Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ | 72 ಸಾವಿರ ಹೆಕ್ಟೇರ್ ಕಂದಾಯ ಭೂಮಿ ಒತ್ತುವರಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ | Land Encroachment
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ | 72 ಸಾವಿರ ಹೆಕ್ಟೇರ್ ಕಂದಾಯ ಭೂಮಿ ಒತ್ತುವರಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ | Land Encroachment
ಇಂದಿನ ಸುದ್ದಿ

ಚಿತ್ರದುರ್ಗ | 72 ಸಾವಿರ ಹೆಕ್ಟೇರ್ ಕಂದಾಯ ಭೂಮಿ ಒತ್ತುವರಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ | Land Encroachment

Editor Nammajana
Last updated: 31 August 2024 6:25 PM
By Editor Nammajana 3 Min Read
Share
SHARE
Telegram Group Join Now
WhatsApp Group Join Now

itradurga news | nammajana.com | 31-8-2024 

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ 7,70,702 ಹೆಕ್ಟೇರ್ ವಿಶಾಲ ಪ್ರದೇಶದಲ್ಲಿ, 2,06,594 ಹೆಕ್ಟೇರ್ ಜಾಗ ಕಂದಾಯ (Land Encroachment)  ಇಲಾಖೆ ಸುಪರ್ದಿಯಲ್ಲಿದೆ.

ಇದರಲ್ಲಿ ಸುಮಾರು 72,000 ಹೆಕ್ಟೇರ್ ನಷ್ಟು ಜಾಗ ಒತ್ತುವರಿಯಾಗಿದೆ ಎಂಬ ಮಾಹಿತಿ ಇದೆ.  ಈ ಒತ್ತುವರಿ ಜಾಗಗಳಿಗೆ ಫಾರಂ 50, 53 ಹಾಗೂ 57 ಅಡಿ ಭೂಮಿ (Land Encroachment) ಮಂಜೂರಿಗೆ ಸಾಕಷ್ಟು ಜನರು ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ಹಿಂದುಳಿದ ಜಿಲ್ಲೆ, 3 ಎಕರೆಗಿಂತ ಕಡಿಮೆ ಜಾಗ ಒತ್ತುವರಿಯಾಗಿದ್ದು, ಅದನ್ನು ತೆರವು ಮಾಡುವುದರಿಂದ ಜೀವನ ಆಧಾರಕ್ಕೆ ತೊಂದರೆಯಾಗುತ್ತದೆ ಎನ್ನುವ ಅಂಶಗಳ (Land Encroachment)  ಹಿನ್ನೆಲೆಯಲ್ಲಿ ಈ ಒತ್ತುವರಿ ತೆರವುಗೊಳಿಸಿರಲಿಕ್ಕಿಲ್ಲ. ಈ ಎಲ್ಲಾ ಅಂಶಗಳ ಹೊರತಾಗಿಯೂ ಒತ್ತುವರಿಯಾದ 72,000 ಹೆಕ್ಟೇರ್ ಪೈಕಿ 15,000 ಹೆಕ್ಟೇರ್ ಭೂಮಿ ಒತ್ತುವರಿ ತೆರವುಗೊಳಿಸಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.

ಕಂದಾಯ ಇಲಾಖೆ ಭೂಮಿ ಹೊರತಾಗಿ ಅರಣ್ಯ, ಮುಜುರಾಯಿ, ಸ್ಮಶಾನ, ಕೆರೆ ಒತ್ತುವರಿ ಪ್ರಕರಣಗಳು ಜಿಲ್ಲೆಯಲ್ಲಿವೆ. ವಿಶೇಷ ಭೂ ಕಬಳಿಕೆ ನಿಷೇಧ ನ್ಯಾಯಾಲಯ, ಸುಪ್ರಿಂಕೋರ್ಟ್ ಹಸಿರು ನ್ಯಾಯಾಲಯಗಳ ಆದೇಶವಿದ್ದರೂ, ಕೆರೆ ಒತ್ತುವರಿ ಪೂರ್ಣ ಪ್ರಮಾಣದಲ್ಲಿ ತೆರವು ಆಗಿಲ್ಲ. ಜಿಲ್ಲೆಯಲ್ಲಿ ಮಳೆ ಬೀಳುವ ಪ್ರಮಾಣ ಕಡಿಮೆಯಿದೆ. ಅಂತರ್ಜಲ ಮಟ್ಟ (Land Encroachment)  ಕೂಡ ಕುಸಿದಿದೆ.

