Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Kavadigarhatti ವಿಚಾರಕ್ಕೆ ಸುಮೋಟೋ ಕೇಸ್ ದಾಖಲಿಸಿಕೊಂಡ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Kavadigarhatti ವಿಚಾರಕ್ಕೆ ಸುಮೋಟೋ ಕೇಸ್ ದಾಖಲಿಸಿಕೊಂಡ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ
ಇಂದಿನ ಸುದ್ದಿ

Kavadigarhatti ವಿಚಾರಕ್ಕೆ ಸುಮೋಟೋ ಕೇಸ್ ದಾಖಲಿಸಿಕೊಂಡ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ

Editor Nammajana
Last updated: 22 January 2025 5:04 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|22-1-2025

ನಮ್ಮಜನ.ಕಾಂ, ಚಿತ್ರದುರ್ಗ: ವರ್ಷದ ಹಿಂದೆ ಕಲುಷಿತ ನೀರು ಸೇವಿಸಿ ಅಹಿತಕರ ಘಟನೆ ಸಂಭವಿಸಿದ್ದ ಚಿತ್ರದುರ್ಗ ನಗರದ (Kavadigarhatti) ಕವಾಡಿಗರಹಟ್ಟಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಬುಧವಾರ ಭೇಟಿ ನೀಡಿ, ಕವಾಡಿಗರಹಟ್ಟಿ ನಿವಾಸಿಗಳ ಸಮಸ್ಯೆ ಆಲಿಸಿದರು.

nammajana

ಕವಾಡಿಗರಹಟ್ಟಿಯಲ್ಲಿ ಜರುಗಿದ ಅಹಿತಕರ ಘಟನೆ ಬಳಿಕ ಇಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಮೂಲಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ, ಓವರ್ ಹೆಡ್ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಪ್ರತಿ ಮನೆಗೂ (Kavadigarhatti) ಹೊಸದಾಗಿ ನಳ ಸಂಪರ್ಕ ಕಲ್ಪಿಸಲಾಗಿದೆ.

ಸಮರ್ಪಕವಾಗಿ ನೀರಿನ ಸೌಲಭ್ಯ ಕಲ್ಪಿಸಲಾಗಿದ್ದು, ಕುಡಿಯುವ ನೀರಿನ ಯಾವುದೇ ತೊಂದರೆ ಇಲ್ಲ ಎಂದು ಕವಾಡಿಗರಹಟ್ಟಿ ನಿವಾಸಿಗಳು ಉಪಲೋಕಾಯುಕ್ತರಿಗೆ ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ, ಕವಾಡಿಗರಹಟ್ಟಿ ಓವರ್ ಹೆಡ್ ಟ್ಯಾಂಕ್ ಸೇರಿದಂತೆ ಚಿತ್ರದುರ್ಗ ನಗರ ವ್ಯಾಪ್ತಿಯ ಓವರ್ ಹೆಡ್ ಟ್ಯಾಂಕ್‍ಗಳನ್ನು ಕನಿಷ್ಟ 6 ತಿಂಗಳಿಗೊಮ್ಮೆಯಾದರೂ (Kavadigarhatti) ಸ್ವಚ್ಛಗೊಳಿಸುವ ಮೂಲಕ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು.ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಬೇಕು ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರಿಗೆ ಉಪಲೋಕಾಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕವಾಡಿಗರಹಟ್ಟಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಎಷ್ಟು ಜನಸಂಖ್ಯೆ ಇದೆ. ಕುಟುಂಬಗಳ ಸಂಖ್ಯೆ ಎಷ್ಟು? ಒಂದು ಕುಟುಂಬದಲ್ಲಿ ಎಷ್ಟು ಜನರಿದ್ದಾರೆ ಹಾಗೂ ಕೂಡು ಕುಟುಂಬಗಳ ಸಂಖ್ಯೆಯನ್ನು ಗುರುತಿಸಿ, ನಂತರ ಒಂದೇ ಕುಟುಂಬದಲ್ಲಿ ನಾಲ್ಕೈದು ಮಂದಿ ಅಣ್ಣ ತಮ್ಮಂದಿರು ಇದ್ದರೆ ಕುಟುಂಬ ಬೇರೆಯಾಗಲು ಇಚ್ಛಿಸಿದರೆ ಅವರಿಗೂ ಸಹ ಕಾನೂನು ಪ್ರಕಾರ ಪ್ರತ್ಯೇಕವಾಗಿ ನಿವೇಶನ ನೀಡಬೇಕು.

