Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಜನ ಸ್ಪಂದನ ಸಭೆಯಿಂದ ಜನರ ಸಂಕಷ್ಟಗಳು ದೂರವಾಗಬೇಕು: ಶಾಸಕ ಟಿ.ರಘುಮೂರ್ತಿ | Jana Spandana Sabha Challakere
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಜನ ಸ್ಪಂದನ ಸಭೆಯಿಂದ ಜನರ ಸಂಕಷ್ಟಗಳು ದೂರವಾಗಬೇಕು: ಶಾಸಕ ಟಿ.ರಘುಮೂರ್ತಿ | Jana Spandana Sabha Challakere
ಇಂದಿನ ಸುದ್ದಿ

ಜನ ಸ್ಪಂದನ ಸಭೆಯಿಂದ ಜನರ ಸಂಕಷ್ಟಗಳು ದೂರವಾಗಬೇಕು: ಶಾಸಕ ಟಿ.ರಘುಮೂರ್ತಿ | Jana Spandana Sabha Challakere

Editor Nammajana
Last updated: 4 July 2024 4:22 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

ಗ್ರಾಮೀಣ ಭಾಗದ ಜ್ವಲಂತ ಸಮಸ್ಯೆಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಜನಸ್ಪಂದನ : ಶಾಸಕ ರಘುಮೂರ್ತಿ.

Chitradurga news|nammajana.com|4-7-2024

ನಮ್ಮಜನ.ಕಾಂ, ಚಳ್ಳಕೆರೆ: ನಗರಸಭೆ ಸದಸ್ಯರು ತುರ್ತಾಗಿ ಸಭೆ ಕರೆಯುವಂತೆ ಮನವಿ ಮಾಡಿದರು. ಪರಶುರಾಮಪುರ ಹೋಬಳಿ ವ್ಯಾಪ್ತಿಯಲ್ಲಿ ಜಮೀನಿಗೆ ರಸ್ತೆ, ನಿವೇಶನ ಮನೆ ನಿರ್ಮಾಣ, ಚೆಕ್‌ಡ್ಯಾಂ ನಿರ್ಮಾಣ, ಖಾತೆ ಬದಲಾವಣೆ, ಸ್ಮಶಾನ ನಿರ್ಮಾಣ, ಕಾಲುವೇಹಳ್ಳಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯೂ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ನಡೆದ ಜನಸ್ಪಂದನ ಸಭೆಯಲ್ಲಿ ಮನವಿ (Jana Spandana Sabha Challakere) ಮಾಡಲಾಗಿತ್ತು.

ಪ್ರಾರಂಭದಲ್ಲೇ ಜನಸ್ಪಂದನಾ ಸಭೆಯ ಉದ್ದೇಶವನ್ನು ತಿಳಿಸಿದ ಜಿಲ್ಲಾಧಿಕಾರಿ ವೆಂಕಟೇಶ್ ಸರ್ಕಾರ ಜನರ ಆಶಯಗಳಿಗೆ ತಕ್ಕಂತೆ ಹಲವಾರು ಯೋಜನೆ ರೂಪಿಸಿ ಅವುಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ನೆರವಾಗುವ ನಿಟ್ಟಿನಲ್ಲಿ (Jana Spandana Sabha Challakere) ಕಾರ್ಯನಿರ್ವಹಿಸುತ್ತಿದೆ. ಕೆಲ ಸಂದರ್ಭದಲ್ಲಿ ಮಾತ್ರ ಯಾವುದೇ ಸರ್ಕಾರಿ ಯೋಜನೆಗಳು ಜನರನ್ನು ತಲುಪುವಲ್ಲಿ ಸಾಧ್ಯವಾಗದೆ ಸರ್ಕಾರದ ಮೂಲ ಉದ್ದೇಶ ಈಡೇರಿದಂತೆಯಾಗುವುದಿಲ್ಲ. ಸಭೆಯಲ್ಲಿ ಸಾರ್ವಜನಿಕರ ಹಲವಾರು ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕಾರ್ಯವನ್ನು ಜಿಲ್ಲಾಡಳಿತ ಪ್ರಾಮಾಣಿಕವಾಗಿ ಮಾಡಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್, ಗ್ರಾಮೀಣ ಭಾಗದ ಹಲವಾರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಇಂತಹ ಜನಸಂಪರ್ಕ ಸಭೆ ಜಿಲ್ಲಾಡಳಿತ ಮತ್ತು ಜನರ ನಡುವಿನ ಸೇತುವೆಯಾಗಿ (Jana Spandana Sabha Challakere) ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಲಿಖಿತ ಮೂಲಕ ನೀಡಿದ್ದಲ್ಲಿ ಅವುಗಳಿಗೆ ಪರಿಹಾರ ಹುಡುಕುವ ಕೆಲಸ ಮಾಡಿದಂತಾಗುತ್ತದೆ. ಜಿಲ್ಲೆಯಾದ್ಯಂತ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಮಾನವ ದಿನಗಳ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ, ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಇಂದಿನ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯಣಿರ್ವಹಣಾಧಿಕಾರಿಗಳು ಆಗಮಿಸಿ ಜನಸ್ಪಂದನಾ ಕಾರ್ಯಕ್ರಮದ ಮೂಲ ಉದ್ದೇಶಗಳ ಬಗ್ಗೆ ತಿಳಿಸಿ ಜನರಲ್ಲಿ ವಿಶ್ವಾಸ ಮೂಡಿಸುವಲ್ಲಿ ಸಫಲರಾಗಿದ್ಧಾರೆ.

