Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Lake development | ಅಧಿಕಾರ ಶಾಶ್ವತವಲ್ಲ, ಇದ್ದಾಗ ಎಲ್ಲರ ನೆನಪಿನಲ್ಲಿ ಉಳಿಯುವಂತೆ ಮಾಡಬೇಕು: ಎಂ.ಚಂದ್ರಪ್ಪ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Lake development | ಅಧಿಕಾರ ಶಾಶ್ವತವಲ್ಲ, ಇದ್ದಾಗ ಎಲ್ಲರ ನೆನಪಿನಲ್ಲಿ ಉಳಿಯುವಂತೆ ಮಾಡಬೇಕು: ಎಂ.ಚಂದ್ರಪ್ಪ
ಇಂದಿನ ಸುದ್ದಿ

Lake development | ಅಧಿಕಾರ ಶಾಶ್ವತವಲ್ಲ, ಇದ್ದಾಗ ಎಲ್ಲರ ನೆನಪಿನಲ್ಲಿ ಉಳಿಯುವಂತೆ ಮಾಡಬೇಕು: ಎಂ.ಚಂದ್ರಪ್ಪ

Editor Nammajana
Last updated: 6 February 2025 11:22
By Editor Nammajana 2 Min Read
Share
SHARE

Chitradurga news|nammajana.com|06-02-2025

ನಮ್ಮಜನ.ಕಾಂ, ಹೊಳಲ್ಕೆರೆ: ಅಧಿಕಾರ ಶಾಶ್ವತವಲ್ಲ. ಇದ್ದಾಗ ಎಲ್ಲರ ನೆನಪಿನಲ್ಲಿ ಉಳಿಯುವಂತ ಕೆಲಸ ಮಾಡಬೇಕೆಂಬ (Lake development) ಜಾಯಮಾನ ನನ್ನದು ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮದ ಹತ್ತಿರ ಒಂದು ಕೋಟಿ ರೂ.ವೆಚ್ಚದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿಗೆ ಗುರುವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.

ರೈತರಿಗೆ ನೀರು ವಿದ್ಯುತ್ ಎರಡು ಅತಿ ಮುಖ್ಯವಾಗಿ ಬೇಕಾಗಿರುವುದರಿಂದ ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ ಐದು ನೂರು ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. ಜೋಗ್‍ಫಾಲ್ಸ್‍ನಿಂದ ಇಲ್ಲಿಗೆ ನೇರವಾಗಿ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ಇನ್ನು ನೂರು (Lake development) ವರ್ಷಗಳ ಕಾಲ ವಿದ್ಯುತ್ ಸಮಸ್ಯೆ ರೈತರನ್ನು ಕಾಡುವುದಿಲ್ಲ ಎಂದರು.

ಹಿರಿಯೂರಿನ ವಾಣಿವಿಲಾಸಸಾಗರದ ಮಧ್ಯೆ ನಲವತ್ತು ಅಡಿ ಆಳದಲ್ಲಿ ಪಿಲ್ಲರ್ ಎತ್ತಿ ಮೋಟಾರ್ ಕೂರಿಸಿ 67 ಕೋಟಿ ರೂ.ವೆಚ್ಚದಲ್ಲಿ ಫಿಲ್ಟರ್ ಅಳವಡಿಸಿ ತಾಲ್ಲೂಕಿನ ಪ್ರತಿ ಹಳ್ಳಿಯಲ್ಲಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಇನ್ನು ನಾಲ್ಕೈದು ತಿಂಗಳಲ್ಲಿ ಪೂರೈಕೆಯಾಗಲಿದೆ. ಕ್ಷೇತ್ರಾದ್ಯಂತ ಕೆರೆ ತುಂಬಿಸುವ ಯೋಜನೆ, ಗುಣ ಮಟ್ಟದ ಆಸ್ಪತ್ರೆ, ಶಾಲಾ-ಕಾಲೇಜು, ಸಿ.ಸಿ.ರಸ್ತೆಗಳನ್ನು ನಿರ್ಮಿಸಿದ್ದೇನೆ. ವೈದ್ಯರುಗಳು ಬೇರೆ ಊರಿನಿಂದ ಬರುವುದು ಕಷ್ಟವಾಗುತ್ತದೆಂದು ವಸತಿ ಗೃಹಗಳನ್ನು ಕಟ್ಟಿಸಿದ್ದೇನೆ. ಯಾರಿಂದಲೂ ಏನನ್ನು ಹೇಳಿಸಿಕೊಳ್ಳದೆ ಎಲ್ಲಿ ಏನು ಅಗತ್ಯವಿದೆ ಎನ್ನುವುದನ್ನು (Lake development) ಮನಗಂಡು ಹಗಲು-ರಾತ್ರಿ ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆಂದು ತಿಳಿಸಿದರು.

