Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕಾರ್ತಿಕ ಲಕ್ಷ ದೀಪೋತ್ಸವ | 20 ಅಡಿ ಎತ್ತರಕ್ಕೇರಿದ ಬಾಳೆಗೊನೆ ರಾಶಿ | Kartika
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > ಕಾರ್ತಿಕ ಲಕ್ಷ ದೀಪೋತ್ಸವ | 20 ಅಡಿ ಎತ್ತರಕ್ಕೇರಿದ ಬಾಳೆಗೊನೆ ರಾಶಿ | Kartika
ವಿಶೇಷ ಸುದ್ದಿ

ಕಾರ್ತಿಕ ಲಕ್ಷ ದೀಪೋತ್ಸವ | 20 ಅಡಿ ಎತ್ತರಕ್ಕೇರಿದ ಬಾಳೆಗೊನೆ ರಾಶಿ | Kartika

Editor Nammajana
Last updated: 19 December 2024 5:15 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|19-12-2024

ನಮ್ಮಜನ.ಕಾಂ, ಹೊಳಲ್ಕೆರೆ: ತಾಲೂಕಿನ ಐತಿಹಾಸಿಕ ಹಿನ್ನೆಲೆ (Kartika) ಹೊಂದಿರುವ ಶ್ರೀಗುರು ಕರಿಸಿದ್ದೇಶ್ವರಸ್ವಾಮಿ ಕಡೇ ಕಾರ್ತಿಕ ಲಕ್ಷ ದೀಪೋತ್ಸವ, ಬಾಳೆಹಣ್ಣಿನ ಪರಿಷೆ ಮಂಗಳವಾರ ಬೆಳಗಿನ ಜಾವ ಅದ್ದೂರಿಯಾಗಿ ಜರುಗಿತು.

ರಾಮಗಿರಿ ಕಾರ್ತಿಕ ಲಕ್ಷ ದೀಪೋತ್ಸವದ ಕೇಂದ್ರ ಬಿಂದುವೇ ಬಾಳೆ ರಾಶಿ ಹಾಕುವುದು. ಮೂರು ದೇವರನ್ನು ಕದಲಿ (Kartika) ಮಂಟಪದಲ್ಲಿ ಪ್ರತಿಷ್ಠಾಪಿಸಿ, ನಂತರ ಭಕ್ತರಿಗೆ ಬಾಳೆಹಣ್ಣಿನ ರಾಶಿ ಹಾಕುವಂತೆ ಅನುವು ಮಾಡಿಕೊಡಲಾಯಿತು. ಹರಕೆ ತೀರಿಸಲು ಭಕ್ತರು ಬಾಳೆಗೊನೆ ಖರೀದಿಸಿ ತಂದು ರಾಶಿಗೆ ಪಾಕಿದರು.

150-200 ರೂ.ಗೆ ಒಂದರಂತೆ ಗೊನೆಯನ್ನು ಭಕ್ತರು ಖರೀದಿಸಿ, ತಂದು ಬಾಳೆಹಣ್ಣಿನ ರಾಶಿಗೆ ಹಾಕುವ ಮೂಲಕ ಹರಕೆ ತೀರಿಸುವರು. ಸುಮಾರು ಹತ್ತು ಸಾವಿರಕ್ಕೂ ಹೆಚ್ಚು (Kartika) ಬಾಳೆಗೊನೆಗಳನ್ನು ರಾಶಿ ಹಾಕಲಾಗಿತ್ತು. ರಾಶಿ ಇಪ್ಪತ್ತು ಅಡಿ ಎತ್ತರಕ್ಕೇರಿತ್ತು. ನಂತರ ಮೂರು ದೇವರ ಅರ್ಚಕರು ವಿಶೇಷ ಪೂಜೆ ನೆರವೇರಿಸಿ, ಆಗಮಿಸಿದಂತ ಭಕ್ತರಿಗೆ ಪ್ರಸಾದವಾಗಿ ನೀಡಲಾಯಿತು.