ಈ ಕ್ಷೇತ್ರದ ಶಾಸಕನಾಗಿ ಸಾಕಷ್ಟು ಜನಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆಗಳಿಗೆ ಪರಿಹಾರವನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಕೊಡಿಸುವ ಕಾರ್ಯ ಮಾಡಿದ್ದೇನೆ. ಕೆಲವೊಂದು ವಿಚಾರಗಳು ಜಿಲ್ಲಾಮಟ್ಟದ ಅಧಿಕಾರಿಗಳ (Jana Spandana Sabha Challakere) ಗಮನಕ್ಕೆ ತಂದು ಪರಿಹರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದಾರೆ, ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸರ್ಕಾರಕ್ಕೆ ನೀಡುವ ಮನವಿ ಹಾಗೂ ಇನ್ನಿತರೆ ವಿಚಾರಗಳ ಬಗ್ಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜನಸ್ಪಂದನಾ ಸಭೆಯಿಂದ ಜನರ ಸಂಕಷ್ಟಗಳು ದೂರವಾಗಬೇಕು, ಕೇವಲ ಜನರನ್ನು ಸೇರಿಸಿ ಭಾಷಣ ಮಾಡದೆ ಸಭೆಯಲ್ಲಿ ವ್ಯಕ್ತವಾಗುವ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಜನಸ್ಪಂದನಾ ಒಂದು ಉತ್ತಮ ಹೆಜ್ಜೆ ಎಂದರು.

ಚಿತ್ರದುರ್ಗದ ಕೋಟೆ ಮತ್ತು ಚಂದ್ರವಳ್ಳಿ ಅಭಿವೃದ್ದಿಗೆ 28.40 ಕೋಟಿ ಪ್ರಸ್ತಾವನೆ | Chitradurga Fort

ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಯೋಜನಾಧಿಕಾರಿ ಮಹೇಂದ್ರಕುಮಾರ್, ತಹಶೀಲ್ಧಾರ್ ರೇಹಾನ್‌ಪಾಷ, ಇಒ ಶಶಿಧರ, ಬಿಇಒ ಕೆ.ಎಸ್.ಸುರೇಶ್, ಕೃಷಿಅಧಿಕಾರಿ ಅಶೋಕ್, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ಡಿವೈಎಸ್ಪಿ ರಾಜಣ್ಣ, ಪೌರಾಯುಕ್ತ ಸಿ.ಚಂದ್ರಪ್ಪ, ಎಇಇ ದಯಾನಂದ, ಎನ್.ಕಾವ್ಯ, ವಿಜಯಭಾಸ್ಕರ, ನಾಮಿನಿ ಸದಸ್ಯರಾದ ಅನ್ವರ್‌ಮಾಸ್ಟರ್, ನೇತಾಜಿಪ್ರಸನ್ನ, ಬಡಗಿಪಾಪಣ್ಣ, ಭದ್ರಿ, ನಟರಾಜ್ ಮುಂತಾದವರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:CEOChallakereChitradurga NewsCity Council ProblemDistrict Collector K. VenkateshDistrict Level OfficerG. PmGraveyard ProblemJan Spandana SabhaKannada Newskannada suddiMLANammajana.comproblemRoad ProblemS. J. SomasekharsolutionT Raghumurthyಎಸ್.ಜೆ.ಸೋಮಶೇಖರ್ಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜನ ಸ್ಪಂದನ ಸಭೆಜಿ.ಪಂಜಿಲ್ಲಾಧಿಕಾರಿ ಕೆ.ವೆಂಕಟೇಶ್ಜಿಲ್ಲಾಮಟ್ಟದ ಅಧಿಕಾರಿಟಿ ರಘುಮೂರ್ತಿದಾರಿ ಸಮಸ್ಯೆನಗರಸಭೆ ಸಮಸ್ಯೆನಮ್ಮಜನ.ಕಾಂಪರಿಹಾರಶಾಸಕಸಮಸ್ಯೆಸಿಇಓಸ್ಮಶಾನ ಸಮಸ್ಯೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗದ ಕೋಟೆ ಮತ್ತು ಚಂದ್ರವಳ್ಳಿ ಅಭಿವೃದ್ದಿಗೆ 28.40 ಕೋಟಿ ಪ್ರಸ್ತಾವನೆ | Chitradurga Fort
Next Article Dina Bhavishya kannada: ಇಂದಿನ‌ ರಾಶಿ ಭವಿಷ್ಯ 5-7-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?