Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ಜಿಲ್ಲೆಯಲ್ಲಿ 3 ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲ ಮಂಜೂರು | ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ ಜಿಲ್ಲೆಯಲ್ಲಿ 3 ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲ ಮಂಜೂರು | ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ
ಇಂದಿನ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ 3 ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲ ಮಂಜೂರು | ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

Nammajana Sub Editor
Last updated: 31 August 2025 12:38 PM
By Nammajana Sub Editor 3 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 31-08-2025

ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಪ್ರಧಾನ(food processing units) ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿ.ಎಂ.ಎಫ್.ಎಂ.ಇ) ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೇವಲ 3 ಆಹಾರ ಸಂಸ್ಕರಣಾ ಘಟಕಗಳಿಗೆ ಮಾತ್ರ ಬ್ಯಾಂಕ್‍ನಿಂದ ಸಾಲ ಮಂಜೂರು ಮಾಡಲಾಗಿದೆ. ಯೋಜನೆ ಪ್ರಗತಿಯಲ್ಲಿ ಜಿಲ್ಲೆ 20ನೇ ಸ್ಥಾನದಲ್ಲಿದೆ. ಬ್ಯಾಂಕುಗಳು ರೈತರಿಗೆ ಸಾಲ ಮಂಜೂರು ಮಾಡಲು ಹಿಂದೇಟು ಹಾಕದೇ ಉತ್ತೇಜನ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ | Mahatma Gandhi

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪಿ.ಎಂ.ಎಫ್.ಎಂ.ಇ ಹಾಗೂ ಪಿ.ಎಂ.ಆರ್.ಕೆ.ವಿ.ವೈ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಸಮತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2025-26ನೇ ಸಾಲಿನಲ್ಲಿ ಪಿ.ಎಂ.ಎಫ್.ಎಂ.ಇ ಯೋಜನಯಡಿ ಜಿಲ್ಲೆಗೆ 100 ಘಟಕಗಳ ಗುರಿ ನಿಗದಿ ಮಾಡಲಾಗಿದೆ. ಆದರೆ 54 ಅರ್ಜಿಗಳು ಮಾತ್ರ ಸ್ವೀಕೃತವಾಗಿವೆ. 54 ಅರ್ಜಿಗಳ ಪೈಕಿ 24 ಅರ್ಜಿಗಳನ್ನು ಸಾಲ ಮಂಜೂರಾತಿಗೆ ಬ್ಯಾಂಕ್‍ಗೆ ಕಳುಹಿಸಿಕೊಡಲಾಗಿದೆ.

ಇದರಲ್ಲಿ ಕೇವಲ 06 ಅರ್ಜಿಗಳಿಗೆ ಸಾಲ ನೀಡಲು ಅನುಮೋದನೆ ನೀಡಲಾಗಿದೆ. 03 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 04 ಅರ್ಜಿಗಳು ಪ್ರಗತಿಯಲ್ಲಿದ್ದು, 3 ಅರ್ಜಿದಾರರಿಗೆ ಸಾಲ ಮಂಜೂರಾತಿಯಾಗಿದೆ. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ರೈತರ ಸಂಖ್ಯೆ ಹೆಚ್ಚಿದೆ.

ರೈತರು ಬ್ಯಾಂಕುಗಳು ನೀಡುವ ಸಾಲ ಮೊತ್ತಕ್ಕಿಂತಲೂ ಹೆಚ್ಚಿನ ಮೌಲ್ಯದ ಜಮೀನುಗಳನ್ನು ಬ್ಯಾಂಕ್‍ಗೆ ಅಡಮಾನ ಇಡುತ್ತಾರೆ. ಆದರೂ ಬ್ಯಾಂಕುಗಳು ಸಾಲ ನೀಡಲು ನಿರಾಕರಿಸುವುದು ಏಕೆ ಎಂದು ಬ್ಯಾಂಕ್‍ಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಅರ್ಜಿಯೊಂದಿಗೆ ಸಲ್ಲಿಸಿದ ಎಲ್ಲ ದಾಖಲೆಗಳು ಸೂಕ್ತವಾಗಿದ್ದರೇ, ಕೂಡಲೇ ಸಾಲ ಮಂಜೂರಾತಿ ಮಾಡಬೇಕು. ಈ ಕುರಿತು ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರಿಗೆ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‍ನಿಂದ ನಿರ್ದೇಶನ ನೀಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: CHITRADURGA ಜಿಲ್ಲೆಯಲ್ಲಿ ಇ-ಪೌತಿ ಆಂದೋಲನ ಪ್ರಾರಂಭ : ಸದುಪಯೋಗಕ್ಕೆ ಮನವಿ

2021-22 ರಿಂದ 28-08-2025 ವರೆಗೆ ಜಿಲ್ಲೆಯಲ್ಲಿ ಪಿ.ಎಂ.ಎಫ್.ಎಂ.ಇ ಯೋಜನೆಯಡಿ 622 ಅರ್ಜಿಗಳು ಸಲ್ಲಿಕೆಯಾಗಿದ್ದು, 103 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 139 ಅರ್ಜಿಗಳಿಗೆ ಸಾಲ ಮಂಜೂರಾತಿ ಅನುಮೋದನೆ ನೀಡಿದ್ದು, 120 ಜನರಿಗೆ ಸಾಲ ವಿತರಿಸಲಾಗಿದೆ. 36 ಅರ್ಜಿಗಳು ಮಂಜೂರಾತಿ ಪ್ರಗತಿಯಲ್ಲಿದೆ.

