Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಬರ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಏತ ನೀರಾವರಿ ಯೋಜನೆ ಅನಿವಾರ್ಯ |irrigation
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಬರ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಏತ ನೀರಾವರಿ ಯೋಜನೆ ಅನಿವಾರ್ಯ |irrigation
Blog

ಬರ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಏತ ನೀರಾವರಿ ಯೋಜನೆ ಅನಿವಾರ್ಯ |irrigation

Editor Nammajana
Last updated: 4 October 2024 4:44 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga News|nammajana.com|4-10-2024

ವರದಿ: ರಾಜು ಸಿರಿಗೆರೆ

ನಮ್ಮಜನ.ಕಾಂ, ಸಿರಿಗೆರೆ: ಮಧ್ಯ ಕರ್ನಾಟಕದ ಬರ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಏತ ನೀರಾವರಿ ಯೋಜನೆಗಳು (irrigation) ಅನಿವಾರ್ಯ ಮತ್ತು ಅಗತ್ಯವಾಗಿವೆ ಎಂದು ಬೆಂಗಳೂರಿನ ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಕೇಂದ್ರದ ನಿರ್ದೇಶಕ ವೆಂಕಟ ಸುಬ್ರಹ್ಮಣ್ಯಂ ಹೇಳಿದರು.

ಸಿರಿಗೆರೆ ಸಮೀಪದ ಶಾಂತಿವನದಲ್ಲಿ ಜಾಗತಿಕ ಹವಾಮಾನ ನಿಯಂತ್ರಣದ ಕ್ಲಿಷ್ಟ ಸಮಸ್ಯೆಗಳಿಗೆ ಪರಿಹಾರಗಳು ಕುರಿತಂತೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ತುಂಗಾಭದ್ರ ನದಿ ಸುಮಾರು 382 ಕಿ.ಮೀ. ದೂರವನ್ನು ಕ್ರಮಿಸುತ್ತಿದೆ. ಆದರೂ ಈ ನದಿಯ ಎರಡೂ ದಂಡೆಗಳ ಪ್ರದೇಶಗಳು ಇವತ್ತಿಗೂ ಬಹುತೇಕ ಬರ ಪ್ರದೇಶವಾಗಿವೆ. ನದಿಯಲ್ಲಿ ಹರಿಯುವ ನೀರನ್ನು (irrigation) ಬಳಸಿಕೊಂಡು ಆಯಾಯ ಭಾಗದ ಕೆರೆಗಳನ್ನು ಏತನೀರಾವರಿ ಮೂಲಕ ತುಂಬಿಸುವ ಕೆಲಸ ತ್ವರಿತವಾಗಿ ಆದರೆ ಸುಸ್ಥಿರ ಕೃಷಿ ಸಾಧ್ಯವಿದೆ. ಅಂತಹ ಕೆಲಸವನ್ನು ಮಧ್ಯ ಕರ್ನಾಟಕದಲ್ಲಿ ತರಳಬಾಳು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮುಂದಾಳತ್ವದಲ್ಲಿ ಆಗುತ್ತಿದೆ ಎಂದರು.

ದೊಡ್ಡ ಆಣೆಕಟ್ಟುಗಳನ್ನು ಕಟ್ಟುವುದು ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ನದಿಗಳು ಹಾದು ಹೋಗುವಪ್ರದೇಶಗಳಲ್ಲಿನಕೆರೆಗಳನ್ನು ತುಂಬಿಸಬೇಕು. ಇದರಿಂದ ನದಿಗಳಲ್ಲಿನ ಪ್ರವಾಹ ಮಟ್ಟವನ್ನು ತಗ್ಗಿಸುವುದು, ಅಂತರ್ಜಲಮಟ್ಟವನ್ನು ವೃದ್ಧಿಸುವುದು,

ಸಿರಿಗೆರೆ ಸಮೀಪದ ಶಾಂತಿವನದಲ್ಲಿ ನಡೆದ ಜಾಗತಿಕ ತಾಪಮಾನ ಮತ್ತು ಏತನೀರಾವರಿ ಯೋಜನೆಗಳ ಫಲ ಕುರಿತ ಸಮಾಲೋಚನಾ ಸಭೆಯಲ್ಲಿ ತರಳಬಾಳು ಶ್ರೀ, ಬೆಂಗಳೂರಿನ ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಕೇಂದ್ರದ ನಿರ್ದೇಶಕ ವೆಂಕಟ ಸುಬ್ರಹ್ಮಣ್ಯಂ ಮುಂತಾದವರು ಭಾಗವಹಿಸಿದ್ದರು.

