
Chitradurga news|nammajana.com|16-10-2024
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯದಲ್ಲಿ ಪ್ರತಿ ವರ್ಷ ಸೀಗೆಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ (Maharshi Valmiki Award) ಜಯಂತಿಯನ್ನು ಆಚರಿಸಲಾಗುತ್ತದೆ.
ಡಾ. ಬಿ.ಆರ್.ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಹಾಗೂ ಶ್ರೀ ಡಿ.ದೇವರಾಜ ಅರಸು ಇವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ (Maharshi Valmiki Award) ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ನಗದು ಮೊತ್ತ ಹಾಗೂ ಬಂಗಾರದ ಪದಕಗಳ ಮೌಲ್ಯವನ್ನು ಐದು ಪ್ರಶಸ್ತಿ ನೀಡಲು ಆಯ್ಕೆ ಮಾಡಲಾಗಿದೆ.
2024-25ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಆಯ್ಕೆ ಮಾಡುವ ಸಂಬಂಧ ಕೆ.ಹೆಚ್.ಮಲ್ಲೇಶಪ್ಪ.. ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ನಾಗರಬಾವಿ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿರುತ್ತು.
ಸರ್ಕಾರವು ಎಲ್ಲಾ ಅಂಶ ಪರಿಶೀಲಿಸಿ, 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಸಮಿತಿಯು ಆಯ್ಕೆ ಮಾಡಿರುವ ಒಟ್ಟು 05 ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಸಭೆಯಲ್ಲಿ ನಿರ್ಣಯಿಸಿರುವಂತೆ, 2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಕ್ಷೇತ್ರವಾರು ಈ ಕೆಳಕಂಡ 05 ಸಾಧಕರಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ (Maharshi Valmiki Award) ಪ್ರುಶಸ್ತಿಯನ್ನು ನೀಡಿ, ಗೌರವಿಸಲು ಮಂಜೂರಾತಿ ನೀಡಿ ಆದೇಶಿಸಿದೆ.
ಇದನ್ನೂ ಓದಿ: ಅಡಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ | Adike Rate
ಐದು ಜನರ ಸಾಧಕರ ಪಟ್ಟಿ
ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ. ಗಡ್ಡದಾರ ಹಟ್ಟಿ, ನನ್ನಿವಾಳ ಅಂಚೆ ಚಳ್ಳಕೆರೆ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ (ಬುಡಕಟ್ಟು ಸಂಸ್ಕೃತಿ ಕ್ಷೇತ್ರ)
ಡಾ. ರತ್ನಮ್ಮ.ಎಸ್., ಮದ್ದೂರು ಕಾಲೋನಿ, ಮದ್ದೂರು ಪೋಸ್ಟ್, ಹಂಗಳ ಹೋಬಳಿ, ಗುಂಡ್ಲುಪೇಟೆ ಚಾಮರಾಜನಗರ ಜಿಲ್ಲೆ (ಸಮಾಜ ಸೇವೆ) (Maharshi Valmiki Award)
ರಾಜಶೇಖರ ತಳವಾರ, ನಂ.63/ಎ, 3ನೇ ಕ್ರಾಸ್, ದೀಪಕ ಗಲ್ಲಿ, ಗಾಂಧಿನಗರ, ಬೆಳಗಾವಿ (ಸಾಮಾಜಿಕ ಕ್ಷೇತ್ರ)
ಕೆ.ಎಸ್. ಮೃತ್ಯುಂಜಯ, ನಂ.14/10, ಮಾಗಡಿ ಮುಖ್ಯರಸ್ತೆ, ಬೆಂಗಳೂರು. (ಸಾಮಾಜಿಕ ಕ್ಷೇತ್ರ)
ರತ್ನಮ್ಮ , ಬಿ.ಸೋಗಿ, ನಂ. 20.921/1, ಕಾಲೋನಿ, ಹರಪನಹಳ್ಳಿ, ವಿಜಯನಗರ ಜಿಲ್ಲೆ (ರಂಗ ಭೂಮಿ ಕ್ಷೇತ್ರ)