Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ: ಟಿ.ರಘುಮೂರ್ತಿ | Madakari Jayanti-2025
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ: ಟಿ.ರಘುಮೂರ್ತಿ | Madakari Jayanti-2025
ಇಂದಿನ ಸುದ್ದಿ

ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ: ಟಿ.ರಘುಮೂರ್ತಿ | Madakari Jayanti-2025

Editor Nammajana
Last updated: 29 October 2025 9:09 PM
By Editor Nammajana 3 Min Read
Share
SHARE
Telegram Group Join Now
WhatsApp Group Join Now
Chitradurga news|Nammajana.com|29-10-2025
ನಮ್ಮಜನ ಸಮಾಚಾರ ಚಿತ್ರದುರ್ಗ: ಮದಕರಿ ನಾಡಿನಲ್ಲಿ (Madakari Jayanti-2025) ಮದಕರಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿ ದುರ್ಗದ ಮತ್ತು  77 ಪಾಳೇಗಾರರ ಇತಿಹಾಸವನ್ನು  ಭವಿಷ್ಯದ ಪೀಳಿಗೆಗೆ ಇತಿಹಾಸ ತಿಳಿಸುವ ಅವಶ್ಯಕತೆ ಇದೆ ಎಂದು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ನಾಯಕ ಸಮಾಜದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಜವೀರ ಮದಕರಿ ನಾಯಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಎಂದರೆ ಮದಕರಿನಾಯಕ ಮದಕರಿ ನಾಯಕ ಎಂದರೆ ಚಿತ್ರದುರ್ಗ ಎಂಬ ಮಾತು ಇಡೀ ದೇಶದಲ್ಲಿ ಕೇಳಿಸುತ್ತಿದ್ದು ಇದು ಈ‌ ನೆಲದ ಶಕ್ತಿಯಾಗಿದೆ. ಮದಕರಿನಾಯಕ ಅವರು ಸರ್ವ ಜನಾಂಗದ ಏಳ್ಗೆ ಬಯಸುವ ಮೂಲಕ (Madakari Jayanti-2025) ಚಿತ್ರದುರ್ಗ ಆಳ್ವಿಕೆ ಮಾಡಿದ ಚಿತ್ರದುರ್ಗ ನಗರಕ್ಕೆ ಹೊಸ ರೂಪ ಕೊಟ್ಟ ಕೀರ್ತಿ ಮದಕರಿನಾಯಕ ಅವರಿಗೆ ಸಲ್ಲುತ್ತದೆ.
ಮದಕರಿನಾಯಕ ಅವರು ಕಟ್ಟಿಸಿದ ಕೆರೆ ಕಟ್ಟೆಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಅದೆಷ್ಟೋ ಪುಷ್ಕರಣಿ, ಹೊಂಡಗಳು, ಕೆರೆಗಳ ತುಂಬುವುದಿಂದ ಜಲಮಟ್ಟ ಹೆಚ್ಚಳ ಜೊತೆಗೆ ಜನರಿಗೆ ಹಾಹಾಕಾರ ಆಗದಂತೆ ಜನರಿಗೆ ಅನುಕೂಲವಾಗಿದ್ದು 77 ಪಾಳೇಗಾರರು ಸಹ ಶಕ್ತಿಶಾಲಿಗಾಳಾಗಿ ದುರ್ಗವನ್ನು ರಕ್ಷಿಸಿ ಸರ್ವ ಜನಾಂಗದ ಶಾಂತಿಯ ತೋಟದಂತೆ ಆಳ್ವಿಕೆ ನಡೆಸಿದ್ದು ಮುಂದಿನ ದಿನಗಳಲ್ಲಿ ಸಹ ಇನ್ನೂ ಅದ್ದೂರಿಯಾಗಿ ಮದಕರಿ ಜಯಂತಿ ಆಚರಣೆ ಮಾಡಲಾಗುತ್ತದೆ.
ನಾಯಕ ಸಮಾಜ ಎಲ್ಲ ರಾಜಕೀಯವನ್ನು ಬದಿಗೊತ್ತಿ ಒಂದುಗೂಡಬೇಕು. ಯಾರು ಯಾವುದೇ ರಾಜಕೀಯ ಪಕ್ಷದಲ್ಲಿದ್ದರೂ ಚಿಂತೆಯಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಉಳಿದಂತೆ ಸಮಾಜದ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮರೆತು ಒಂದಾಗಬೇಕು. ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು. ಅದರಂತೆ ಪ್ರತಿ ವರ್ಷ ದುರ್ಗೋತ್ಸವ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸರ್ಕಾರದಿಂದ ಮಆಚರಿಸಲಿ: ಬಿ.ಶ್ರೀರಾಮುಲು