ಆಯಾಯಾ ಭಾಗದ ಜನರ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗೆ ಕಾರಣವಾಗುತ್ತದೆ. ಇದು ಈಗ ಎದುರಿಸುತ್ತಿರುವ ಜಾಗತಿಕ ಹವಾಮಾನ ಬದಲಾವಣೆಯಂತಹ ಕ್ಲಿಷ್ಟ (irrigation) ಸಮಸ್ಯೆಗಳಿಗೆ ಪರಿಹಾರವಾಗುತ್ತದೆ ಎಂದು ತಿಳಿಸಿದರು.

ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ದೊಡ್ಡ ಡ್ಯಾಂಗಳ ನಿರ್ಮಾಣದಿಂದ ಪರಿಸರ ಹಾನಿ, ಮಿತಿಮೀರಿದ ವೆಚ್ಚ, ಡ್ಯಾಂಗಳಲ್ಲಿ ಊಳು ತುಂಬುವುದರಿಂದ ನೀರಿನ ಸಂಗ್ರಹ ಪ್ರಮಾಣ ಕಡಿಮೆ ಆಗುವ ಅಂಶಗಳನ್ನು ಬಗ್ಗೆ ಮಾತನಾಡಿದರು.

ತರಳಬಾಳು ಕೃಷಿ ಕೇಂದ್ರದ ನಿರ್ದೇಶಕ ಹಾಗೂ ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಕೆ.ಪಿ. ಬಸವರಾಜ್ (irrigation) ಮಾತನಾಡಿ, ಶ್ರೀಗಳ ನೇತೃತ್ವದಲ್ಲಿ ಜಾರಿಯಾಗುತ್ತಿರುವ ಏತ ನೀರಾವರಿ ಯೋಜನೆಗಳು ಮಾದರಿಯಾಗಿವೆ.

ಇದನ್ನೂ ಓದಿ: Dina Bhavishya: ಇಂದಿನ ದಿನ ಭವಿಷ್ಯ, ಯಾರಿಗೆ ಶುಭ, ಅಶುಭವಾಗಲಿದೆ?

ಜತೆಗೆ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ 3 ಜಿಲ್ಲೆಗಳಲ್ಲಿ ಆರಂಭವಾಗಿರುವ 17 ರೈತ ಉತ್ಪಾದಕ ಸಂಘಗಳನ್ನು ಸದೃಢಗೊಳಿಸಿ ರೈತರಿಗೆ ಬೇಕಾಗಿರುವ ಬೀಜ, ಗೊಬ್ಬರ, ಕೀಟನಾಶಕಗಳು ಮತ್ತು ಇತರೆ ಪರಿಕರಗಳು ಹಾಗೂ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿರುವುದು ಮಾದರಿಯಾಗಿದೆ ಎಂದರು. ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಎನ್. ದೇವರಾಜ್ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:Agriculture Technology Adoption Research CentreChitradurgaChitradurga NewsDirectorDistrictDrought Prone AreaEta IrrigationIrrigationKannada Newskannada suddiNammajana.comSirigere SriVenkata Subrahmanyamಏತ ನೀರಾವರಿಕನ್ನಡ ನ್ಯೂಸ್ಕನ್ನಡ ಸುದ್ದಿಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಕೇಂದ್ರಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲೆನಮ್ಮಜನ.ಕಾಂನಿರ್ದೇಶಕನೀರಾವರಿಬರ ಪೀಡಿತ ಪ್ರದೇಶವೆಂಕಟ ಸುಬ್ರಹ್ಮಣ್ಯಂಸಿರಿಗೆರೆ ಶ್ರೀ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry1
Dead0
Wink0
Previous Article Dina Bhavishya: ಇಂದಿನ ದಿನ ಭವಿಷ್ಯ, ಯಾರಿಗೆ ಶುಭ, ಅಶುಭವಾಗಲಿದೆ?
Next Article ಅಡಕೆ ಧಾರಣೆ | 4 OCTOBER 2024 | ಚನ್ನಗಿರಿ, ಭೀಮಸಮುದ್ರ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಏರಿಕೆ | Today Adike Rate
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?