ಪ್ರಸಾದ ಪಡೆಯಲು ಭಕ್ತರು ಬೆಳಗ್ಗೆ 3 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಪ್ರಸಾದ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಮೂರು ದೇವರುಗಳ ಹೂವಿನ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು. ಕರಡೆ ವಾದ್ಯ, ವೀರಗಾಸೆ ತಂಡ, ಕೋಲಾಟ, ಭಜನಾ ಮಂಡಳಿಗಳು ಸೇರಿದಂತೆ ನಾನಾ ಕಲಾ ತಂಡಗಳು (Kartika) ಭಾಗವಹಿಸಿದ್ದವು. ದೇವಾಲಯ ಸಮಿತಿ, ಕಂದಾಯ ಇಲಾಖೆ, ಗ್ರಾಪಂ ಹಾಗೂ ಗ್ರಾಮಸ್ಥರು ಭಕ್ತರಿಗೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿದ್ದರು. ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಿತ್ತು.

ಕಂಗೊಳಿಸಿದ ಅಲಂಕಾರ

ಬೆಟ್ಟದ ತುಂಬೆಲ್ಲ ವಿದ್ಯುತ್ ದೀಪಾಲಂಕಾರ ಝಗಮ ಗಿಸುತ್ತಿತ್ತು. ಶ್ರೀಕರಿಸಿದ್ದೇಶ್ವರಸ್ವಾಮಿ, ಶ್ರೀವೀರಭದ್ರೇಶ್ವರ ಸ್ವಾಮಿ, ಉದ್ಭವಲಿಂಗುವಿಗೆ ನಾನಾ ಪುಷ್ಪಗಳಿಂದ ಮಾಡಿದ ವಿಶೇಷ ಅಲಂಕಾರ ಕಂಗೊಳಿಸಿತು. ಚಳಿ ಲೆಕ್ಕಿಸದೆ ಲಕ್ಷಕ್ಕೂ ಅಧಿಕ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿ, ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಆಗಮಿಸುವ ಭಕ್ತರು ವಿಶೇಷವಾಗಿ ಬಟ್ಟೆಯಲ್ಲಿ ತಯಾರಿಸಿದ ದೀಪಗಳನ್ನು ಹಚ್ಚುವ ಮೂಲಕ ಹರಕೆ ತೀರಿಸಿದರು. ಸೋಮವಾರ ತಡರಾತ್ರಿ ಶ್ರೀಕರಿಸಿದ್ದೇಶ್ವರಸ್ವಾಮಿ, ಆಂಜನೇಯಸ್ವಾಮಿ, ಕರಿಯಮ್ಮ ದೇವಿ ಪಲ್ಲಕ್ಕಿ (Kartika) ಉತ್ಸವದೊಂದಿಗೆ ಬೆಟ್ಟದಿಂದ ಕೆಳಗೆ ಕರೆತರಲಾಯಿತು.

ಇದನ್ನೂ ಓದಿ: ಡ್ರೋನ್ ಆಧಾರಿತ ಫೋಟೋಗ್ರಫಿ ತರಬೇತಿಗೆ ಅರ್ಜಿ ಹಾಕಲು ಮತ್ತೊಂದು ಅವಕಾಶ | Drone videography

ಉತ್ಸವದೊಂದಿಗೆ ಕಲ್ಲೇಶ್ವರಸ್ವಾಮಿ ದೇವಾಲಯ ಮುಂಭಾಗದ ಗದ್ದುಗೆಯಲ್ಲಿ ಸ್ವಾಮಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ನೆರವೇರಿಸಲಾಯಿತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

TAGGED:BalegoneChitradurga NewsHolalkere talukKannada Newskannada suddiKartikaKartika festivalNammajana.comRamgiriಕನ್ನಡ ನ್ಯೂಸ್ಕನ್ನಡ ಸುದ್ದಿಕಾರ್ತಿಕಕಾರ್ತಿಕ ಹಬ್ಬಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಾಳೆಗೋನೆರಾಮಗಿರಿಹೊಳಲ್ಕೆರೆ ತಾಲೂಕು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಡ್ರೋನ್ ಆಧಾರಿತ ಫೋಟೋಗ್ರಫಿ ತರಬೇತಿಗೆ ಅರ್ಜಿ ಹಾಕಲು ಮತ್ತೊಂದು ಅವಕಾಶ | Drone videography
Next Article Dina Bhavishya | ದಿನ ಭವಿಷ್ಯ 20 ಡಿಸೆಂಬರ್ 2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?