ಸಣ್ಣ ನೀರಾವರಿ, ಜಲಾನಯನ ಸೇರಿದಂತೆ, ಕೆ.ಎಂ.ಇ.ಆರ್.ಸಿ ಹಾಗೂ ಡಿ.ಎಂ.ಎಫ್ ನಿಧಿಗಳ ಅಡಿ ಸಾವಿರಾರು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗಿದೆ. ದುರಂತವೆಂದರೆ ಈ ಜಲಮೂಲಗಳ ಸಂಗ್ರಹಕ್ಕೆ ಬೇಕಾದ ಕೆರೆಗಳೇ ಒತ್ತುವರಿಯಾಗಿವೆ. ಇದರಿಂದ ಹಣವೂ ವ್ಯರ್ಥವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬೇಸರ ವ್ಯಕ್ತಪಡಿಸಿದರು.

ಚಳ್ಳಕೆರೆ ಹಾಗೂ ಚಿತ್ರದುರ್ಗ ನಗರದ ಮೂಲ ನಕ್ಷೆಯಲ್ಲಿ ನಗರದ ಪ್ರಮುಖ ಬೀದಿಗಳು ಈಗಿರುವ ವಿಸ್ತೀರ್ಣದ ನಾಲ್ಕರಷ್ಟು ಅಗಲವಾಗಿವೆ. ಆದರೆ ಒತ್ತುವರಿಯಿಂದ ಇಂದು ಕಿರಿದಾಗಿವೆ. ಭೂ ಕಬಳಿಕೆ, ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೆ ಕಾರಣವೆನ್ನಬಹುದಾಗಿದೆ. ಒತ್ತುವರಿ ಜಾಗ ತೆರವು ಗೊಳಿಸದೇ, ಅವುಗಳಿಗೆ ಖಾತೆ ಮಾಡಿಕೊಡಲಾಗಿದೆ.

ಇಂದರಿಂದಾಗಿ ಒತ್ತುವರಿದಾರರು ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಿ ಕೂತಿದ್ದಾರೆ. ನಗರದ ಹಳೆಯ ಭೂ ನಕ್ಷೆಯ ಪ್ರಕಾರ ಒಂದು ನಯಾಪೈಸೆ ಪರಿಹಾರ ನೀಡದೇ ಚಿತ್ರದುರ್ಗ ಹಾಗೂ ಹಿರಿಯೂರು ನಗರಗಳಲ್ಲಿ ಒತ್ತುವರಿ ತೆರವುಗೊಳಿಸಬಹುದಾಗಿದೆ.ಚಳ್ಳಕೆರೆ ನಗರದಲ್ಲಿ ಈಗಾಗಲೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ಹೇಳಿದರು.

ಈ ಕಾರ್ಯಗಾರಕ್ಕೆ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ. ಏಕೆಂದರೆ ಎಲ್ಲಾ ಇಲಾಖೆಗಳಿಗೂ ಸರ್ಕಾರಿ ಜಾಗಗಳನ್ನು ಮಂಜೂರು ಮಾಡಿ ವಶಕ್ಕೆ ನೀಡಲಾಗಿದೆ. ಈ ಜಾಗಗಳ ರಕ್ಷಣೆ ಹೊಣೆ ಆಯಾ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ.

