Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: job fair | ಉದ್ಯೋಗ ಮೇಳದಲ್ಲಿ 829 ಜನಕ್ಕೆ ಉದ್ಯೋಗ ಭಾಗ್ಯ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > job fair | ಉದ್ಯೋಗ ಮೇಳದಲ್ಲಿ 829 ಜನಕ್ಕೆ ಉದ್ಯೋಗ ಭಾಗ್ಯ
Blog

job fair | ಉದ್ಯೋಗ ಮೇಳದಲ್ಲಿ 829 ಜನಕ್ಕೆ ಉದ್ಯೋಗ ಭಾಗ್ಯ

Editor Nammajana
Last updated: 3 March 2025 3:22 AM
By Editor Nammajana 4 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 03-03-2025

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯ ಯುವ ಜನತೆಗೆ ಉಜ್ವಲ ಭವಿಷ್ಯ ರೂಪಿಸಲು ವಿವಿಧ ಕಂಪನಿಗಳು ಅಗತ್ಯ ಸಹಕಾರ (job fair) ಹಾಗೂ ಉತ್ತೇಜನ ನೀಡಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಹೇಳಿದರು.

ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಶನಿವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ (job fair) ಮಿಷನ್ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ರೋಜಗಾರ್ ಮೇಳ-ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯೋಗ ಮೇಳದಲ್ಲಿ 50 ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸಿರುವುದು ತುಂಬಾ ಸಂತೋಷದ ವಿಚಾರ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಜನರು ಪ್ರತಿಭಾವಂತರಿದ್ದು, ಅವರ ಪ್ರತಿಭೆಯನ್ನು ಸದುಪಯೋಗ ಪಡಿಸಿಕೊಂಡು ಯುವ ಜನರ ಜೀವನೋಪಾಯಕ್ಕೆ ಅಡಿಗಲ್ಲಾಗಲು ಸಹಾಯ ಮಾಡಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಅಡಿಯಲ್ಲಿ ಪದವೀಧರರಿಗೆ ರೂ.3000/- ಹಾಗೂ ಡಿಪ್ಲೊಮಾ ಪದವೀಧರರಿಗೆ ರೂ.1500/- ನಿರುದ್ಯೋಗ ಭತ್ಯೆ ನೀಡಲಾಗುತ್ತಿದ್ದು, ಈ ಯುವನಿಧಿಯು ಯುವ ಜನರಿಗೆ ವರದಾನವಾಗಿದೆ.

ಭತ್ಯೆಯನ್ನು ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಇಂತಹ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕೂಡ ಬಳಸುತ್ತಿದ್ದಾರೆ. ಈ ಯೋಜನೆ ಯುವ ಜನತೆಗೆ ಬಹಳ ಅನುಕೂಲವಾಗಿದೆ. ಜಿಲ್ಲೆಯ ಅಭ್ಯರ್ಥಿಗಳು ಸರ್ಕಾರ ಏರ್ಪಡಿಸುವ ಇಂತಹ ಉದ್ಯೋಗ ಮೇಳದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಇದರ ಸದುಪಯೋಗ ಪಡಿಸಿಕೊಂಡು, ತಮ್ಮ ಬದುಕು (job fair) ರೂಪಿಸಿಕೊಳ್ಳಬೇಕು ಎಂದರು.

ಯುವ ಜನರಿಂದ ಉತ್ತಮ ಪ್ರತಿಕ್ರಿಯೆ:

ವಿದ್ಯಾರ್ಹತೆಗೆ ತಕ್ಕ ಕೆಲಸ ಹುಡುಕಿ ದುಡಿಮೆಯ ಜೀವನ ಪ್ರಾರಂಭಿಸುವ ನಿರೀಕೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮೇಳ ಸೂಕ್ತ ವೇದಿಕೆ ಕಲ್ಪಿಸಿತು. ಉದ್ಯೋಗ ಮೇಳಕ್ಕೆ ಯುವ ಜನರಿಂದ ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಯಿತು.

ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಸೇರಿ 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಉದ್ಯೋಗಾಕಾಂಕ್ಷಿಗಳು ತಮ್ಮ ಇಷ್ಟದ ಕೆಲಸಗಳ ಬಗ್ಗೆ ಕಂಪನಿಗಳಿಂದ ಮಾಹಿತಿ ಪಡೆದು ಸೂಕ್ತ ಎನಿಸಿದ ಕಂಪನಿಗಳಿಗೆ ಸ್ವ-ವಿವರ ಸಲ್ಲಿಸಿದರು.

