Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಬೆಂಬಲ ಬೆಲೆ ಯೋಜನೆ | ರೈತರಿಂದ ರಾಗಿ ಖರೀದಿ ನೋಂದಣಿ ಪ್ರಾರಂಭ: ಡಿಸಿ ಟಿ.ವೆಂಕಟೇಶ್ | Millet Purchase Centre
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಬೆಂಬಲ ಬೆಲೆ ಯೋಜನೆ | ರೈತರಿಂದ ರಾಗಿ ಖರೀದಿ ನೋಂದಣಿ ಪ್ರಾರಂಭ: ಡಿಸಿ ಟಿ.ವೆಂಕಟೇಶ್ | Millet Purchase Centre
ಇಂದಿನ ಸುದ್ದಿ

ಬೆಂಬಲ ಬೆಲೆ ಯೋಜನೆ | ರೈತರಿಂದ ರಾಗಿ ಖರೀದಿ ನೋಂದಣಿ ಪ್ರಾರಂಭ: ಡಿಸಿ ಟಿ.ವೆಂಕಟೇಶ್ | Millet Purchase Centre

Editor Nammajana
Last updated: 23 November 2024 05:09
By Editor Nammajana 3 Min Read
Share
SHARE

Chitradurga news |nammajana.com|23-11-2024

ನಮ್ಮಜನ.ಕಾಂ, ಚಿತ್ರದುರ್ಗ:  ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (Millet Purchase Centre) ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು.

ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್ ರಾಗಿಗೆ ರೂ.4290 ದರ ನಿಗದಿ ಮಾಡಲಾಗಿದೆ. ಮುಂಬರುವ ಜನವರಿ 01 ರಿಂದ ಮಾರ್ಚ್ 31 ರವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಗೆ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ (Millet Purchase Centre) ಅವರು ಮಾತನಾಡಿದರು.

ಜಿಲ್ಲೆಯ ಹೊಸದುರ್ಗ, ಹೊಳಲ್ಕೆರ ಹಾಗೂ ಚಿತ್ರದುರ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ  ಹೆಚ್ಚು ರಾಗಿ ಬಿತ್ತನೆಯಾಗಿದೆ. ಉತ್ತಮ ಇಳುವರಿಯ ನಿರೀಕ್ಷೆ ಇದ್ದು, ಹೊಸದುರ್ಗ ತಾಲ್ಲೂಕಿನಲ್ಲಿ ಹೆಚ್ಚುವರಿಯಾಗಿ ರಾಗಿ ಖರೀದಿ ಕೇಂದ್ರ ಸ್ಥಾಪಿಸಬೇಕು.

ನೇರವಾಗಿ ರೈತರಿಂದಲೇ ರಾಗಿ ಖರೀದಿ ಮಾಡಲಾಗುವುದು. ರಾಗಿ ಮಾರಾಟ ಮಾಡುವ ರೈತರ ಪಹಣಿಯಲ್ಲಿ ರಾಗಿ ಎಂದು ನಮೂದು ಆಗಿರುವುದು ಕಡ್ಡಾಯವಾಗಿದೆ. ಮದ್ಯವರ್ತಿಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

ರಾಗಿ ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ಸರ್ಕಾರದಿಂದ ನೇಮಿಸಲ್ಪಟ್ಟ ಸಂಗ್ರಹಣಾ ಏಜೆನ್ಸಿಗಳು ಕೇಂದ್ರ ಸರ್ಕಾರ ನಿಗದಿಪಡಿಸಿದ ಮಾನದಂಡಗಳ ಅನ್ವಯ ಎಫ್.ಎ.ಕ್ಯೂ ಗುಣಮಟ್ಟ ಆಧರಿಸಿ ರಾಗಿ ಖರೀದಿಸಬೇಕು.

ಪ್ರತಿ ಖರೀದಿ ಕೇಂದ್ರದಲ್ಲೂ ಕೃಷಿ (Millet Purchase Centre) ಇಲಾಖೆಯಿಂದ ಗ್ರೇಡರ್‍ಗಳನ್ನು ನೇಮಿಸಬೇಕು. ಈ ಗ್ರೇಡರ್‍ಗಳು ರಾಗಿ ಗುಣಮಟ್ಟವನ್ನು ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನೇಮಿಸಿರುವ ಗುಣಮಟ್ಟ ಪರೀಕ್ಷಕರೊಂದಿಗೆ ಜಂಟಿಯಾಗಿ ರಾಗಿ ಗುಣಮಟ್ಟ ಧೃಡೀಕರಿಸಬೇಕು. ರಾಗಿ ಖರೀದಿ ಹಾಗೂ ಮಾನದಂಡಗಳ ಕುರಿತು ವ್ಯಾಪಕ ಪ್ರಚಾರದೊಂದಿಗೆ ರೈತರಿಗೆ ತಿಳಿಸಬೇಕು.

