Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ನುಡಿದಂತೆ ನಡೆದ ಸರ್ಕಾರ ನಮ್ಮದು: ಶಾಸಕ ಟಿ.ರಘುಮೂರ್ತಿ | MLA T. Raghumurthy
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ನುಡಿದಂತೆ ನಡೆದ ಸರ್ಕಾರ ನಮ್ಮದು: ಶಾಸಕ ಟಿ.ರಘುಮೂರ್ತಿ | MLA T. Raghumurthy
ಇಂದಿನ ಸುದ್ದಿ

ನುಡಿದಂತೆ ನಡೆದ ಸರ್ಕಾರ ನಮ್ಮದು: ಶಾಸಕ ಟಿ.ರಘುಮೂರ್ತಿ | MLA T. Raghumurthy

Editor Nammajana
Last updated: 20 August 2024 04:06
By Editor Nammajana 3 Min Read
Share
SHARE

Chitradurga news|nammajana.com|20-8-2024

ನಮ್ಮಜನ.ಕಾಂ, ಚಳ್ಳಕೆರೆ: ನಾಡಿನ ಬಡ ಕುಟುಂಬಗಳ ಕಲ್ಯಾಣಕ್ಕಾಗಿ ಸರ್ಕಾರ ನೀಡಿದ ಐದು ಪ್ರಮುಖ ಗ್ಯಾರಂಟಿಗಳ ಅನುಷ್ಠಾನದ ಮೂಲಕ ಬಡ ಜನತೆಯ ಬದುಕನ್ನು ಹಸನುಗೊಳಿಸಲು ಸರ್ಕಾರ ಕಳೆದ ೧೫ ತಿಂಗಳಿನಿಂದ (MLA T. Raghumurthy) ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದೆ. ತಾಲ್ಲೂಕಿನಲ್ಲಿ ಈ ಯೋಜನೆಯ ಗುಣಾತ್ಮಕ ಅನುಷ್ಠಾನಕ್ಕಾಗಿ ಸಮಿತಿ ಜಾರಿಗೆ ತಂದಿದ್ದು ಐದು ಗ್ಯಾರಂಟಿ ಯೋಜನೆಗಳು ಜನರ ಅಭ್ಯುದಯಕ್ಕೆ ಪ್ರೇರಣಾ ಶಕ್ತಿಯಾಗಿವೆ ಎಂದು ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಸೋಮವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ (MLA T. Raghumurthy) ಅನುಷ್ಠಾನ ಸಮಿತಿಯ ಮೊಟ್ಟಮೊದಲ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ (MLA T. Raghumurthy) ಮಹಿಳೆಯರಿಗೆ ಶಕ್ತಿಯೋಜನೆಯ ಮೂಲಕ ಉಚಿತ ಪ್ರಯಾಣ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಯೋಜನೆಗಳ ಪ್ರಗತಿಯ ಪರಿಶೀಲನೆ ನಡೆಸಿದರು.

ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಗದ್ದಿಗೆ ತಿಪ್ಪೇಸ್ವಾಮಿ, ಎಚ್.ಆಂಜನೇಯ, ಕವಿತಾ, ಪುರುಷೋತ್ತಮನಾಯ್ಕ, ಎಸ್.ಮುಜೀಬುಲ್ಲಾ, (MLA T. Raghumurthy) ಹನುಮಂತರೆಡ್ಡಿ, ಅನಿಲ್‌ಕುಮಾರ್, ನಾಗೇಶ್, ಉಮೇಶ್, ಮಲ್ಲಿಕಾರ್ಜುನ್, ತಿಪ್ಪೇಸ್ವಾಮಿ, ಆರ್.ಬಸಪ್ಪ, ಜನಾರ್ಥನ ಇವರನ್ನು ಸನ್ಮಾನಿಸಿದರು.

ಪ್ರಾರಂಭದಲ್ಲಿ ಎಲ್ಲರನ್ನೂ ಸ್ವಾಗತಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಶಶಿಧರ, ರಾಜ್ಯ ಸರ್ಕಾರ ಮಹತ್ವಕಾಂಕ್ಷಿ ಯೋಜನೆಯಾದ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಪ್ರತಿತಿಂಗಳು ಎರಡು ಬಾರಿ ಸಮಿತಿ ಸಭೆ ನಡೆಸಿ ಸಾಧಕ, ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಪ್ರಾರಂಭದಲ್ಲಿ ಬೆಸ್ಕಾಂ ಇಲಾಖೆ ಬಗ್ಗೆ ಮಾಹಿತಿ ನೀಡಿದ ಎಇಇ ಜಿ.ಶಿವಪ್ರಸಾದ್, ಚಳ್ಳಕೆರೆ ವಿಭಾಗದಲ್ಲಿ ೫೨೫೯೭ ಫಲಾನುಭವಿಗಳ ಸಂಪರ್ಕ ಕಲ್ಪಿಸಬೇಕಿದ್ದು, ೪೫೧೮೯೯ ಜನರಿಗೆ ಈ ಯೋಜನೆ ದೊರಕಿದೆ.

