Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: KMERC Fund | ಎಂ.ಇ.ಆರ್.ಸಿ ನಿಧಿಯಡಿ ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ದುರ್ಬಲ ವರ್ಗದವರ ಏಳಿಗೆಗೆ ಯೋಜನೆ ರೂಪಿಸಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > KMERC Fund | ಎಂ.ಇ.ಆರ್.ಸಿ ನಿಧಿಯಡಿ ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ದುರ್ಬಲ ವರ್ಗದವರ ಏಳಿಗೆಗೆ ಯೋಜನೆ ರೂಪಿಸಿ
ಇಂದಿನ ಸುದ್ದಿ

KMERC Fund | ಎಂ.ಇ.ಆರ್.ಸಿ ನಿಧಿಯಡಿ ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ದುರ್ಬಲ ವರ್ಗದವರ ಏಳಿಗೆಗೆ ಯೋಜನೆ ರೂಪಿಸಿ

Editor Nammajana
Last updated: 7 August 2025 11:59 AM
By Editor Nammajana 4 Min Read
Share
SHARE
Telegram Group Join Now
WhatsApp Group Join Now
Chitradurga news|Nammajana.com|7-8-2025

ನಮ್ಮಜನ.ಕಾಂ, ಚಿತ್ರದುರ್ಗ: ಕೆ.ಎಂ.ಇ.ಆರ್.ಸಿ ನಿಧಿಯಡಿ (KMERC Fund) ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ದುರ್ಬಲ ವರ್ಗದವರ ಏಳಿಗೆಗೆ ಒತ್ತು ನೀಡಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಗಣಿಭಾದಿತ ವಲಯಗಳ ಸಮಗ್ರ ಪರಿಸರ ಯೋಜನೆ (ಸಿ.ಇ.ಪಿ.ಎಂ.ಐ.ಝಡ್) ಅಡಿಯಲ್ಲಿ ಕೈಗೊಳ್ಳುತ್ತಿರುವ (KMERC Fund) ಕಾಮಗಾರಿ ಹಾಗೂ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಅಧಿಕಾರಿಗಳಿಗೆ ಸೂಚನೆ

ಕೆ.ಎಂ.ಇ.ಆರ್.ಸಿ ಮುಖ್ಯ ಉದ್ದೇಶ ಗಣಿಬಾಧಿತ ಪ್ರದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸವುದಾಗಿದೆ. ಈ ಹಿನ್ನಲೆಯಲ್ಲಿ ಯೋಜನೆಗಳ ವರದಿಯನ್ನು ಕಾಲ ಕಾಲಕ್ಕೆ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ.
ರಾಜ್ಯ ಅಥವಾ ಕೇಂದ್ರ ಸರ್ಕಾರದ ಅನುದಾನದಲ್ಲಿ ಯೋಜನೆ ರೂಪಿಸುವಂತೆ ಕೆ.ಎಂ.ಇ.ಆರ್.ಸಿ ಅಡಿ ಯೋಜನೆಗಳನ್ನು ರೂಪಿಸಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಯೋಜನೆ (KMERC Fund) ರೂಪಿಸಬೇಕಾದ ಗಣಿಬಾದಿತ ಪ್ರದೇಶ ವ್ಯಾಪ್ತಿ, ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳು, ಆದ್ಯತಾ (KMERC Fund) ವಲಯಗಳನ್ನು ಸ್ಪಷ್ಟವಾಗಿ ನಮೂದಿಸಿ, ಮಾನದಂಡಗಳನ್ನು ರೂಪಿಸಲಾಗಿದೆ. ಅಧಿಕಾರಿಗಳು ಈ ಮಾನದಂಡಗಳನ್ನು ಆಧರಿಸಿ ವಿಸ್ತøತ ಯೋಜನಾ ವರದಿಗಳನ್ನು ಸಿದ್ದಪಡಿಸಬೇಕು ಎಂದು ಡಾ.ಸಂಜಯ್ ಎಸ್ ಬಿಜ್ಜೂರ್ ಹೇಳಿದರು.
ಸರ್ಕಾರ ಘೋಷಿಸಿದ ಯೋಜನೆಗಳಿಗೆ ಆರಂಭದಲ್ಲಿ ಒಂದನೇ ಮೂರು ಅಂಶದ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಆದರೆ ಕೆ.ಎಂ.ಇ.ಆರ್.ಸಿ ಅಡಿಯಲ್ಲಿ ಕೈಗೆತ್ತಿಕೊಳ್ಳುವ (KMERC Fund) ಯೋಜನೆಗಳಿಗೆ ಆರಂಭದಲ್ಲಿಯೇ ಕಾಮಗಾರಿಗೆ ತಗಲುವ ಪೂರ್ಣ ಅನುದಾನವನ್ನು ಬಿಡುಗಡೆ ಮಾಡಲಾಗುತ್ತದೆ.
ಕಾಮಗಾರಿಯ ಪ್ರಗತಿಯಲ್ಲಿ ಯಾವುದೇ ಆರ್ಥಿಕ ತೊಂದರೆ ಎದುರಾಗುವುದಿಲ್ಲ. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬಹುದು ಎಂದು  ಡಾ.ಸಂಜಯ್ ಎಸ್ ಬಿಜ್ಜೂರ್ ತಿಳಿಸಿದರು.

ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ತಾಲ್ಲೂಕಿನ ಗಣಿಬಾದಿತ ಪ್ರದೇಶಗಳಲ್ಲಿ ರೂ.3,792.30 ಕೋಟಿ ವೆಚ್ಚದ ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದೆ. ಪರಿಸರ ಪುನಶ್ಚೇತನ ಅಡಿಯಲ್ಲಿ ಅರಣ್ಯ ಇಲಾಖೆ ರೂ.540.83 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಳಿ ರೂ.14.81 ಕೋಟಿ, ಕೃಷಿ ಸಂಬಂಧಿಸಿ ಚಟುವಟಿಕೆಗಳಡಿಯಲ್ಲಿ ಕೃಷಿ ಇಲಾಖೆ ರೂ.324.85 ಕೋಟಿ, ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ರೂ.38 ಕೋಟಿ, ರೇಷ್ಮೆ ಇಲಾಖೆ ರೂ.3.5 ಕೋಟಿ, (KMERC Fund) ತೋಟಗಾರಿಕೆ ಇಲಾಖೆ ರೂ.17.06 ಕೋಟಿ, ಮೀನುಗಾರಿಕೆ ರೂ.7.62 ಕೋಟಿ ಯೋಜನೆಗಳನ್ನು ರೂಪಿಸಿವೆ.

ಕುಡಿಯುವ ನೀರು, ನೈರ್ಮಲ್ಯ ಮತ್ತು ಗ್ರಾಮೀಣ ರಸ್ತೆಗಳ ಅಭಿವೃದ್ದಿಗಾಗಿ ನಗರ ನೀರು ಮತ್ತು ಒಳಚಂರಡಿ ಮಂಡಳಿ ರೂ.165 ಕೋಟಿ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ರೂ.533 ಕೋಟಿ, ಪಂಚಾಯತ್ ರಾಜ್ ಇಂಜಿಯರಿಗ್ ವಿಭಾಗ ರೂ.280.68 ಕೋಟಿ ಯೋಜನೆಗಳನ್ನು ಸಿದ್ದಪಡಿಸಿವೆ.

ಆರೋಗ್ಯ ಇಲಾಖೆ ಸಮುದಾಯ, ಪ್ರಾಥಮಿಕ  ಹಾಗೂ ಉಪ ಆರೋಗ್ಯ ಕೇಂದ್ರಗಳನ್ನು ಬಲಪಡಿಸಲು ರೂ.114 ಕೋಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೂ.114 ಕೋಟಿ ನೂತನ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ.

ಕೆ.ಎಂ.ಇ.ಆರ್.ಸಿ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಗೆ ರೂ.255.94 ಕೋಟಿ, ಪಿಯು ಕಾಲೇಜುಗಳ ಮೂಲ (KMERC Fund) ಸೌಕರ್ಯ ಹಾಗೂ ಕಲಿಕಾ ಸುಧಾರಣೆಗಳ ಬಲವರ್ಧನೆಗಾಗಿ ರೂ.50 ಕೋಟಿ ನೀಡಲಾಗಿದೆ.

ದುರ್ಬಲ ವರ್ಗದವರ ಏಳಿಗೆಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ 94.03 ಕೋಟಿ, ಸಮಾಜ ಕಲ್ಯಾಣ ಇಲಾಖೆ ರೂ.50 ಕೋಟಿ, ಹಿಂದುಗಳಿದ ವರ್ಗಗಳ ಇಲಾಖೆ ರೂ.25.31 ಕೋಟಿ, ಅಲ್ಪಸಂಖ್ಯಾತರ ಇಲಾಖೆ ರೂ.19.2 ಕೋಟಿ ಯೋಜನೆ ರೂಪಿಸಿವೆ.

