Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಆರ್.ಬಿ.ಐ ಮಾರ್ಗಸೂಚಿ ಪಾಲನೆ ಕಡ್ಡಾಯ | Micro Finance ಸಂಸ್ಥೆ ಡಿಸಿ ಸೂಚನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಆರ್.ಬಿ.ಐ ಮಾರ್ಗಸೂಚಿ ಪಾಲನೆ ಕಡ್ಡಾಯ | Micro Finance ಸಂಸ್ಥೆ ಡಿಸಿ ಸೂಚನೆ
ಇಂದಿನ ಸುದ್ದಿ

ಆರ್.ಬಿ.ಐ ಮಾರ್ಗಸೂಚಿ ಪಾಲನೆ ಕಡ್ಡಾಯ | Micro Finance ಸಂಸ್ಥೆ ಡಿಸಿ ಸೂಚನೆ

Editor Nammajana
Last updated: 5 February 2025 10:57
By Editor Nammajana 2 Min Read
Share
SHARE

Chitradurga news|nammajana.com|5-2-2025

ನಮ್ಮಜನ.ಕಾಂ, ಚಿತ್ರದುರ್ಗ: ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರಿವಿ ಹಣಕಾಸು ಸಂಸ್ಥೆಗಳು ಕಡ್ಡಾಯವಾಗಿ ಆರ್.ಬಿ.ಐ (Micro Finance)  (ಭಾರತೀಯ ರಿಸರ್ವ್ ಬ್ಯಾಂಕ್) ಮಾರ್ಗಸೂಚಿ ಪಾಲನೆ ಮಾಡಬೇಕು.

ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನಿಯಮಬಾಹಿರ ಮಾರ್ಗ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಸಾಲ ವಸೂಲಾತಿ ಸಮಯದಲ್ಲಿ ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಹಾಗೂ ಅತಿಯಾದ ಬಡ್ಡಿ ವಿಧಿಸುತ್ತಿರುವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರಿವಿ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಒಬ್ಬರ ಹೆಸರಿನಲ್ಲಿ ಮೊತ್ತೊಬ್ಬರಿಗೆ ಸಾಲ ನೀಡುವುದಾಗಲಿ, ವಸೂಲಿ ಮಾಡುವುದಾಗಲಿ (Micro Finance)  ಮಾಡಬಾರದು. ಸಾಲ ಮಂಜೂರಾತಿ ಸಂದರ್ಭದಲ್ಲಿ ನೇರವಾಗಿ ಸಾಲ ಪಡೆಯುವರೊಂದಿಗೆ ವ್ಯವಹರಿಸಬೇಕು.

ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು. ಸಾಲ ಮಂಜೂರಾತಿ ನಿಯಮಗಳು, ಸಾಲದ ಮೊತ್ತ, ಅವಧಿ, ಬಡ್ಡಿ ದರ, ಹಿಂಪಾವತಿ ಅವಧಿ ಸೇರಿದಂತೆ ಅಗತ್ಯ ಮಾಹಿತಿಗಳನ್ನೊಳಗೊಂಡ ಸತ್ಯಾಂಶ ಮಾಹಿತಿಯನ್ನು (ಫ್ಯಾಕ್ಟ್ ಶೀಟ್) ಸಾಲ ಪಡೆಯುವವರಿಗೆ ಕಡ್ಡಾಯವಾಗಿ ನೀಡಬೇಕು ಎಂದು ಸೂಚಿಸಿದರು.

ಸಾಲ ಮಂಜೂರಾತಿ ಸಂದರ್ಭದಲ್ಲಿಯೇ ಸಂಸ್ಥೆಯ ಎಲ್ಲಾ ಷರತ್ತು ಹಾಗೂ ನಿಬಂಧನೆಗಳನ್ನು ಸಾಲ ಪಡೆಯುವವರಿಗೆ ಮನವರಿಕೆ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ಮಾನವೀಯತೆ ಹಾಗೂ ಮಾನವೀಯ ಮೌಲ್ಯಗಳನ್ನು ಮೀರಿ ಸಾಲ ವಸೂಲಾತಿ ಮಾಡಬಾರದು.

