Chitradurga news|nammajana.com|14-12-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಪಕ್ಕದಲ್ಲಿರುವ ಕಣಿವೆ ಆಂಜನೇಯ (Kanive annjaneya) ಸ್ವಾಮಿ ದೇವಸ್ಥಾನದಲ್ಲಿ ಸಂಭ್ರಮ ಸಡಗರದಿಂದ ಸಾವಿರಾರು ಭಕ್ತರೊಂದಿಗೆ ಶ್ರೀ ಕಣಿವೆ ಆಂಜನೇಯ ಸ್ವಾಮಿ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ 27 ನೇ ವರ್ಷದ ಕಾರ್ತಿಕ ಮಹೋತ್ಸವ ನಡೆಯಿತು.
ಶ್ರೀ ಕಣಿವೆ ಆಂಜನೇಯಸ್ವಾಮಿಗೆ ಬೆಳಿಗ ವಿಶೇಷ ಅಲಂಕಾರ ಮಾಡಿದ್ದು ಭಕ್ತರ ಕಣ್ಮನ ಸೆಳೆಯಿತು. ವಿವಿಧ ಹೂ ಹಣ್ಣುಗಳ ಮೂಲಕ ಅಲಂಕಾರ ಮಾಡಲಾಗಿತ್ತ. ಆಂಜನೇಯನ ಗದೆಗೆ (Kanive annjaneya) ಹೂಗಳಿಂದ ಕೂಡಿದ್ದು ಬೆಳಗ್ಗೆಯಿಂದ ಸಾವಿರಾರು ಸಂಖ್ಯೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಸ್ವಾಮಿ ದರ್ಶನ, ಆಶೀರ್ವಾದ ಪಡೆದು ಸಾಗುತ್ತಿದ್ದರು.

ಇದನ್ನೂ ಓದಿ: ವಾಣಿ ವಿಲಾಸ ಸಾಗರ ಇಂದಿನ ನೀರಿನ ಮಟ್ಟ | Vani Vilasa Sagara Dam
ಮಹಾಮಂಗಳಾರತಿ ಮತ್ತು ಸೀತಾ ರಾಮರ ಪಲ್ಲಕ್ಕಿ ದಾರಿ ಉದ್ದಕ್ಕೂ ದೀಪಗಳ ಹಚ್ಚಿದ್ದರು. ಬೆಳಗ್ಗೆಯಿಂದ ಭಜನೆ ಸಹ ನಡೆಯಿತು.
ಭಕ್ತರಿಗೆ ಪ್ರಸಾದ ವಿನಿಯೋಗ (Kanive annjaneya)
ಆಂಜನೇಯ ಸ್ವಾಮಿ ಕಾರ್ತಿಕ ಮಹೋತ್ಸವಕ್ಕೆ ಬೆಳಗ್ಗೆ 9 ರಿಂದ ಲಾಡು, ಪಾಯಿಸ, ಪಲ್ಯ, ಅನ್ನ ಸಂಬಾರು ಪ್ರಸಾದ ನೀಡಿದರು. ಜಾತ್ರೆಯಂತೆ ಹರಿದು ಬಂದ ಭಕ್ತರಿಗೆ ಸಾಲಿನಲ್ಲಿ ಪ್ರಸಾದ ವಿತರಿಸಿದರು. ಸುಮಾರು 15 ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ತಿಕ ಮಹೋತ್ಸವಕ್ಕೆ ಆಗಮಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252