Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Land Acquisition: ಭೂಸ್ವಾಧೀನ ಪರಿಹಾರ ವಿತರಣೆಯಲ್ಲಿ ಅಕ್ರಮ, FIR ದಾಖಲಿಸಿ: ಡಿ.ಸುಧಾಕರ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Land Acquisition: ಭೂಸ್ವಾಧೀನ ಪರಿಹಾರ ವಿತರಣೆಯಲ್ಲಿ ಅಕ್ರಮ, FIR ದಾಖಲಿಸಿ: ಡಿ.ಸುಧಾಕರ್
ಇಂದಿನ ಸುದ್ದಿ

Land Acquisition: ಭೂಸ್ವಾಧೀನ ಪರಿಹಾರ ವಿತರಣೆಯಲ್ಲಿ ಅಕ್ರಮ, FIR ದಾಖಲಿಸಿ: ಡಿ.ಸುಧಾಕರ್

Editor Nammajana
Last updated: 29 July 2024 11:32
By Editor Nammajana 2 Min Read
Share
SHARE
Chitradurga news|nammajana.com|29-7-2024
ನಮ್ಮಜನ.ಕಾಂ, ಚಿತ್ರದುರ್ಗ:ಜಿಲ್ಲೆಯಲ್ಲಿ ಹಾದುಹೋಗಿರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ-150ರಲ್ಲಿನ ರಸ್ತೆ ಅಡಚಣೆ, ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥಪಡಿಸಿ, (Land Acquisition) ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ 150ರಲ್ಲಿನ ಭೂಸ್ವಾಧೀನ ( ಪ್ರಕರಣಗಳ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ (Land Acquisition) ಅವರು ಮಾತನಾಡಿದರು.

ಭೂಸ್ವಾಧೀನದ ಪರಿಹಾರ ಮೊತ್ತದಲ್ಲಿ ಅಕ್ರಮ

ಸರ್ಕಾರಿ ಜಮೀನನ್ನು ಅಕ್ರಮವಾಗಿ ಬೇರೆಯವರ ಹೆಸರಿನಲ್ಲಿ ಇ-ಸ್ವತ್ತು ಮಾಡಿ, ರಾಷ್ಟ್ರೀಯ ಹೆದ್ದಾರಿಗಾಗಿ ಭೂಸ್ವಾಧೀನ (Land Acquisition) ಮಾಡಿಕೊಳ್ಳುವ ಸಂದರ್ಭದಲ್ಲಿ, ಭೂಸ್ವಾಧೀನದ ಪರಿಹಾರ ಮೊತ್ತವನ್ನು ಅಕ್ರಮವಾಗಿ ಬೇರೆಯವರ ಹೆಸರಿಗೆ ಪಾವತಿಸಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಕಂಪನಿಯವರು ರಸ್ತೆ ನಿರ್ಮಾಣಕ್ಕಾಗಿ ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಗ್ರಾವಲ್ ಮಣ್ಣು ಎತ್ತಿ, ಇದಕ್ಕೆ ಯಾವುದೇ ರಾಜಧನ ಪಾವತಿಸದೇ ಇರುವ ಬಗ್ಗೆಯೂ ದೂರುಗಳು ಬಂದಿವೆ.
ಇದನ್ನೂ ಓದಿ: Rain damage: ಮಳೆಯಿಂದ ಬೆಳೆಗಳು ರೋಗಕ್ಕೆ ತುತ್ತಾಗುವ ಆತಂಕದಲ್ಲಿ ರೈತರುರೈತರು
ಇವೆಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಯಾರೇ ತಪ್ಪು ಮಾಡಿದ್ದರೂ ಅಂತಹವರ ವಿರುದ್ಧ ಎಫ್‌ಐಆರ್ (Land Acquisition) ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದವರ ವಿರುದ್ಧ ನಿಯಮಾನುಸಾರ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಭೂಸ್ವಾಧೀನ ಸಮಸ್ಯೆಗಳನ್ನಯ ಸಮಗ್ರವಾಗಿ ಚರ್ಚೆ ಮಾಡಿ (Land Acquisition)