ನಿಯಮಬದ್ಧವಾಗಿಯೇ ಸಾಲ ವಸೂಲಾತಿ ಮಾಡಬೇಕು. ಯಾವುದೇ ತರಹದ ಒತ್ತಡವನ್ನು ಸಾಲಗಾರರ ಮೇಲೆ ಹೇರಬಾರದು. ಅಪರಾಧ ಹಿನ್ನಲೆ ಹೊಂದಿರುವರನ್ನು ಸಾಲ ವಸೂಲಾತಿಗೆ ನೇಮಿಸಿಕೊಳ್ಳಬಾರದು ಎಂದು ಹೇಳಿದರು.
ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ಕಿರುಕುಳ ತಡೆಯುವ ನಿಟ್ಟಿನಲ್ಲಿ ಮಾರ್ಗಸೂಚಿಗಳ ರೂಪಿಸಿ ರಾಜ್ಯ ಸರ್ಕಾರ (Micro Finance)  ಸುಗ್ರೀವಾಜ್ಞೆ ಮೂಲಕ ಹೊಸ ಕಾಯ್ದೆ ಜಾರಿ ಮಾಡಲಿದೆ.

ಇದರ ಅನುಸಾರ ಉಪವಿಭಾಗಾಧಿಕಾರಿಗಳು ಅಧ್ಯಕ್ಷತೆಯಲ್ಲಿ ಪ್ರಾಧಿಕಾರ ರಚಿಸಲಾಗುವುದು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಘಟಕ ತೆರೆಯಲಾಗುವುದು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಹಣಕಾಸು ಸಂಸ್ಥೆಗಳು ಸಾಲ ನೀಡುವಾಗ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಸಾಲ ನೀಡುವಾಗ ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮನಿ ಲೆಂಡರ್ ಆಕ್ಟ್, ಪಾನ್ ಬ್ರೋಕರ್ ಆಕ್ಟ್ ಹಾಗೂ ಆರ್.ಬಿ.ಐ. ಮಾರ್ಗಸೂಚಿಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು.

ಯಾವುದೇ ಕಾರಣಕ್ಕೂ ಸಾಲ ವಸೂಲಾತಿಗೆ ಕಾನೂನುಬಾಹಿರ ಕ್ರಮಗಳನ್ನು ಕೈಗೊಳ್ಳಬಾರದು. ಮನೆಗೆ ತೆರಳಿ ಗಲಾಟೆ, ಸಂಬಂಧಿಕರಿಗೆ ಕಿರುಕುಳ, ರಾತ್ರಿ ಸಮಯದಲ್ಲಿ ಸಾಲ ವಸೂಲಾತಿಯಂತಹ ಮಾರ್ಗಗಳನ್ನು ಅನುಸರಿಸಬಾರದು. ರಾಜ್ಯ ಸರ್ಕಾರ ಇಂತಹ ಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿದೆ. ಕಾಯ್ದೆಗಳನ್ನು ಮೀರಿ ಸಾಲ ವಸೂಲಾತಿ ಮಾಡುತ್ತಿರುವ ಬಗ್ಗೆ ದೂರು ಕೇಳಿಬಂದರೆ, ತಕ್ಷಣವೇ ಸಾಲ ವಸೂಲಿಗೆ ಬಂದವರ ಮೇಲೆ ಅಪರಾಧಿಕ ಅತಿಕ್ರಮಣ, ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ (Micro Finance)  ಅಪರಾಧಗಳ ಅಡಿ ಬಂಧಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ದಿನ ಭವಿಷ್ಯ | ಇವತ್ತು ಯಾವ ರಾಶಿಗೆ ಆರ್ಥಿಕ ಲಾಭ, ಆರೋಗ್ಯದಲ್ಲಿ ಏರುಪೇರು | Dina Bhavishya

ಸಭೆಯಲ್ಲಿ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಕುಮಾರ್ ಬಾಬು, ಡಿವೈಎಸ್‍ಪಿಗಳಾದ ದಿನಕರ್, ರಾಜಣ್ಣ, ಶಿವಕುಮಾರ್ ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsCollectorate AssemblyFinance InstitutionKannada Newskannada suddiMicro FinanceNammajana.comNoticePolicyRBI RuleRBI ನಿಯಮಕನ್ನಡ ನ್ಯೂಸ್ಕನ್ನಡ ಸುದ್ದಿಕಲೆಕ್ಟರೇಟ್ ಅಸೆಂಬ್ಲಿಕಿರು ಹಣಕಾಸುಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೀತಿಸೂಚನೆಹಣಕಾಸು ಸಂಸ್ಥೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ | ಇವತ್ತು ಯಾವ ರಾಶಿಗೆ ಆರ್ಥಿಕ ಲಾಭ, ಆರೋಗ್ಯದಲ್ಲಿ ಏರುಪೇರು | Dina Bhavishya
Next Article Child Torture | ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ ದಿನವೇ ಗಂಡನ ಮೇಲಿನ ಕೋಪಕ್ಕೆ ಮಗುವಿಗೆ ಬರೆ ಹಾಕಿದ ತಾಯಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?