ಗ್ರಾಮೀಣ ಭಾಗದಲ್ಲಿನ ಮನೆ ಯೋಜನೆಗಾಗಿ ರೂ.106.89 ಕೋಟಿ, ಪ್ರವಾಸೋದ್ಯಮ ಇಲಾಖೆ 34.5 ಕೋಟಿ, ಸಣ್ಣ ನಿರಾವರಿ ಇಲಾಖೆ ರೂ.154.7 ಕೋಟಿ ಮೀಸಲಿರಿಸಲಾಗಿದೆ.

ಭೌತಿಕ ಸೌಕರ್ಯಗಳ ನಿರ್ಮಾಣ ಅಡಿಯಲ್ಲಿ ರೂ.15 ಕೋಟಿ ವೆಚ್ಚದ ಸೈನ್ಸ್ ಪಾರ್ಕ್, 1 ಕೋಟಿ ವೆಚ್ಚದಲ್ಲಿ ಎನ್.ಸಿ.ಸಿ (KMERC Fund) ಬಿಲ್ಡಿಂಗ್, ಸಾರ್ವಜನಿಕ ಗ್ರಂಥಾಲಯಗಳ ಬಲವರ್ಧನೆಗೆ ರೂ.10.29 ಕೋಟಿ, ಸರ್ಕಾರಿ ಮಹಿಳಾ ಪದವಿ ಕಾಲೇಜಿಗೆ ರೂ.25 ಕೋಟಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ರೂ.50 ಕೋಟಿ, ಗಣಿಗಾರಿಕೆ ಇಲಾಖೆ ರೂ.3 ಕೋಟಿ, ಕಂದಾಯ ಇಲಾಖೆ ರೂ.1 ಕೋಟಿ ಯೋಜನೆಗಳನ್ನು ರೂಪಿಸಿವೆ.

ಕೌಶಲ್ಯಾಭಿವೃದ್ಧಿ ಇಲಾಖೆ ರೂ.70.79 ಕೋಟಿ, ಲೋಕೋಪಯೋಗಿ ಇಲಾಖೆ ರೂ.620.22 ಕೋಟಿ ಕ್ರಿಯಾ ಯೋಜನೆಗಳನ್ನು ಸಿದ್ದಪಡಿಸಿದ್ದು, ಈಗಾಗಲೇ ಅನುಮೋದನೆ ಪಡೆದು ಆರಂಭಿಸಿದ ಕಾಮಗಾರಿಗಳ ವಿವರವನ್ನು ಪ್ರತಿ ವರ್ಷವೂ ನೀಡಬೇಕು. ಕೆ.ಎಂ.ಇ.ಆರ್.ಸಿ (KMERC Fund) ಅನುಮೋದನೆಯನ್ನು ಪಡೆಯದ ಯೋಜನೆಗಳಿಗೆ ಕೂಡಲೇ ಅನುಮೋದನೆ ಪಡೆಯುವಂತೆ ಡಾ.ಸಂಜಯ್ ಎಸ್ ಬಿಜ್ಜೂರ್ ಹೇಳಿದರು.

ಚಳ್ಳಕೆರೆ ಕುದಾಪುರದ ಬಳಿಯ ಭಾರತೀಯ ವಿಜ್ಞಾನ ಕೇಂದ್ರ (ಐಐಎಸ್‍ಸಿ) ಆವರಣದಲ್ಲಿಯೇ ಸೈನ್ಸ್ ಪಾರ್ಕ್ ನಿರ್ಮಾಣ ಮಾಡುವುದರಿಂದ ನಿರ್ವಹಣೆಗೆ ಉತ್ತಮವಾಗುತ್ತದೆ. ಗಣಿ ಬಾಧಿತ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಕೆ.ಎಂ.ಇ.ಆರ್.ಸಿ ವತಿಯಿಂದ ಯೋಜನೆ ರೂಪಿಸಿ, ಟೆಂಡರ್ ಕರೆಯಲಾಗುತ್ತಿದೆ.

