Chitradurga News | Nammajana.com | 6-5-2024
ನಮ್ಮಜನ.ಕಾಂ.ಚಿತ್ರದುರ್ಗ: ಚಿತ್ರದುರ್ಗ ಬಯಲುಸೀಮೆ ಅಭಿವೃದ್ಧಿ ಮಂಡಳಿ ಪ್ರಭಾರ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ.
ಮೇ 6 ರಂದು ಮಧ್ಯಾಹ್ನ 3 ಗಂಟೆಗೆ ಹಣ ಪಡೆಯುವ ಸಮಯದಲ್ಲಿ ಲೋಕಯುಕ್ತ ಬಲೆಗೆ ಬಿದ್ದಿದ್ದು ಕಾಮಗಾರಿ ಆಡಳಿತಾತ್ಮಕ ಮಂಜೂರು ಮಾಡಲು 4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಈ ಹಿನ್ನೆಲೆಯಲ್ಲಿ ಬಸವರಾಜಪ್ಪ ವಿರುದ್ಧ ಜಗಳೂರು ಮೂಲದ ಸಿದ್ದನಗೌಡ ಎಂಬ ವ್ಯಕ್ತಿಯು ಲೋಕಯುಕ್ತಕ್ಕೆ ದೂರು ನೀಡಿದ್ದರು.

ಇಂದು ಸಿದ್ದನಗೌಡ 4 ಲಕ್ಷ ಹಣ ತೆಗೆದುಕೊಂಡು ಬಸವರಾಜಪ್ಪ ಅವರಿಗೆ ನೀಡುವ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಬಸವರಾಜಪ್ಪ ಲೋಕಯುಕ್ತ ಸಿಲುಕಿದ್ದಾರೆ.
ಇದನ್ನೂ ಓದಿ: ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ | ಭೇಟಿ ಉತ್ಸವದ ಹಿನ್ನೆಲೆ ನೀವು ಓದಿ
ಈ ದಾಳಿಯನ್ನು ಲೋಕಯುಕ್ತ ಎಸ್ಪಿ ವಾಸದೇವ್ ರಾವ್ ಮತ್ತು ಡಿವೈಎಸ್ಪಿ ಮೃತ್ಯಂಜಯ ಅವರ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252