ಎಲ್ಲಾ ಖರೀದಿ ಕೇಂದ್ರಗಳಲ್ಲಿ ರೈತರ ಬೆಳೆಗಳ ದಾಸ್ತಾನು ಮಾಡಲು ವ್ಯವಸ್ಥೆ ಕಲ್ಪಿಸಬೇಕು. ಇದರೊಂದಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ರೈತರ ಫ್ರೂಟ್ಸ್ ದಾಖಲೆಗಳ ಮೂಲಕ ನೋಂದಣಿ ಮಾಡುವಲ್ಲಿ ಯಾವುದೇ ಗೊಂದಲಗಳು ಉಂಟಾಗಬಾರದು. ರೈತರ ಪಹಣಿಯಲ್ಲಿ ಬೆಳೆ ನಮೂದು ಮಾಡುವಲ್ಲಿ ವ್ಯತ್ಯಾಸ ಕಂಡುಬಂದರೆ ಸಂಬಂಧಪಟ್ಟ (Millet Purchase Centre) ಗ್ರಾಮಲೆಕ್ಕಾಧಿಕಾರಿ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಖರೀದಿ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಕೃಷಿ ಇಲಾಖೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ರಾಗಿ ಖರೀದಿ ಕುರಿತು ರೈತರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಮಾತನಾಡಿ, 2022-23ನೇ ಸಾಲಿನಲ್ಲಿ ರೂ.3578 ಬೆಂಬಲ ಬೆಲೆಯಡಿ ಒಟ್ಟು 21,715 ಮೆಟ್ರಿಕ್ ಟನ್ ಹಾಗೂ 2023-24ನೇ ಸಾಲಿನಲ್ಲಿ ರೂ.3846 ಬೆಂಬಲ ಬೆಲೆಯಡಿ 1832.60 ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲಾಗಿತ್ತು.  ಈ ಬಾರಿ ರಾಗಿಗೆ ರೂ.4290 ಬೆಂಬಲ ಬೆಲೆ ನಿಗದಿ ಮಾಡಲಾಗಿದೆ.

ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ಹಾಗೂ ಶ್ರೀರಾಂಪುರ ಎ.ಪಿ.ಎಂ.ಸಿ ಯಾರ್ಡ್‍ಗಳಲ್ಲಿ ಖರೀದಿ ಕೇಂದ್ರಗಳನ್ನು (Millet Purchase Centre) ತೆರೆಯಲಾಗುವುದು. ಹಿರಿಯೂರು ಹಾಗೂ ಹೊಸದುರ್ಗ ತಾಲ್ಲೂಕಿನಲ್ಲಿ ಹೆಚ್ಚಿನ ಬೇಡಿಕೆ ಎದುರಾದರೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸಹ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: ವಿ ವಿ ಸಾಗರಕ್ಕೆ ಇಂದು 924 ಕ್ಯೂಸೆಕ್ಸ್ ನೀರು, ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಡಿವೈಎಸ್‍ಪಿ ದಿನಕರ್ ಸೇರಿದಂತೆ ತಹಶೀಲ್ದಾರ್‍ಗಳು, ಎ.ಪಿ.ಎಂ.ಸಿ ಕಾರ್ಯದರ್ಶಿಗಳು ಇದ್ದರು.

ಇದನ್ನೂ ಓದಿ: Dina Bhavishya: ದಿನ ಭವಿಷ್ಯ ಹಣಕಾಸಿನ ವಿಚಾರದಲ್ಲಿ ಕಿರಿಕಿರಿ, ಆರೋಗ್ಯದ ಬಗ್ಗೆ ಜಾಗೃತಿ ಇರಲಿ

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:Chitradurga DistrictChitradurga NewsCommencementDecember 1farmersKannada Newskannada suddiMillet PurchaseMillet Purchase CentreNammajana.comಆರಂಭಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡಿಸೆಂಬರ್ 1ನಮ್ಮಜನ.ಕಾಂರಾಗಿ ಖರೀದಿರಾಗಿ ಖರೀದಿ ಕೇಂದ್ರರೈತರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ನಮ್ಮ ಶೌಚಾಲಯ-ನಮ್ಮ ಗೌರವ ವಿಶೇಷ ಆಂದೋಲನ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಗೆ ಚಾಲನೆ | Toilet use
Next Article ಚಿತ್ರದುರ್ಗ | ಭೈರತಿ ರಣಗಲ್ ಯಶಸ್ಸಿಗೆ ಸಂತಸ ಹಂಚಿಕೊಂಡ ಶಿವರಾಜ್ ಕುಮಾರ್ | Shivraj Kumar
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?