31 ವರ್ಷಗಳ ಹಿಂದೆ ಪ್ರಥಮ ಬಾರಿಗೆ ಭರಮಸಾಗರ ವಿಧಾನಸಭೆಯಿಂದ ಸ್ಪರ್ಧಿಸಿ ಶಾಸಕನಾದವನು. ಹೊಳಲ್ಕೆರೆಯಲ್ಲಿ ಮೂರು ಬಾರಿ ನನ್ನನ್ನು ಗೆಲ್ಲಿಸಿ ಅಧಿಕಾರ ಕೊಟ್ಟಿದ್ದೀರ. ನಿಮ್ಮಗಳ ಋಣ ನನ್ನ ಮೇಲಿದೆ. ಸಾಸಲು ಹಳ್ಳದಿಂದ ಹಿರೇಬೆನ್ನೂರು ಸರ್ಕಲ್‍ರವರೆ ರಸ್ತೆಗೆ ನೂರು ಕೋಟಿ ರೂ.ಗಳನ್ನು ನೀಡಿದ್ದೇನೆ. ಸಾಸ್ವೆಹಳ್ಳಿ ಬಳಿ ಸೇತುವೆಗೆ ಐದು ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದೇನೆ. ಹೊಳಲ್ಕೆರೆಯಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಿಸಿದ್ದೇನೆ. ಸುತ್ತಮುತ್ತಲಿನ ಹತ್ತಾರು (Lake development) ಗ್ರಾಮಗಳ ಬಡ ರೋಗಿಗಳಿಗೆ ಅನುಕೂಲವಾಗಲಿ ಎನ್ನುವುದು ನನ್ನ ಉದ್ದೇಶ ಎಂದು ನುಡಿದರು.

ಇದನ್ನೂ ಓದಿ: “ಕ್ಷಯ ರೋಗ ಮುಕ್ತ” ಹೊಸದುರ್ಗ ತಾಲೂಕಿಗೆ ಕರೆ: ಡಾ. ಸ್ವಾತಿ ಪ್ರದೀಪ್ | Tuberculosis free

ಹೊಳಲ್ಕೆರೆ ಬಿಜೆಪಿ.ಮಂಡಲ ಮಾಜಿ ಅಧ್ಯಕ್ಷ ಸಿದ್ದೇಶ್, ಶರಣಪ್ಪ, ಸಿದ್ದೇಶಪ್ಪ, ಕುಮಾರ್, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ನವೀನ್ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Chitradurga NewsholalkereKannada Newskannada suddiLake DevelopmentM. ChandrappaMallenahalliMLANammajana.comಎಂ.ಚಂದ್ರಪ್ಪಕನ್ನಡ ನ್ಯೂಸ್ಕನ್ನಡ ಸುದ್ದಿಕೆರೆ ಅಭಿವೃದ್ಧಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಲ್ಲೇನಹಳ್ಳಿಶಾಸಕಹೊಳಲ್ಕೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article “ಕ್ಷಯ ರೋಗ ಮುಕ್ತ” ಹೊಸದುರ್ಗ ತಾಲೂಕಿಗೆ ಕರೆ: ಡಾ. ಸ್ವಾತಿ ಪ್ರದೀಪ್ | Tuberculosis free
Next Article ಹೊಳಲ್ಕೆರೆ ನಗರದಲ್ಲಿ ನಾಳೆ ನೂತನ ಶ್ರೀ ಕುಕ್ವಾಡೇಶ್ವರಿ ದೇವಸ್ಥಾ‌ನಕ್ಕೆ ಭೂಮಿ ಪೂಜೆ | Shri Kukwadeshwari
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?