Chitradurga news | nammajana.com | 30-07-2025
ನಮ್ಮಜನ.ಕಾಂ, ಹಿರಿಯೂರು:ತಾಲೂಕು(HIRIYUR) ಆರೋಗ್ಯಾಧಿಕಾರಿ ಡಾ.ಜಿ.ವೆಂಕಟೇಶ್ ಮನೆ, ಕ್ಲಿನಿಕ್, ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ದಾಖಲೆ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಈ ವೇಳೆ ಅರ್ಧ ಕೆಜಿ ಚಿನ್ನ, 700 ಗ್ರಾಂ ಬೆಳ್ಳಿ ಆಭರಣ ಮತ್ತು ನಿವೇಶನ ದಾಖಲೆ ಪತ್ರ ಸೇರಿ ಒಟ್ಟು 2.80 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ.
ನಗರದ ಯರಗುಂಟೇಶ್ವರ(HIRIYUR) ಬಡಾವಣೆಯಲ್ಲಿನ ಮನೆ, ಆದಿವಾಲ ಗ್ರಾಮದ ಕ್ಲಿನಿಕ್ ಹಾಗೂ ಸಾರ್ವಜನಿಕ ಆಸ್ಪತ್ರೆಯ ಅವರ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಮಳೆ ಹಾನಿ ಪ್ರದೇಶಕ್ಕೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಭೇಟಿ | ಕುಟುಂಬಸ್ಥರಿಗೆ ವೈಯಕ್ತಿವಾಗಿ ಆರ್ಥಿಕ ನೆರವು
ಲೋಕಾಯುಕ್ತ ಎಸ್ಪಿ ವಾಸುದೇವ ರಾಮ್ ಹಾಗೂ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252