
Chitradurga news|Nammajana.com|27-6-2025
ನಮ್ಮಜನ.ಕಾಂ, ಚಿತ್ರದುರ್ಗ: ನಾನು ಸಹ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದೇನೆ, ಸತತ ಮೂರು ಬಾರಿ ಜನ ಆಶೀರ್ವಾದ (Minister) ಮಾಡಿದ್ದು ಹೈಕಮಾಂಡ್ ಎಲ್ಲವನ್ನೂ ಪರಿಗಣಿಸಿ ಮತ್ತು ನಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಭರವಸೆಯಿದೆ ಎಂದು ಚಳ್ಳಕೆರೆ ಕಾಂಗ್ರೆಸ್ ಶಾಸಕ ಹಾಗೂ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಟಿ.ರಘುಮೂರ್ತಿ ತಿಳಿಸಿದರು.
ಚಿತ್ರದುರ್ಗ ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು ಸಿಎಂ ದೆಹಲಿ ಪ್ರವಾಸ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ ಆದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ (Minister) ಮಾಡುವ ಭರವಸೆ ಇದೆ.

ಇದನ್ನೂ ಓದಿ: Gold Rate | ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ
ನಮ್ಮ ಕ್ಷೇತ್ರದಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆಗಿಲ್ಲ, ಗ್ಯಾರಂಟಿ ಯೋಜನೆ ಜತೆಗೆ ಇತರೆ ಕೆಲಸಗಳೂ ನಡೆಯುತ್ತಿವೆ. ಸ್ವಲ್ಪ ಕಡಿಮೆ ಆಗಿರಬಹುದು. ಅಭಿವೃದ್ಧಿ ಕೆಲಸ ನಡೆಯುತ್ತಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಆಗಿಲ್ಲ (Minister) ಎಂದು ಬಿಜೆಪಿ ವಿರುದ್ದ ಟೀಕಿಸಿದರು.