ಕೆಲವು ಕಂಪನಿಗಳು ಸ್ಥಳದಲ್ಲಿಯೇ ಅಭ್ಯರ್ಥಿಗಳ ಸಂದರ್ಶನ ನಡೆಸಿ, ವಿದ್ಯಾರ್ಹತೆ, ಪ್ರತಿಭೆಗೆ ಅನುಗುಣವಾಗಿ ಸ್ಥಳದಲ್ಲಿಯೇ ಉದ್ಯೋಗ ನೇಮಕ ಪತ್ರ ನೀಡಿದರೆ, ಕೆಲವು ಅಭ್ಯರ್ಥಿಗಳ ಹೆಸರುಗಳನ್ನು ಕಂಪನಿಗಳು ಅಂತಿಮ ಪಟ್ಟಿಯಲ್ಲಿ ಸಿದ್ಧಪಡಿಸಿಕೊಂಡು, ಒಂದು ವಾರದಲ್ಲಿ ನೇಮಕಾತಿ ಪತ್ರ ನೀಡುವ ಭರವಸೆ ನೀಡಿವೆ.

ಉದ್ಯೋಗಮೇಳದಲ್ಲಿ ಜಿಲ್ಲೆಯಿಂದ ಹಾಗೂ ವಿವಿಧೆಡೆಗಳಿಂದ 961 ಯುವಕರು ಹಾಗೂ 701 ಯುವತಿಯರು ಸೇರಿದಂತೆ ಒಟ್ಟು 1662 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ 1478 ಅಭ್ಯರ್ಥಿಗಳು ವಿವಿಧ ಕಂಪನಿಗಳು ನಡೆಸಿದ (job fair) ಸಂದರ್ಶನಕ್ಕೆ ಹಾಜರಾದರು.

ಒಟ್ಟು 829 ಅಭ್ಯರ್ಥಿಗಳು ನೇಮಕಾತಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದು, ಇದರಲ್ಲಿ 272 ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಕೆಲವು ಕಂಪನಿಗಳು ನೇಮಕಾತಿ ಪತ್ರವನ್ನು ನೀಡಿ, ಉದ್ಯೋಗ ಕಲ್ಪಿಸಿದರೆ, 572 ಅಭ್ಯರ್ಥಿಗಳು ವಿವಿಧ ಕಂಪನಿಗಳ ನೇಮಕದ ಅಂತಿಮ ಪಟ್ಟಿಯಲ್ಲಿ ಸೇರ್ಪಡೆಗೊಂಡು, ಒಂದೆರಡು ವಾರದೊಳಗೆ ಉದ್ಯೋಗದ ಪತ್ರ ಪಡೆಯಲಿದ್ದಾರೆ.

ವ್ಯವಸ್ಥಿತ ಆಯೋಜನೆ:

ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದ ಬೃಹತ್ ಉದ್ಯೋಗಮೇಳ ಶಿಸ್ತುಬದ್ಧವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಿತು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗಾಗಿ ಹೆಚ್ಚಿನ ಮಳಿಗೆಗಳನ್ನು ತೆರೆಯುವ ಮೂಲಕ ಅಚ್ಚುಕಟ್ಟಾಗಿ ನೊಂದಣಿ ಪ್ರಕ್ರಿಯೆ ನಡೆಸಲಾಯಿತು.

ಮುಂಜಾನೆಯಿಂದಲೇ ನೊಂದಣಿ ಪ್ರಕ್ರಿಯೆ ಪ್ರಾರಂಭಿಸಲಾಯಿತು. ಅಭ್ಯರ್ಥಿಗಳು ಆಸಕ್ತ ಕಂಪನಿಗಳಲ್ಲಿ ಸಂದರ್ಶನಕ್ಕೆ ಹಾಜರಾಗಲು ಟೋಕನ್ ವ್ಯವಸ್ಥೆ ಮಾಡಲಾಗಿತ್ತು. ಮಾಹಿತಿಗಾಗಿ ವಿವಿಧ ಕಂಪನಿಗಳ ಹೆಸರು, ಉದ್ಯೋಗದ ವಿವರ, ವಿದ್ಯಾರ್ಹತೆ, ಖಾಲಿ ಹುದ್ದೆಗಳ ಮಾಹಿತಿ ಸೇರಿದಂತೆ ಅಗತ್ಯ ಮಾಹಿತಿಯನ್ನು ಪ್ರದರ್ಶನ ಫಲಕಗಳ ಮೂಲಕ ಮಾಹಿತಿ ಪ್ರದರ್ಶಿಸುವ ವ್ಯವಸ್ಥೆ ಮಾಡಲಾಗಿತ್ತು.