ಮಾಜಿ ಸಚಿವ ಬಿ.ಶ್ರೀರಾಮುಲು ಮಾತ‌ನಾಡಿ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಮದಕರಿ ನಾಯಕ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕೆಂದು ಒತ್ತಾಯಿಸಿದರು.
ಕಳೆದ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಚಿತ್ರದುರ್ಗದಲ್ಲಿ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣ ಮಾಡುವುದಾಗಿ ಕೇಂದ್ರ ಸರ್ಕಾರದ ಗೃಹಸಚಿವ ಅಮಿತ್ ಶಾ ತಿಳಿಸಿದ್ದರು.
ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿಲ್ಲ. ಹಾಗಾಗಿ ಈಗ ಕಾಂಗ್ರೇಸ್ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಸುಧಾಕರ್ ಜಾಗ ನೀಡಿದರೆ ಇದರಲ್ಲಿ ಥೀಮ್ ಪಾರ್ಕ್ (Madakari Jayanti-2025) ನಿರ್ಮಾಣ ಮಾಡಲು ಸಮಾಜ ಸಹಕಾರ ನೀಡಲಿದೆ ಎಂದರು.
ಚಿತ್ರದುರ್ಗದ ಪಾಳೇಗಾರರು ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದರು. ನೆರೆ ರಾಜ್ಯಗಳ ರಾಜರು ಚಿತ್ರದುರ್ಗದ ಮೇಲೆ ದಂಡೆತ್ತಿ ಬಂದರೂ ಅವರು ಗೆಲ್ಲಲು ಸಾಧ್ಯವಾಗಲಿಲ್ಲ ಕಾರಣ ತಮ್ಮ ಸಾಮ್ರಾಜ್ಯ ರಕ್ಷಣೆಗೆ ಭದ್ರ ಕೋಟೆ ನಿರ್ಮಾಣ ಮಾಡಲಾಗಿತ್ತು. ಎಲ್ಲ ಸಮುದಾಯಗಳ ಹಿತರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಿದರು. ಮದಕರಿ ನಾಯಕ ಮಾಡಿರುವ ಕೆಲಸ ಸೂರ್ಯ, ಚಂದ್ರ ಇರುವವರೆಗೆ ಶಾಶ್ವತವಾಗಿರುತ್ತವೆ ಎಂದು ಹೇಳಿದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸಾನಿಧ್ಯವಹಿಸಿ ಮಾತನಾಡಿದರು. ಮಾದಾರ ಚೆನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಇಮ್ಮಡಿ ಕೇತೇಶ್ವರ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಕಾರ್ಯಕ್ರಮದ ರೂವಾರಿ ಹಾಗೂ ಉದ್ಯಮಿ ಶ್ರೀನಿವಾಸ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಕಲ್ಲವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಕಾಂಗ್ರೇಸ್ ಮುಖಂಡ ಯೋಗೀಶ್ ಬಾಬು, ಗುಡ್ಡದೇಶ್ವರಪ್ಪ, ರತ್ನಮ್ಮ ಸೇರಿದಂತೆ ಸಮಾಝದ ಅನೇಕ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಳಿಕ ಕನಕ ವೃತ್ತದಿಂದ ಮದಕರಿ ನಾಯಕ ವೃತ್ತದವರೆಗೆ ಮದಕರಿ ನಾಯಕರ ಕಲಾ ಕೃತಿಯ ಮೆರವಣಿಗೆ ನಡೆಸಲಾಯಿತು. ರಾತ್ರಿ ೮ ಗಂಟೆಯಿAದ ಮದಕರಿ ನಾಯಕ ವೃತ್ತದಲ್ಲಿ ಲೇಸರ್ ಲೈಟಿಂಗ್ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಸಂಖ್ಯೆಯ ಜನರು ಈ ಸೊಬಗನ್ನು ಕಣ್ತ್ತುಂಬಿಕೊಂಡರು.
ಇದನ್ನೂ ಓದಿ: ಗೋಲ್ಡ್ ರೇಟ್ ಭರ್ಜರಿ ಇಳಿಕೆ | Gold Rate Today