ಭೂ ರಕ್ಷಣೆ ಸಂಬಂದಿಸಿದಂತೆ, ಭೂ ಕಬಳಿಕೆ ನಿμÉೀಧ, ಮೋಜಣಿ, ಕರ್ನಾಟಕ ಭೂ ಕಂದಾಯ,  ನಗರ ಪಾಲಿಕೆ, ಪಂಚಾಯತ್ ರಾಜ್,  ಕೆರೆ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರ, ಅರಣ್ಯ ಸಂರಕ್ಷಣೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಹಾಗೂ ವಕ್ಫ್ ಅಧಿನಿಯಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ಈ ಕಾಯ್ದೆಗಳನ್ನು ಬಳಸಿ ಭೂ ಒತ್ತುವರಿ ತಡೆಯುವುದು ಹೇಗೆ ಎಂಬುದನ್ನು ಕಾರ್ಯಗಾರದಲ್ಲಿ ತಿಳಿಸಿಕೊಡಲಾಗುವುದು. ಅನಧಿಕೃತ ಭೂ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಿಸಿಕೊಳ್ಳಲು ಆದೇಶ ಪಡೆದ ಉದಾಹರಣೆಗಳು ಸಾಕಷ್ಟಿವೆ.

ನ್ಯಾಯಲಯಕ್ಕೆ ಸಲ್ಲಿಸುವ ಭೂ ದಾಖಲೆಗಳು (Land Encroachment)  ಅಧಿಕೃತವಾಗಿರಬೇಕು.  ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸರ್ಕಾರಿ ಭೂಮಿಯನ್ನು ಮಂಜೂರು ಮಾಡುವಾಗ ಜಾಗರೂಕರಾಗಿರಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಜವಾಬ್ದಾರಿಯಾಗಿದೆ.

ಸಮಾರಂಭದಲ್ಲಿ ಭೂ ಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಅಪರ ನಿರ್ದೇಶಕ ಕೆ.ಜಯಪ್ರಕಾಶ್, ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಲಯದ ಕಂದಾಯ ಸದಸ್ಯರಾದ ಎಸ್.ಪಾಲಯ್ಯ, ಅಶ್ವತ್ಥನಾರಾಯಣ ಗೌಡ.ಕೆ.ಹೆಚ್, ವಿಲೇಖನಾಧಿಕಾರಿ ಹೆಚ್.ಕೆ.ನವೀನ್, ಪೋಲಿಸ್ ಅಧೀಕ್ಷಕ ರಂಜೀತ್ ಕುಮಾರ್ ಬಂಡಾರು, ಹೆಚ್ಚುವರು ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ವಂದನೆ ಸಲ್ಲಿಸಿದರು.

ಇದನ್ನೂ ಓದಿ: ವಾಣಿ ವಿಲಾಸ ಸಾಗರದ 693 ಕ್ಯೂಸೆಕ್ಸ್ ಒಳಹರಿವು ಹೆಚ್ಚಳ | Vani Vilasa Sagara DamDam

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ,  ಕಂದಾಯ, ಅರಣ್ಯ, ನಗರಾಭಿವೃದ್ಧಿ, ಪೊಲೀಸ್, ಶಿಕ್ಷಣ ಇಲಾಖೆ ಹಾಗೂ ಪೌರಾಡಳಿತ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:72 thousand hectares72 ಸಾವಿರ ಹೆಕ್ಟೇರ್ChitradurgaChitradurga NewsCollectorKannada Newskannada suddiLand EncroachmentNammajana.comRevenue DepartmentRevenue LandT. Venkateshಕಂದಾಯ ಇಲಾಖೆಕಂದಾಯ ಭೂಮಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾಧಿಕಾರಿಟಿ.ವೆಂಕಟೇಶ್ನಮ್ಮಜನ.ಕಾಂಭೂ ಒತ್ತುವರಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರದ 693 ಕ್ಯೂಸೆಕ್ಸ್ ಒಳಹರಿವು ಹೆಚ್ಚಳ | Vani Vilasa Sagara Dam
Next Article Dina Bhavishya: ಇಂದಿನ ದಿನ ಭವಿಷ್ಯ ಯಾವ ರಾಶಿಗೆ ಶುಭ ಫಲ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?