Chitradurga News | Nammajana.com |2-5-2024
ನಮ್ಮಜನ.ಕಾಂ.ಹಿರಿಯೂರು: ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಮನವಿ ಟ್ರಸ್ಟ್ ವತಿಯಿಂದ ಹಿರಿಯೂರಿನ ವೇದಾವತಿ ನಗರದ ೧೦೦ ಫೀಟ್ ರಸ್ತೆಯಲ್ಲಿ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ಹಾಗೂ ಹೊಸ ವಸ್ತ್ರವನ್ನು ಉಡುಗೊರೆಯಾಗಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಈ ಸಂದರ್ಭದಲ್ಲಿ ಮನವಿ ಟ್ರಸ್ಟ್ ಸಂಸ್ಥಾಪಕರಾದ ಮಾನಸ ಮಂಜುನಾಥ್ ಅವರು ಮಾತನಾಡಿ ಪ್ರತಿಯೊಬ್ಬ ಕಾರ್ಮಿಕರು ನಮ್ಮ ದೇಶದ ಆಧಾರ ಸ್ತಂಭ , ಅದೇ ರೀತಿ ಪೌರ ಕಾರ್ಮಿಕರು ಪ್ರತಿನಿತ್ಯ ಜನರ ಆರೋಗ್ಯಕ್ಕಾಗಿ, ರಕ್ಷಣೆಗಾಗಿ, ಸ್ವಚ್ಛತೆಗಾಗಿ , ಶ್ರಮವಹಿಸಿ ಕೆಲಸವನ್ನು ನಿರ್ವಹಿಸುತ್ತಾರೆ ಹಾಗಾಗಿ ಇಂಥವರನ್ನ ಗುರುತಿಸುವುದು ಬಹಳ ಮುಖ್ಯ ಎಂದು ತಿಳಿಸಿದರು .

ಇದನ್ನೂ ಓದಿ: ಅಬಕಾರಿ ದಾಳಿ| ಹೋಟೆಲ್ನಲ್ಲಿ ಇಟ್ಟಿದ್ದ ಅಕ್ರಮ ಮದ್ಯ ಹಾಗೂ ವ್ಯಕ್ತಿ ವಶ
ಈ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯರಾದ ಜಿ.ಎಸ್ ತಿಪ್ಪೇಸ್ವಾಮಿ, ರಕ್ಷಣಾ ವೇದಿಕೆ ಗೌರವಾಧ್ಯಕ್ಷರಾದ ಗೋ. ಬಸವರಾಜ್, ಎಚ್ ಐ ಓ ಅಶೋಕ್, ಡಿ ತಿಪ್ಪೇಸ್ವಾಮಿ , ಹೆಚ್ ತಿಪ್ಪೇಸ್ವಾಮಿ, ವಿನಯ್ ಜಿ, ಕುಮಾರಸ್ವಾಮಿ, ವೀಣಾ ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252