Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೇಂದ್ರದಲ್ಲಿ ಅಧಿಕಾರಕ್ಕಾಗಿ ಗೋವಿಂದ ಕಾರಜೋಳಗೆ ಮತ ನೀಡಿ: ಜಿ.ಎಂ.ಸುರೇಶ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಕೇಂದ್ರದಲ್ಲಿ ಅಧಿಕಾರಕ್ಕಾಗಿ ಗೋವಿಂದ ಕಾರಜೋಳಗೆ ಮತ ನೀಡಿ: ಜಿ.ಎಂ.ಸುರೇಶ್
ರಾಜಕೀಯ

ಕೇಂದ್ರದಲ್ಲಿ ಅಧಿಕಾರಕ್ಕಾಗಿ ಗೋವಿಂದ ಕಾರಜೋಳಗೆ ಮತ ನೀಡಿ: ಜಿ.ಎಂ.ಸುರೇಶ್

Editor Nammajana
Last updated: 23 April 2024 16:42
By Editor Nammajana 2 Min Read
Share
SHARE

Chitradurga News |Nammajana.com | 23-4-2024 

ನಮ್ಮಜನ.ಕಾಂ. ಹೊಳಲ್ಕೆರೆ : ಬಿಜೆಪಿ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಬಿಜೆಪಿ ಪಕ್ಷದ ಚಿತ್ರದುರ್ಗ ಸಂಸತ್ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ  ಮತ ನೀಡಬೇಕೆಂದು ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಜಿ.ಎಂ.ಸುರೇಶ್ ತಿಳಿಸಿದರು.

ತಾಲ್ಲೂಕಿನ ರಾಮಗಿರಿ. ಬಿದುರ್ಗ ಸೇರಿ ವಿವಿಧ ಹಳ್ಳಿಗಳಲ್ಲಿ ಮಂಗಳವಾರ ಬಿಜೆಪಿ ಪಕ್ಷದ ಪರ ಮನೆಗಳಿಗೆ ತೆರಳಿ ಪ್ರಚಾರ ನಡೆಸಿ  ಮತಯಾಚಿಸಿ ಮಾತನಾಡಿದರು.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ೪೦ ವರ್ಷಗಳಿಂದ ಬಿಜೆಪಿ ಪಕ್ಷವನ್ನ ಕಟ್ಟಿ ಬೆಳೆಸಿ ಹೋರಾಟ ಕೈಗೊಂಡಿದ್ದೇವೆ. ಅದರ ಪರಿಣಾಮವಾಗಿ ಬಿಜೆಪಿ ಪಕ್ಷ ಕ್ಷೇತ್ರದಲ್ಲಿ ಸುಭದ್ರವಾಗಿದೆ. ಎರಡು ಭಾರಿ ಎಂ.ಪಿ. ಮೂರು ಭಾರಿ ಎಂಎಲ್‌ಎ ಜನರು ಗೆಲ್ಲಿಸಿದ್ದಾರೆ. ಜನರು ಈ ಭಾರಿ ಬಿಜೆಪಿ ಪಕ್ಷಕ್ಕೆ ಬೆಂಬಲಿಸಲು ತುದಿಗಾಲಲ್ಲಿ ನಿಂತಿದ್ದು, ಬಿಜೆಪಿ ಪಕ್ಷಕ್ಕೆ ಬಹುಮತ ಸಿಗುವ ವಿಶ್ವಾಸ ವ್ಯಕ್ತ ಪಡಿಸಿದರು.

ಬಿಜೆಪಿ ಜಿಲ್ಲಾ ಖಚಾಂಚಿ ಎಸ್. ಆರ್.ಗಿರೀಶ್ ಮಾತನಾಡಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ದೇಶದ ಭದ್ರತೆ ಹೆಚ್ಚಾಗಲಿದೆ. ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿಯಂತ್ರಣವಾಗಲಿದೆ.

