Chitradurga news|nammajana.com|15-11-2024
ನಮ್ಮಜನ.ಕಾಂ, ಚಿತ್ರದುರ್ಗ: ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (Krishi Mela) ಕೃಷಿ ಮೇಳ ಆಯೋಜಿಸಲಾಗಿದೆ.
ಚಿತ್ರದುರ್ಗಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ವತಿಯಿಂದ ಬಬ್ಬೂರು ಫಾರಂನ ವಲಯ ಕೃಷಿ ಮತ್ತು (Krishi Mela) ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಇದೇ ನ.16 ಮತ್ತು 17ರಂದು ಎರಡು ದಿನಗಳ ಕೃಷಿಮೇಳ ಆಯೋಜಿಸಲಾಗಿದೆ.

ಈ ಕೃಷಿಮೇಳದ ಆಕರ್ಷಣೆಯಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಪ್ರಾತ್ಯಕ್ಷೀಕೆಗಳು, ವಿವಿಧ ಬೆಳೆಗಳ ಸಂಶೋಧನಾ ಪ್ರಾತ್ಯಕ್ಷೀಕೆಗಳು, ಜೇನುಕೃಷಿ ಮತ್ತು ಕೀಟ ವಿಸ್ಮಯ, ಗ್ರಾಮೀಣ ಕೃಷಿ ಹವಾಮಾನ ಘಟಕ, ಬಾಡಿಗೆ ಆಧಾರಿತ ಯಂತ್ರೋಪಕರಣಗಳ ಘಟಕ, ಕೃಷಿ ಸಂಬಂಧಿತ (Krishi Mela) ವಸ್ತುಪ್ರದರ್ಶನ ಮಳಿಗೆಗಳು, ಸಿರಿಧಾನ್ಯ ಮಹತ್ವ, ಸುಧಾರಿತ ಉತ್ಪಾದನಾ ತಾಂತ್ರಿಕತೆಗಳು ಹಾಗೂ ಮೌಲ್ಯವರ್ಧನೆ, ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಬೇಸಾಯ ಕ್ರಮಗಳು, ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಹಾಗೂ ಆಧುನಿಕ ಕೃಷಿ ಯಂತ್ರೋಪಕರಣಗಳ ಉಪಯೋಗ ಮತ್ತು ಬಳಕೆ ಕುರಿತು ತಾಂತ್ರಿಕ ಸಮಾವೇಶ ಜರುಗಲಿದೆ.
ಇದನ್ನೂ ಓದಿ: ಕುಡಿಯಲು ಹಣ ಕೊಡಲ್ಲ ಅಂದಿದ್ದಕ್ಕೆ ಮೂವರನ್ನು ಚಾಕುವಿಂದ ಚುಚ್ಚಿ ಹಲ್ಲೆ | Assault
ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರದ ಸಹ (Krishi Mela) ಸಂಶೋಧನಾ ನಿರ್ದೇಶಕರಾದ ಡಾ. ಶರಣಪ್ಪ ಜಂಗಂಡಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252