ಅಭ್ಯರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಆಸನದ ವ್ಯವಸ್ಥೆ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ವಿಶೇಷ ಆಸನಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅಚ್ಚುಕಟ್ಟಾಗಿ ಉದ್ಯೋಗ ಮೇಳ ನಿರ್ವಹಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ವೇಮಣ್ಣ ಅವರು ಉದ್ಯೋಗಮೇಳದ ಯಶಸ್ವಿ ಆಯೋಜನೆಗೆ ವಿಶೇಷ ಆಸಕ್ತಿ ವಹಿಸಿ, ವ್ಯವಸ್ಥಿತ ನಿರ್ವಹಣೆಗೆ ಶ್ರಮ ವಹಿಸಿದರು.

ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ 5 ಜನರಿಗೆ ಉದ್ಯೋಗ ನೇಮಕಾತಿ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿತರಿಸಿದರು.

ಇದನ್ನೂ ಓದಿ: Bisiyuta tayaraka | ಬಿಸಿಯೂಟ ತಯಾರಿಕರ ಕಾರ್ಯ ಶ್ರೇಷ್ಠಮಟ್ಟದ್ದು: ಶಾಸಕ ಟಿ.ರಘುಮೂರ್ತಿ

ಕಾರ್ಯಕ್ರಮದಲ್ಲಿ ಶಾಸಕರಾದ ಟಿ. ರಘುಮೂರ್ತಿ, ಎಂ. ಚಂದ್ರಪ್ಪ, ಕೆ.ಸಿ. ವೀರೇಂದ್ರ ಪಪ್ಪಿ, ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಸೂರಜ್ ಎಂ.ಎನ್. ಹೆಗಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ‌ (job fair) ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ತಾಲ್ಲೂಕು ( ಅಧ್ಯಕ್ಷ ಪ್ರಕಾಶ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ಕೆ. ಜಗದೀಶ್ ಸೇರಿದಂತೆ ಮತ್ತಿತರೆ ಗಣ್ಯರು, ಉದ್ಯೋಗಾಕಾಂಕ್ಷಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

Hosadurga JJM | ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿಇಒ ಡಾ.ಎಸ್.ಆಕಾಶ್

Challakere : ಶಾಸಕರ ಮಾರ್ಗದರ್ಶನದಲ್ಲಿ ನಗರಸಭೆಯಿಂದ ಚಳ್ಳಕೆರೆ ನಗರ ಅಭಿವೃದ್ದಿ: ಅಧ್ಯಕ್ಷೆ ಶಿಲ್ಪ ಮುರುಳೀಧರ

T.Raghumurthy: ಗ್ರಾಮೀಣ ಭಾಗದ ರೈತರ ಬದುಕು ಹಸನಾಗಲು ಸಾರಿಗೆ ಸಂಪರ್ಕ ಅಗತ್ಯ: ಟಿ.ರಘುಮೂರ್ತಿ

ಜಿಲ್ಲಾ ಪಂಚಾಯತ್ ಸಿಇಒಗಳಿಗೆ PDO ನಿಯೋಜನೆ ಅಧಿಕಾರ

TAGGED:D. SudhakarEmployment MelaEntrepreneurship and Livelihood DepartmentKarnataka Skill Development CorporationKarnataka State Rural Life Development InstituteLocalMinisterMLA T. RaghumurthyMLC D. T. SrinivasSkill DevelopmentZilla PanchayatZilla Panchayat and Zilla Skillಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಉದ್ಯೋಗ ಮೇಳಎಂಎಲ್ಸಿ ಡಿ.ಟಿ.ಶ್ರೀನಿವಾಸ್ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮಕರ್ನಾಟಕ ರಾಜ್ಯ ಗ್ರಾಮೀಣ ಜೀವನ ಸಂವರ್ಧನ ಸಂಸ್ಥೆಕೌಶಲ್ಯಾಭಿವೃದ್ಧಿಜಿಲ್ಲಾ ಪಂಚಾಯತ್ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯಡಿ. ಸುಧಾಕರ್ಶಾಸಕ ಟಿ.ರಘುಮೂರ್ತಿಸಚಿವಸ್ಥಳೀಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Bisiyuta tayaraka | ಬಿಸಿಯೂಟ ತಯಾರಿಕರ ಕಾರ್ಯ ಶ್ರೇಷ್ಠಮಟ್ಟದ್ದು: ಶಾಸಕ ಟಿ.ರಘುಮೂರ್ತಿ
Next Article Bhimasamudra | ಅವಿಶ್ವಾಸ ಮಂಡನೆ ವಿಫಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಉಮೇಶ್ ಮುಂದುವರಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ
HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?