ನಾಯಕ ಸಮಾಜ ಸ್ವಾಭಿಮಾನಿ ಸಮಾಜ: ಡಿ.ಸುಧಾಕರ್

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ನಾಯಕ ಸಮಾಜ ಸ್ವಾಭಿಮಾನಿ ಸಮಾಜ. ಪರಿಶ್ರಮದಿಂದ ಬದುವಕ ಸಮಾಜ. ಇಂತಹ ನಾಯಕ ಸಮಾಜದ ಮುಕುಟ ಮಣಿ ಮದಕರಿ ನಾಯಕರ ಹೆಸರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸಲು ಅಗತ್ಯವಿರುವ ಜಾಗ ಕಾಯ್ದಿರಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಪಾರ್ಕ್ (Madakari Jayanti-2025) ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗುವುದು. ಮದಕರಿ ನಾಯಕರು ಸಾಮಾಜಿಕವಾಗಿ ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಅವನ್ನು ಜಗತ್ತಿಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.
Telegram Group Join Now
WhatsApp Group Join Now

You Might Also Like

ರಜಾ ದಿನಗಳಲ್ಲೂ ಕೇಂದ್ರ ಸ್ಥಾನದಲ್ಲಿರಲು ಅಧಿಕಾರಿಗಳಿಗೆ DC ಸೂಚನೆ

Municipal Council | ಚಿತ್ರದುರ್ಗ ನಗರಸಭೆ ಚುನಾವಣೆ | ವಾರ್ಡುಗಳಿಗೆ ಕರಡು ಮೀಸಲಾತಿ ಪಟ್ಟಿ ಪ್ರಕಟ

HIRIYUR | ಶ್ರೀರಾಮ ಆತ್ಮ ಮಹಿಳಾ ಆಹಾರ ಭದ್ರತಾ ಸ್ವ ಸಹಾಯ ಗುಂಪಿಗೆ ರಾಜ್ಯ ಪ್ರಶಸ್ತಿ

ಸರಸ್ವತಿ ಕೆ.ಸಿ. ವೀರೇಂದ್ರ ಪಪ್ಪಿಗೆ “ ಗಿನ್ನಿಸ್ ವಲ್ರ್ಡ್ ರೆಕಾರ್ಡ್ ” ಗೌರವ | Guinness World Record

Pollution | ಮಾಲಿನ್ಯ ನಿಯಂತ್ರಣಕ್ಕೆ ಬೇಕು ಸಾರ್ವಜನಿಕರ ಸಹಕಾರ: ಡಿ.ಸುಧಾಕರ್

TAGGED:ChitradurgaMadakariMadakari Jayanti-2025MLAT Raghumurthyಚಿತ್ರದುರ್ಗಟಿ ರಘುಮೂರ್ತಿಮದಕರಿಮದಕರಿ ಜಯಂತಿ-2025ಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಗೋಲ್ಡ್ ರೇಟ್ ಭರ್ಜರಿ ಇಳಿಕೆ | Gold Rate Today
Next Article Astrology | ಇಂದಿನ ರಾಶಿ ಭವಿಷ್ಯ | ಯಾವ್ಯಾವ ರಾಶಿಗೆ ಶುಭ ಯೋಗ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ದಿನ ಭವಿಷ್ಯ |15-11-2025 | Astrology
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಯಾರಿಗೆ ಶುಭ ಯೋಗ?
ದಿನ ಭವಿಷ್ಯ
Astrology | ಇಂದಿನ ದಿನ ಭವಿಷ್ಯ | 13-11-2025
Blog
Dina Bhavishya | ಇಂದಿನ ರಾಶಿ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?