ರಸ್ತೆ ಅಭಿವೃದ್ಧಿ,. ಶೈಕ್ಷಣಿಕ ಕ್ಷೇತ್ರ ಬದಲಾವಣೆ, ನೀರಾವರಿಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಹಾಗಾಗಿ ಚಿತ್ರದುರ್ಗದ ಸಂಸತ್ ಕ್ಷೇತ್ರವನ್ನು ಗೆಲ್ಲಬೇಕಾದರೆ ಬಿಜೆಪಿ ಪಕ್ಷದ ಅಭ್ಯರ್ಥಿ ಗೋವಿಂದಕಾರಜೋಳ್ ಇವರಿಗೆ ಮತ ನೀಡಬೇಕು ಎಂದರು.

ಮಾಜಿ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ಜನರಿಗೆ ಜಾಗೃತಿ ಮೂಡಿಸಲಾಗುತ್ತದೆ. ಜನರು ಬಿಜೆಪಿ ಪಕ್ಷವನ್ನ ಗೆಲ್ಲಿಸಲು ಹೆಚ್ಚಿನ ಮತ ನೀಡಲಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಒಂದು ಲಕ್ಷಕ್ಕೂ ಅಧಿಕ ಮತ ಸಿಕ್ಕಲ್ಲಿದೆ ಎಂದರು.

ಇದನ್ನೂ ಓದಿ: ಮುರುಘಾ ಶರಣರಿಗೆ ತಪ್ಪಿಲ್ಲ ಸಂಕಷ್ಟ | ಸುಪ್ರೀಂ ಕೋರ್ಟ್ ಜಾಮೀನು ರದ್ದು| ಕೋರ್ಟ್ ಹೇಳಿದ್ದೇನು 

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಧನಂಜಯ್ ನಾಯ್ಕ ಮಾತನಾಡಿ, ದೇಶದ ಭದ್ರತೆಗೆ ನಾವೆಲ್ಲರೂ ಬಿಜೆಪಿ ಪಕ್ಷಕ್ಕೆ ಬೆಂಬಲಿಸಬೇಕು. ಮೋದಿ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಮತ ನೀಡಲು ಮನವಿ ಮಾಡಿದರು.

ಮುಖಂಡರಾದ ಅಗ್ರಹಾರ ಬಸವರಾಜ್, ಮೂರ್ತಿಣ್ಣ, ಕಲ್ಲವನಾಗ್ತಿಹಳ್ಳಿ ಸುರೇಶ್, ಗುಂಡೇರಿ ಚಂದ್ರಶೇಖರ್ ಸೇರಿದಂತೆ ಹಲವಾರು ಮುಖಂಡರು ಪ್ರಚಾರ ಕೈಗೊಂಡರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

TAGGED:BJPChitradurga Lok Sabha Election 2024Chitradurga NewsChitradurga Political NewsGovinda KarjolaHolalkere ConstituencyKannada NewsNammajana.comಕನ್ನಡ ನ್ಯೂಸ್ಕನ್ನಡ ಸುದ್ದಿಗೋವಿಂದ ಕಾರಜೋಳಚಿತ್ರದುರ್ಗ ರಾಜಕೀಯ ಸುದ್ದಿಚಿತ್ರದುರ್ಗ ಲೋಕಸಭಾ ಚುನಾವಣೆ 2024ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಿಜೆಪಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮುರುಘಾ ಶರಣರಿಗೆ ತಪ್ಪಿಲ್ಲ ಸಂಕಷ್ಟ | ಸುಪ್ರೀಂ ಕೋರ್ಟ್ ಜಾಮೀನು ರದ್ದು| ಕೋರ್ಟ್ ಹೇಳಿದ್ದೇನು
Next Article ಚಳ್ಳಕೆರೆ ನಗರದಲ್ಲಿ ಶಾಸಕ ಟಿ.ರಘುಮೂರ್ತಿ ಭರ್ಜರಿ ಮತಬೇಟೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?