ರಾಷ್ಟ್ರೀಯ ಹೆದ್ದಾರಿ-150ರ ರಸ್ತೆ ಕಾಮಗಾರಿಯಲ್ಲಿನ ಭೂಸ್ವಾಧೀನ ಸಮಸ್ಯೆ, ರೈತರಿಗೆ ಪರಿಹಾರ ಸಮಸ್ಯೆ ಸೇರಿದಂತೆ ಇತ್ಯಾದಿ ಸಮಸ್ಯೆಗಳನ್ನು ಸಮಗ್ರವಾಗಿ ಚರ್ಚೆ ಮಾಡಿ, ಶೀಘ್ರವಾಗಿ ಪರಿಹರಿಸಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಹಿರಿಯೂರಿನಲ್ಲಿ ಎರಡು ರಾಷ್ಟೀಯ ಹೆದ್ದಾರಿಗಳು ಹಾದುಹೋಗಿದ್ದು, ಈ ಹಿಂದೆ ಇರುವ ರಸ್ತೆಯಲ್ಲಿ ಬಳ್ಳಾರಿ (Land Acquisition) ಕಡೆಯಿಂದ ಬರುವ ವಾಹನಗಳು, ಹುಳಿಯಾರು ಕಡೆಯಿಂದ ಬರುವ ವಾಹನಗಳು ಕೆಲವು ಬೆಂಗಳೂರು ಹಾಗೂ ಚಿತ್ರದುರ್ಗ ಕಡೆಗೆ ಚಲಿಸುತ್ತವೆ, ಪ್ರಸ್ತುತ ರಾಷ್ಟೀಯ ಹೆದ್ದಾರಿ-150ರ ರಸ್ತೆ ಕಾಮಗಾರಿಯು ನೇರವಾಗಿ ಮಾಡಲಾಗಿದ್ದು, ಇದರಿಂದಾಗಿ ವಾಹನ ಚಾಲನೆಗೆ ತೊಂದರೆಯಾಗುತ್ತಿದೆ.

ಹಿರಿಯೂರು ಜಂಕ್ಷನ್ ಮಾಡಿಕೊಳ್ಳಿ:(Land Acquisition)

ಹೀಗಾಗಿ ಹಿರಿಯೂರನ್ನು ಜಂಕ್ಷನ್ ಮಾಡಿಕೊಂಡು, ಬಟರ್‌ಪ್ಲೆ ಡಿಸೈನ್ ಮೂಲಕ ಎರಡೂ ರಾಷ್ಟ್ರೀಯ ಹೆದ್ದಾರಿಗೆ ಸಾಗುವ ರಸ್ತೆಯನ್ನು ವಿಭಜಿಸಬೇಕು, ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದು, ಕೂಡಲೇ ಯೋಜನೆಯಲ್ಲಿ ಮರು ಸೇರ್ಪಡೆ ಮಾಡಿಕೊಂಡು ಹಿರಿಯೂರಿನಲ್ಲಿ (Land Acquisition) ಬಟರ್‌ಪ್ಲೆಓವರ್ ಡಿಸೈನ್ ಜಂಕ್ಷನ್ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟೀಯ ಹೆದ್ದಾರಿ-150ರ ರಸ್ತೆ ಕಾಮಗಾರಿಯಲ್ಲಿನ ನ್ಯೂನತೆಯನ್ನು ಸರಿಪಡಿಸಬೇಕು ಹಾಗೂ ಭೂಸ್ವಾಧೀನ (Land Acquisition) ಪ್ರಕರಣಗಳನ್ನು ಇತ್ಯರ್ಥಪಡಿಸಿ ಎರಡು ತಿಂಗಳೊಳಗೆ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: VV Sagara water level: ವಿವಿ ಸಾಗರದ ನೀರಿನ ಮಟ್ಟ ಹೆಚ್ಚಳ | ಜುಲೈ 29-7-2024
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ರಾಷ್ಟೀಯ ಹೆದ್ದಾರಿ-150ರ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಪಿಎನ್‌ಸಿ ಕಂಪನಿಯ (Land Acquisition) ಪ್ರತಿನಿಧಿಗಳು ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

HOSADURGA Bhadra | ಹೊಸದುರ್ಗಕ್ಕೆ ಭದ್ರಾ ನೀರು ಬಾರದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry1
Dead0
Wink0
Previous Article VV Sagara water level: ವಿವಿ ಸಾಗರದ ನೀರಿನ ಮಟ್ಟ ಹೆಚ್ಚಳ | ಜುಲೈ 29-7-2024
Next Article Child is pregnant: ಚಿತ್ರದುರ್ಗದಲ್ಲಿ 164 ಬಾಲ ಗರ್ಭಿಣಿ ಪ್ರಕರಣ, ತಕ್ಷಣ FIR ದಾಖಲಿಸಿ: ಡಾ.ಕೆ.ಟಿ.ತಿಪ್ಪೇಸ್ವಾಮಿ ಸೂಚನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ದಿನ ಭವಿಷ್ಯ | ಇವತ್ತು ಈ ಎರಡು ರಾಶಿಗೆ ರಾಜಯೋಗ | Dina Bhavishya
ದಿನ ಭವಿಷ್ಯ
ದಿನ ಭವಿಷ್ಯ | 29-6-2025 | Dina Bhavishya
ದಿನ ಭವಿಷ್ಯ
guarantee | ಸರ್ಕಾರದ 02 ವರ್ಷಗಳ ಸಾಧನೆಗಳ ವಸ್ತು ಪ್ರದರ್ಶನಕ್ಕೆ ಚಾಲನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?