ಎಸ್.ಬಿ.ಐ ಬ್ಯಾಂಕ್‍ನಲ್ಲಿ 12, ಕೆನರಾ ಬ್ಯಾಂಕ್‍ನಲ್ಲಿ 10, ಕರ್ನಾಟಕ ಗ್ರಾಮೀಣ ಬ್ಯಾಂಕ್‍ನಲ್ಲಿ 7, ಬ್ಯಾಂಕ್ ಆಫ್ ಬರೋಡ, ಕರ್ನಾಟಕ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್‍ನಲ್ಲಿ ತಲಾ 2, ಸೆಂಟ್ರಲ್ ಬ್ಯಾಂಕ್, ಇಂಡಿಯಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಲಾ 1 ಅರ್ಜಿಗಳು ಬಾಕಿಯಿವೆ. ಈ ಕುರಿತು ಪರಿಶೀಲನೆ ನಡೆಸಲು ಈ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರೊಂದಿಗೆ ಸಭೆ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ಸೂಚಿಸಿದರು.

ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಪರ್ ಡ್ರಾಪ್ ಮೋರ್ ಕ್ರಾಪ್-ಸೂಕ್ಷ್ಮ ನೀರಾವರಿ ಯೋಜನೆಯಡಿ ಸೂಕ್ಷ್ಮ, ತುಂತುರು ಹಾಗೂ ಹನಿ ನೀರಾವರಿ ಘಟಕಗಳಿಗೆ ರೂ.6.18 ಕೋಟಿಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ.

ಮಾರ್ಗ ಸೂಚಿಯಂತೆ ಸೂಕ್ಷ ನೀರಾವರಿ(food processing units) ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಶೇ.90 ರಷ್ಟು, ಹನಿ ನೀರಾವರಿ ಘಟಕಗಳಿಗೆ ಸಣ್ಣ, ಅತಿ ಸಣ್ಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಹಾಗೂ ಇತರೆ ವರ್ಗದವರಿಗೆ ಶೇ.45 ರಷ್ಟು ಸಹಾಯಧನವನ್ನು ನೀಡಲಾಗುವುದು ಎಂದು ಕೃಷಿ ಜಂಟಿನಿರ್ದೇಶಕ ಮಂಜುನಾಥ ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿ: ಮಾಜಿ ಸೈಕರ ಮಕ್ಕಳಿಗೆ ಅಗ್ನಿವೀರ್ ನೇಮಕಾತಿ

ಉಪನಿರ್ದೇಶಕ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ರಾಘವೇಂದ್ರ, ಕೃಷಿ ಇಲಾಖೆ ಉಪನಿರ್ದೇಶಕ ಶಿವಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Telegram Group Join Now
WhatsApp Group Join Now

You Might Also Like

Astrology | ದಿನ ಭವಿಷ್ಯ, ಯಾರಿಗೆಲ್ಲ ಆರ್ಥಿಕ ಅನುಕೂಲ

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

TAGGED:Additional Deputy Commissioner KumaraswamyBankCanara BankChitradurgaChitradurga NewsFood processing unitKannada NewsloanNammajana.comSanctionSBI Bankಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿಆಹಾರ ಸಂಸ್ಕರಣಾ ಘಟಕಎಸ್.ಬಿ.ಐ ಬ್ಯಾಂಕ್‍ಕನ್ನಡ ನ್ಯೂಸ್ಕನ್ನಡ ಸುದ್ದಿಕೆನರಾ ಬ್ಯಾಂಕ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಬ್ಯಾಂಕ್ಮಂಜೂರುಸಾಲ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead0
Wink0
Previous Article ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ | Mahatma Gandhi
Next Article ವಾಲ್ಮೀಕಿ ಕೋಟಾದ ಮಿನಿಸ್ಟರ್ ರೇಸ್‌ನಲ್ಲಿ ಟಿ.ರಘುಮೂರ್ತಿ ಫಸ್ಟ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
ದಿನ ಭವಿಷ್ಯ | 09-10-2025 | Dina Bhavishya
ದಿನ ಭವಿಷ್ಯ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?