
Chitradurga news|nammajana.com|25-7-2024
ನಮ್ಮಜನ.ಕಾಂ, ಚಿತ್ರದುರ್ಗ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಜಿಲ್ಲೆಯ ಅರ್ಹ (Matsya Sampada Yojana) ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳ ವಿವರ
ಯೋಜನೆಯಡಿ ಮೀನು ಕೃಷಿಕೊಳ, ಪಾಂಡ್ ಬಯೋಫ್ಲಾಕ್ ಮೀನು ಸಾಗಾಣಿಕೆ, 30 ಘ.ಮೀ. ಅಳೆತೆಯ 6 ತೊಟ್ಟಿ, (Matsya Sampada Yojana) ಕಿಯೋಸ್ಕ್, ಸಾಕಾಣಿಕೆ ಕೊಳ ನಿರ್ಮಾಣ ಹಾಗೂ ಮೋಟಾರ್ ಸೈಕಲ್ ವಿತ್ ಐಸ್ ಬಾಕ್ಸ್ಗಳನ್ನು ವಿತರಿಸಲಾಗುವುದು.
ಸಾಮಾನ್ಯ ವರ್ಗದವರಿಗೆ ಶೇ.40 ರಷ್ಟು, ಮಹಿಳೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.60 ರಷ್ಟು ಘಟಕ ವೆಚ್ಚದ (Matsya Sampada Yojana) ಸಹಾಯಧನ ನೀಡಲಾಗುವುದು.
ಆಸಕ್ತ ಫಲಾನುಭವಿಗಳು ಆಗಸ್ಟ್ 14 ರೊಳಗೆ ಅಗತ್ಯ (Matsya Sampada Yojana) ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ಯೋಜನೆಗಳ ಅನುಷ್ಠಾನಕ್ಕೆ ನಿಗದಿ ಪಡಿಸಿದ ಗರಿ ಹಾಗೂ ಮೀಸಲಾತಿ ಸೇರಿದಂತೆ ಇತರೆ ಮಾಹಿತಿಗಾಗಿ, ಚಿತ್ರದುರ್ಗ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ಸಹಾಯಕ ನಿರ್ದೇಶಕ ತುಳಸಿದಾಸ್, ದೂರವಾಣಿ ಸಂಖ್ಯೆ 9342187356 ಹಾಗೂ (Matsya Sampada Yojana) ಹಿರಿಯೂರು, ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕಿನ ಸಹಾಯಕ ನಿರ್ದೇಶಕ ಎನ್.ಮಂಜುನಾಥ್ ದೂರವಾಣಿ ಸಂಖ್ಯೆ 7022933310 ಕರೆ ಮಾಡಬಹುದು ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ ತಿಳಿಸಿದ್ದಾರೆ.