪಳಿಸೆಪ್ಟೆಂಬರ್ 15
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article ಅಡಕೆ ಧಾರಣೆ | 12 ಸೆಪ್ಟೆಂಬರ್ 2024 | ಶಿವಮೊಗ್ಗ ಸೇರಿ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್ ? | Adike Rate
Next Article ಖಾಸಗಿ ಬಸ್ ಟಾಪ್ ಮೇಲೆ ರಾಶಿ ಜನ | ಬಸ್ ಚಾಲಕ, ಮಾಲೀಕನ ವಿರುದ್ದ ಕೇಸ್ ದಾಖಲು | Private bus
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?