Chitradurga news | Nammajana.com | 13-5-2024
ನಮ್ಮಜನ.ಕಾಂ , ಚಿತ್ರದುರ್ಗ: ಮೇ 15 ರಂದು ರಾಜವೀರ ಮದಕರಿನಾಯಕರ ಪುಣ್ಯ ಸ್ಮರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ನಾಯಕ ಸಮಾಜ ಸೇರಿ ಎಲ್ಲಾ ಸಮಾಜದ ಬಂಧುಗಳು ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಿ.ಕಾಂತರಾಜ್ ಮನವಿ ಮಾಡಿದರು.
ನಗರದ ಪತ್ರಿಕಾ ಭವನದಲ್ಲಿ ನಾಯಕ ಸಮಾಜದ ಮುಖಂಡರ ಆಯೋಜಿಸಿದ್ದ ಮದಕರಿನಾಯಕ ಪುಣ್ಯಸ್ಮರಣೆ ಕಾರ್ಯಕ್ರಮ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಮದಕರಿನಾಯಕ ಹೆಸರು ಎಲ್ಲೋ ಒಂದು ಕಡೆ ಮರೆಯಗಬಾರದು ಎಂಬ ದೃಷ್ಟಿಯಿಂದ ವರ್ಷಕ್ಕೆ ಎರಡು ಬಾರಿ ನೆನಪು ಮಾಡಿಕೊಳ್ಳುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಮದಕರಿನಾಯಕರ ಪುಣ್ಯ ಸ್ಮರಣೆ ಮತ್ತು ಮದಕರಿನಾಯಕ ಜಯಂತ್ಯೋತ್ಸವ ಕಾರ್ಯಕ್ರಮ ಮಾಡಲಾಗುತ್ತದೆ. ಅದರಂತೆ ಮೇ 15 ರಂದು ಪುಣ್ಯಸ್ಮರಣೆ ಮಾಡಲಾಗುತ್ತದೆ. ಅಂದು ಬೆಳಗ್ಗೆ ಹೂವಿನ ಅಲಂಕಾರ, ಪ್ರತಿಮೆ ಮುಂಭಾಗದಲ್ಲಿ ಸಂಜೆ ಮೇಣದ ಬತ್ತಿ ಬೆಳಗುವ ಕಾರ್ಯಕ್ರಮ ಮಾಡಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಇರುವುದಿಂದ ಯಾವ ರಾಜಕಾರಣಿಗಳು ಸಹ ಆಗಮಿಸುತ್ತಿಲ್ಲ. ಹಾಗೂ ಯಾವ ಸಭಾ ಕಾರ್ಯಕ್ರಮ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ನೀತಿ ಸಂಹಿತೆ ಜಾರಿ ಇರುವುದಿಂದ ಸರಳವಾಗಿ ಮದಕರಿನಾಯಕ ಪುಣ್ಯ ಸ್ಮರಣೆ ಮಾಡಲಾಗುತ್ತಿದ್ದು ಮುಂದಿನ ಬಾರಿ ಅದ್ದೂರಿಯಾಗಿ ಮಾಡಲಾಗುತ್ತದೆ. ಪುಣ್ಯ ಸ್ಮರಣೆಗೆ ಎಲ್ಲಾ ಸಮಾಜದವರು ಭಾಗವಹಿಸಿ ಎಂದರು.
ಇದನ್ನೂ ಓದಿ: HOROSCOPE TODAY: ಇಂದಿನ ದಿನ ಭವಿಷ್ಯ
ಈ ಸಂದರ್ಭದಲ್ಲಿ ಮುಖಂಡರಾದ ಜೆ.ಎನ್.ಕೋಟೆ ಗುರುಸಿದ್ದಪ್ಪ, ಗೋಪಲಸ್ವಾಮಿನಾಯಕ್, ಅಂಜಿನಪ್ಪ, ಕಾಟೀಹಳ್ಳಿ ಕರಿಯಪ್ಪ, ತಿಪ್ಪೇಸ್ವಾಮಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252