Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: KPSC | ಆಗಸ್ಟ್ 27 ರಂದು ಕೆಪಿಎಸ್‌ಸಿ ಪರೀಕ್ಷೆ; ಅಕ್ರಮ ತಡೆಗೆ ಕೈಗೊಂಡ ಕ್ರಮಗಳು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > KPSC | ಆಗಸ್ಟ್ 27 ರಂದು ಕೆಪಿಎಸ್‌ಸಿ ಪರೀಕ್ಷೆ; ಅಕ್ರಮ ತಡೆಗೆ ಕೈಗೊಂಡ ಕ್ರಮಗಳು
ಇಂದಿನ ಸುದ್ದಿ

KPSC | ಆಗಸ್ಟ್ 27 ರಂದು ಕೆಪಿಎಸ್‌ಸಿ ಪರೀಕ್ಷೆ; ಅಕ್ರಮ ತಡೆಗೆ ಕೈಗೊಂಡ ಕ್ರಮಗಳು

Editor Nammajana
Last updated: 21 August 2024 18:45
By Editor Nammajana 4 Min Read
Share
SHARE
Chitradurga news | nammajana.com | 22-8-2024
ನಮ್ಮಜನ.ಕಾಂ, ಚಿತ್ರದುರ್ಗ: ಸ್ಪರ್ಧಾತ್ಮಕ ಪರೀಕ್ಷೆ ನಿರ್ವಹಣೆ ಕಾರ್ಯ ಅತಿ ಸೂಕ್ಷ್ಮವಾದದ್ದು, ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಇದರಲ್ಲಿ ಅಡಗಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು (KPSC) ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆಯಿಂದ, ಪ್ರಾಮಾಣಿಕವಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.
ಆಗಸ್ಟ್ 27 ರಂದು ಕೆ.ಪಿ.ಎಸ್.ಸಿ ವತಿಯಿಂದ ನಡೆಯಲಿರುವ ಗೆಜೆಟೆಡ್ ಪ್ರೊಬೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆ ಕುರಿತು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ (KPSC) ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಉತ್ತಮವಾಗಿ ನಡೆಸಲಾಗಿದೆ. ಈ ಬಾರಿಯೂ ಯಾವುದೇ ಲೋಪದೋಷಗಳು ಬಾರದಂತೆ ಪರೀಕ್ಷೆ ಕಾರ್ಯ ನಿರ್ವಹಿಸಬೇಕು. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಪರೀಕ್ಷಾ ಕೊಠಡಿಗಳಲ್ಲಿ ಅಭ್ಯರ್ಥಿಗಳಿಗೆ ಸೂಕ್ತ ಆಸನ, ಗಾಳಿ ಬೆಳಕಿನ ವ್ಯವಸ್ಥೆ ಇರಬೇಕು. ಮಳೆಗಾಲವಾದ್ದರಿಂದ ಕೊಠಡಿಗಳಲ್ಲಿ ಮಳೆ ನೀರಿನಿಂದ (KPSC) ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ಬಂಡಲ್‍ಗಳನ್ನು ಕೊಂಡೊಯ್ಯಲು ನೇಮಿಸಿರುವ ಮಾರ್ಗಾಧಿಕಾರಿಗಳು ಸರಿಯಾದ ಸಮಯಕ್ಕೆ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು.
ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಓಎಂಆರ್ ಬಂಡಲ್‍ಗಳನ್ನು ಅಂಚೆ ಮೂಲಕ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಿಕೊಡಬೇಕು. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಇರುವ ಅಂಚೆ ಕಚೇರಿಗಳು ಓಎಂಆರ್ ಬಂಡಲ್‍ಗಳು ತಲುಪುವವರೆಗೂ ತಪ್ಪದೇ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
ಸಿ.ಸಿ ಟಿವಿ ಹಾಗೂ ಮೊಬೈಲ್ ಜಾಮರ್ ಅಳವಡಿಕೆ:
ಕರ್ನಾಟಕ ಲೋಕಸೇವಾ ಆಯೋಗದಿಂದಲೇ ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿ ಹಾಗೂ ಮೊಬೈಲ್ ಜಾಮರ್ ಅಳವಡಿಸಲಾಗುವುದು. ಪ್ರತಿ ಕೊಠಡಿಯ ಸಿಸಿ ಟಿವಿ (KPSC) ದೃಶ್ಯಗಳನ್ನು  ವೀಕ್ಷಣೆ ಮಾಡಲಾಗುತ್ತದೆ. ಇದರೊಂದಿಗೆ ಕೊಠಡಿ ಮೇಲ್ವಿಚಾರಕರಿಗೂ ಬಾಡಿ ಕ್ಯಾಮರ ಹಾಕಿಕೊಳ್ಳುವುದನ್ನು ಕಡ್ಡಾಯವಾಗಿಸಿದೆ.
ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಎಲೆಕ್ಟ್ರಾನಿಕ್ ಗ್ಯಾಜೆಟ್‍ಗಳನ್ನು ಉಪಯೋಗಿಸಿ ಕೆಲ ಅಭ್ಯರ್ಥಿಗಳು ಅಕ್ರಮ ಎಸಗಲು ಪ್ರಯತ್ನಿಸಿರುವ ಬಗ್ಗೆ ವರದಿಗಳಿವೆ, ಹೀಗಾಗಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಬೇಕು.
ಲೋಕಸೇವಾ ಆಯೋಗ ನೀಡಿರುವ ಪರೀಕ್ಷಾ ಕೈಪಿಡಿಯ ಅನುಸಾರ ಪರೀಕ್ಷಾ ಕಾರ್ಯದಲ್ಲಿ ಮಾಡಬೇಕಾದ ಹಾಗೂ ಮಾಡಬಾರದ ಕಾರ್ಯಗಳ ಬಗ್ಗೆ ಕೊಠಡಿ ಮೇಲ್ವಿಚಾರಕರಿಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ: (KPSC)

ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ದೃಷ್ಠಿಯಿಂದ ಅ. 27 ರಂದು ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಸೆಕ್ಷನ್ 114 ವಿಧಿಸಿ ನಿಷೇದಾಜ್ಞೆ ಜಾರಿ ಮಾಡಲಾಗುವುದು. ಈ ಕೇಂದ್ರಗಳ ಅಕ್ಕಪಕ್ಕದಲ್ಲಿ (KPSC) ಕಾರ್ಯನಿರ್ವಹಿಸುವ ಜೆರಾಕ್ಸ್, ಕಂಪ್ಯೂಟರ್ ಹಾಗೂ ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚಬೇಕು.

ಒಂದು ವೇಳೆ ಯಾವುದಾದರು ಜೆರಾಕ್ಸ್ ಹಾಗೂ ಕಂಪ್ಯೂಟರ್ ಹಾಗೂ ಇಂಟರ್‍ನೆಟ್ ಸೆಂಟರ್ ತೆರೆದಿದ್ದರೆ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ಸ್ಥಾಪಿಸಿ ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಅಗತ್ಯ ಸೂಚನಾ ಫಲಕ ಅಳವಡಿಸಲು ಸೂಚನೆ:

ಪರೀಕ್ಷೆಗೆ ಅಕ್ಕಪಕ್ಕದ ಜಿಲ್ಲೆಗಳಿಂದ ಅಭ್ಯರ್ಥಿಗಳು ಆಗಮಿಸುತ್ತಾರೆ. ಅಭ್ಯರ್ಥಿಗಳಿಗೆ ಗೊಂದಲವಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಾಹಿತಿ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅಭ್ಯರ್ಥಿಗಳ ನೊಂದಣಿ ಸಂಖ್ಯೆ, ಕೊಠಡಿ ಸಂಖ್ಯೆಗಳ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು. ಪರೀಕ್ಷೆ ಆರಂಭದಿಂದ ಹಿಡಿದು ಮುಕ್ತಾಯದವರೆಗೆ ಅಭ್ಯರ್ಥಿಗಳಿಗೆ ಸಮಯದ ಮಾಹಿತಿ ನೀಡಲು ಬೆಲ್ ಬಾರಿಸಬೇಕು ಎಂದು ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸೂಚಿಸಿದರು.

ಸೂಕ್ತ ಪೊಲೀಸ್ ಭದ್ರತೆ : (KPSC)

ಅತ್ಯಂತ ಸೂಕ್ಷ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವ ಸಂಭವ ಇರುತ್ತದೆ. ಆದ್ದರಿಂದ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ತಪಾಸಣೆ ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು.
ಪರೀಕ್ಷಾ ಕೇಂದ್ರಗಳಿಗೆ ಸುತ್ತ ಹಾಗೂ ಮಾರ್ಗಾಧಿಕಾರಿಗಳ ತಂಡಕ್ಕೆ ಪೊಲೀಸರನ್ನು ನೇಮಿಸಿ ಭದ್ರತೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು ತಿಳಿಸಿದರು.