ಕವಾಡಿಗರಹಟ್ಟಿ ಜನರಿಗೆ ನಿವೇಶನ ಹಂಚಿಕೆಗಾಗಿ ಈಗಾಗಲೇ ಮೂರು ಎಕರೆ ಜಮೀನು ಮಂಜೂರು ಆಗಿದ್ದು, ಇದರಲ್ಲಿ 62 ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಮನೆ ಕಳೆದುಕೊಂಡವರಿಗೆ ಮೊದಲು ನಿವೇಶನ ಹಂಚಿಕೆ ಮಾಡಬೇಕು. ಇನ್ನೂ ಉಳಿದ ಜನರಿಗಾಗಿ ಸುತ್ತಮುತ್ತ ಇರುವ ಸರ್ಕಾರಿ ಜಮೀನು ಗುರುತಿಸಿ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವಂತೆ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಾಕೀತು ಮಾಡಿದರು.

ಕವಾಡಿಗರಹಟ್ಟಿ- ಮೂಲಭೂತ ಸೌಕರ್ಯ ನೀಡಿಕೆ ಕುರಿತಂತೆ

ಸ್ವಯಂಪ್ರೇರಿತ ಪ್ರಕರಣ ದಾಖಲು:

ಈ ಹಿಂದೆ ಕಲುಷಿತ ನೀರು ಕುಡಿದು ದುರಂತ ಸಂಭವಿಸಿದ್ದ ಕವಾಡಿಗರಹಟ್ಟಿಯಲ್ಲಿನ ನಿವಾಸಿಗಳಿಗೆ ರಸ್ತೆ, ಮನೆಗಳಿಗೆ ಶೌಚಾಲಯ, ನಿವೇಶನ, ಸೂರು ವಿತರಣೆ ಕುರಿತಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲು (Kavadigarhatti) ಮಾಡಿಕೊಳ್ಳಲಾಗುವುದು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.

ಸ್ವಯಂಪ್ರೇರಿತ ಪ್ರಕರಣದಲ್ಲಿ ನಗರಸಭೆ ಪೌರಾಯುಕ್ತರು, ಜಿಲ್ಲಾಧಿಕಾರಿಗಳನ್ನು ಪಾರ್ಟಿಗಳನ್ನಾಗಿ ಮಾಡಿಕೊಳ್ಳಲಾಗುವುದು. ಕವಾಡಿಗರಹಟ್ಟಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ಕಾಲಕಾಲಕ್ಕೆ ವರದಿ ನೀಡಬೇಕು. ಕವಾಡಿಗರಹಟ್ಟಿ (Kavadigarhatti) ಬಡಾವಣೆ ನಿವಾಸಿಗಳಿಗೆ ಅನುಕೂಲ ಕಲ್ಪಿಸಿಕೊಡವವರೆಗೂ ಪ್ರಕರಣ ಚಾಲ್ತಿಯಲ್ಲಿ ಇರಲಿದೆ ಎಂದು ಉಪಲೋಕಾಯುಕ್ತರು ಹೇಳಿದರು.

ಇದನ್ನೂ ಓದಿ: Hosadurga to ಹಿರಿಯೂರು ಮಾರ್ಗ ಬದಲಾವಣೆ | ನಾಳೆ CM, DCM ಆಗಮನ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article Hosadurga to ಹಿರಿಯೂರು ಮಾರ್ಗ ಬದಲಾವಣೆ | ನಾಳೆ CM, DCM ಆಗಮನ
Next Article ದಿನ ಭವಿಷ್ಯ | 23-1-2025 | Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?