ಕೂಡಲೇ ಅನುಮೋದಿತ ಫಲಾನುಭವಿಗಳ ಪಟ್ಟಿಯನ್ನು ಕಳುಹಿಸಿಕೊಡಬೇಕು. ಸಮಾಜ ಕಲ್ಯಾಣ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಸ್ಟೆಲ್‍ಗಳ ನಿರ್ಮಾಣದ ಯೋಜನೆ ರೂಪಿಸುವ ಮುನ್ನ ಸಾದಕ ಬಾದಕಗಳ ಕುರಿತು (KMERC Fund) ವಿಸ್ತøತವಾಗಿ ಪರಿಶೀಲನೆ ನಡೆಸಬೇಕು. ತಾಲ್ಲೂಕು ಹಂತದಲ್ಲಿ ಪೌಷ್ಠಿಕ ಆಹಾರ ಸಿದ್ದಪಡಿಸಿ ಶಾಲಾ ಮಕ್ಕಳಿಗೆ ಒದಗಿಸುವ ಕುರಿತು ಇಸ್ಕಾನ್ ಸೇರಿದಂತೆ ಖಾಸಗಿ ಭಾಗಿದಾರರ ಜೊತೆ ಚರ್ಚೆ ನಡೆಸುವಂತೆ ಡಾ.ಸಂಜಯ್ ಎಸ್ ಬಿಜ್ಜೂರ್ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಸೂಚಿಸಿದರು.

ಗಣಿಬಾಧಿತ ಪ್ರದೇಶಗಳಲ್ಲಿ ಜಲಜೀವನ್ ಮಿಷನ್, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಲ್ಲಿ ಬಿಟ್ಟು ಹೋದ ಕಾಮಗಾರಿಗಳ ವಿವರವನ್ನು ಪಡೆದು ಯೋಜನಾ ವರದಿ ಸಿದ್ದಪಡಿಸಿ ಕೆ.ಎಂ.ಇ.ಆರ್.ಸಿಗೆ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: National Highway Project: ರಾಷ್ಟ್ರೀಯ ಹೆದ್ದಾರಿ ಯೋಜನೆ ತ್ವರಿತ ಗ್ರೀನ್ ಸಿಗ್ನಲ್ ಗೆ ಸಂಸದ ಗೋವಿಂದ ಎಂ.ಕಾರಜೋಳ ಮನವಿ ಸಲ್ಲಿಕೆ

ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಇರುವ ಹೊಸ ಯೋಜನೆಗಳನ್ನು ರೂಪಿಸುವುದಾಗಿ (KMERC Fund) ಜಿ.ಪಂ ಸಿಇಓ ಡಾ.ಆಕಾಶ್ ಹೇಳಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿ.ಪಂ.ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ.ಮಹೇಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

National Highway Project: ಯಾವ್ಯಾವ ರಾಷ್ಟ್ರೀಯ ಹೆದ್ದಾರಿಗೆ ಹಣ ಕೇಳಿದ್ದಾರೆ ಸಂಸದ ಗೋವಿಂದ ಎಂ.ಕಾರಜೋಳ

ಅಂಡರ್ ಪಾಸ್ ನಲ್ಲಿ ನೀರು | ಕಾರು ಮುಳುಗಡೆ, ದೂರು ಸಲ್ಲಿಕೆ : underpass

V V Sagara Dam | ಇಂದಿನ ನೀರಿನ ಮಟ್ಟದಲ್ಲಿ 1150 ಕ್ಯೂಸೆಕ್ಸ್ ಏರಿಕೆ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ: Quiz competition

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಖೋ-ಖೋ, ವಾಲಿಬಾಲ್ ಕ್ರೀಡೆಗೆ ನವೋದಯ ಶಾಲೆಯ ಐವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ | Sports
ಕ್ರೀಡೆ
Dina Bhavishya | ದಿನ ಭವಿಷ್ಯ | 7-8-2025
ದಿನ ಭವಿಷ್ಯ
ವಸತಿ ಶಾಲೆಗಳಿಗೆ AC ಮಹಬೂಬ್ ಜಿಲಾನಿ ಖುರೇಶಿ ಭೇಟಿ, ಪರಿಶೀಲನೆ
ಇಂದಿನ ಸುದ್ದಿ
CHITRADURGA ಜಿಲ್ಲೆಯಲ್ಲಿ 31 ಮಿ.ಮೀ ಮಳೆ | 18 ಮನೆ ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?