ಬಸ್ ಹಾಗೂ ರೈಲ್ವೇ ನಿಲ್ದಾಣಗಳಲ್ಲಿ ಪರೀಕ್ಷಾ ಕೇಂದ್ರಗಳ ಮಾಹಿತಿ:

ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಪರೀಕ್ಷೆ ಬರೆಯಲು ಅಭ್ಯರ್ಥಿಗಳು ಚಿತ್ರದುರ್ಗ ನಗರಕ್ಕೆ ಆಗಮಿಸುತ್ತಾರೆ. ಇವರಿಗೆ ಅನುಕೂಲವಾಗುವಂತೆ ಬಸ್ ಹಾಗೂ ರೈಲ್ವೇ ನಿಲ್ದಾಣಗಳಲ್ಲಿ ಪರೀಕ್ಷಾ ಕೇಂದ್ರಗಳ ಮಾಹಿತಿ ಪ್ರದರ್ಶಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

24 ಪರೀಕ್ಷಾ ಕೇಂದ್ರ 8098 ಅಭ್ಯರ್ಥಿಗಳು: (KPSC)

ಪರೀಕ್ಷೆಯು ಆ. 27 ರಂದು ಬೆ. 10 ರಿಂದ ಮ. 12 ರವರೆಗೆ ಪತ್ರಿಕೆ-01 ಹಾಗೂ ಮ. 02 ರಿಂದ ಸಂಜೆ 04 ರವರೆಗೆ ಪತ್ರಿಕೆ-02 ರ ಪರೀಕ್ಷೆ ನಡೆಯಲಿದೆ.  ನಗರದಲ್ಲಿ 24 ಪರೀಕ್ಷಾ ಕೇಂದ್ರಗಳು ಇದ್ದು, ಒಟ್ಟು 8098 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 155 ಅಂಗವಿಕಲ ಅಭ್ಯರ್ಥಿಗಳು ಇದ್ದಾರೆ. 10 ಅಂಧ ವಿದ್ಯಾರ್ಥಿಗಳಿಗೆ ಸ್ಕ್ರೈಬ್ ಸೌಲಭ್ಯ ಒದಗಿಸಲಾಗಿದೆ.
ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗದಿಂದ ಪರೀಕ್ಷಾ ಮಾಹಿತಿ ಕೈಪಿಡಿ ಬಂದಿದೆ. ಇದರ ಅನುಸಾರ ಪರೀಕ್ಷಾ (KPSC) ಕೇಂದ್ರಗಳ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಸಭೆಯಲ್ಲಿ ಮಾಹಿತಿ ನೀಡಿದರು.
Chitradurga Rain | ಜಿಲ್ಲೆಯಲ್ಲಿ ಸುರಿದ ಜೋರು ಮಳೆಗೆ 49 ಮನೆ ಹಾನಿ | ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Chitradurga DistrictChitradurga NewsDistrict Administration ReadinessDistrict CollectorDistrict Superintendent of PoliceExaminationG.P.CEOKannada Newskannada suddiKPSCMeetingNammajana.comNecessary FacilityRanjith Kumar BandaruS. J. SomasekharT. Venkateshಅಗತ್ಯ ಸೌಲಭ್ಯಎಸ್.ಜೆ.ಸೋಮಶೇಖರ್ಕನ್ನಡ ನ್ಯೂಸ್ಕನ್ನಡ ಸುದ್ದಿಕೆಪಿಎಸ್ಸಿಚಿತ್ರದುರ್ಗಚಿತ್ರದುರ್ಗ ಜಿಲ್ಲೆಚಿತ್ರದುರ್ಗ ಸುದ್ದಿಜಿ.ಪಂ.ಸಿಇಓಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಜಿಲ್ಲಾಡಳಿತ ಸಿದ್ದತೆಜಿಲ್ಲಾಧಿಕಾರಿಟಿ.ವೆಂಕಟೇಶ್ನಮ್ಮಜನ.ಕಾಂಪರೀಕ್ಷೆರಂಜಿತ್ ಕುಮಾರ್ ಬಂಡಾರುಸಭೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Chitradurga Rain | ಜಿಲ್ಲೆಯಲ್ಲಿ ಸುರಿದ ಜೋರು ಮಳೆಗೆ 49 ಮನೆ ಹಾನಿ | ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?
Next Article ದಿನ ಭವಿಷ್ಯ 22-8-2024 | ಇಂದು ಯಾವ ರಾಶಿಗೆ ಶುಭ? Dina Bhavishya kannada
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?