ನಗರ ಪ್ರದೇಶದಲ್ಲಿ ೨೦೦ ಯೂನಿಟ್ ವಿದ್ಯುತ್ ಬಳಸುವವರ ಮಾಹಿತಿಯನ್ನು ಸಂಗ್ರಹಿಸಿ ನೀಡಲಾಗುವುದು ಎಂದರು. ತಳಕು ಅಧಿಕಾರಿ ಮಮತ ಮಾಹಿತಿ ನೀಡಿ, ೨೬೧೦೧ ಗುರಿ ಇದ್ದು (MLA T. Raghumurthy) ೨೪೪೪೪ ಫಲಾನುಭವಿಗಳು ಗೃಹಜ್ಯೋತಿಯೋಜನೆ ಕಲ್ಪಿಸಿದೆ ಎಂದರು.

ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಪ್ರಭು ಮಾಹಿತಿ ನೀಡಿ, ಕಳೆದ ಜೂನ್‌ನಿಂದ ಆಗಸ್ಟ್ ೧೩ವರೆಗೂ ೪.೭೮ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿ ಒಟ್ಟು ೧೯.೨೭ ಕೋಟಿ ಆದಾಯ ಲಭಿಸಿದೆ ಎಂದರು. ಮುಂದಿನ ದಿನಗಳಲ್ಲಿ ಚಳ್ಳಕೆರೆ ಘಟಕದಿಂದ ಹೊಸ ಮಾರ್ಗಗಳಲ್ಲಿ ೮ ಬಸ್‌ಗಳನ್ನು ಸಮರ್ಪಿಸಲಾಗುವುದು ಎಂದರು.

ಯುವ ನಿಧಿ ಅಧಿಕಾರಿ ಮಾಹಿತಿ ನೀಡಿ, ತಾಲ್ಲೂಕಿನಾದ್ಯಂತ ಒಟ್ಟು ೧೮೩೫ ಫಲಾನುಭವಿಗಳು ನೊಂದಾವಣೆ ಮಾಡಿದ್ದು ೫೫ ಲಕ್ಷ ಹಣವನ್ನು ವಿತರಣೆ ಮಾಡಲಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಹರಿಪ್ರಸಾದ್ ಮಾಹಿತಿ ನೀಡಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ೫೪೦೧೯ ಫಲಾನುಭವಿಗಳು ನೊಂದಾವಣೆಯಾಗಿದ್ದು, ೫೩೫೯೦ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯ ಕಲ್ಪಿಸಿದೆ ಎಂದರು.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಶ್ರೀನಿವಾಸ್ ಮಾಹಿತಿ ನೀಡಿ, ನೂತನ ಪಡಿತರಚೀಟಿ ನೀಡಲು ಆರ್ಜಿ ಆಹ್ವಾನಿಸಿದ್ದು ಎರಡು ಸಾವಿರ ಅರ್ಜಿಗಳು ಆನ್‌ಲೈನ್ ಮೂಲಕ ಬಂದಿವೆ ಎಂದರು.

ಕೃಷಿ ಅಧಿಕಾರಿ ಜೆ.ಅಶೋಕ್ ಮಾಹಿತಿ ನೀಡಿ, ವಾಡಿಕೆಮಳೆಗಿಂತ ಹೆಚ್ಚು ಮಳೆಯಾಗಿದ್ದು, ಈಗಷ್ಟೇ ಬಿತ್ತನೆ ಕಾರ್ಯ (MLA T. Raghumurthy) ಆರಂಭವಾಗಿದೆ. ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ, ತೊಗರಿ, ರಾಗಿ ಮುಂತಾದ ಬೆಳೆಗಳ ಬಿತ್ತನೆ ಕಾರ್ಯ ಆರಂಭವಾಗಿದೆ.

ಇದನ್ನೂ ಓದಿ: ಆಗಸ್ಟ್ 23ರಂದು ನೇರ ನೇಮಕಾತಿ ಸಂದರ್ಶನ | ಸಂದರ್ಶನಕ್ಕೆ ದಾಖಲೆ ಏನೆಲ್ಲ ತರ್ಬೇಕು ನೋಡಿ | Chitradurga Job

ತಾಲ್ಲೂಕಿನಾದ್ಯಂತ ಒಟ್ಟು ೧೩ಸಾವಿರ ಕ್ವಿಂಟಾಲ್ ಶೇಂಗಾ ಬಿತ್ತನೆ ಬೀಜ ದಾಸ್ತಾನು ಮಾಡಿದ್ದು ಆಪೈಕಿ ೧೧೨೦೦ ಕ್ವಿಂಟಾಲ್ ಶೇಂಗಾ (MLA T. Raghumurthy) ಬಿತ್ತನೆ ಬೀಜ ಈಗಾಗಲೇ ವಿತರಣೆ ಮಾಡಿದೆ ಎಂದರು.

ಗ್ರಾಮೀಣಾಭಿವೃದ್ದಿ ಮತ್ತು ಕುಡಿಯುವ ನೀರು ವಿಭಾಗದ ಅಧಿಕಾರಿ ಮಾಹಿತಿ ನೀಡಿ, ತಾಲ್ಲೂಕಿನಾದ್ಯಂತ ಜೆಜೆಎಂ ಕಾಗಮಾರಿ ಪ್ರಗತಿಯಲ್ಲಿದೆ. ಯಾವಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ಇಲ್ಲವೆಂದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChairmanChallakere newsChitradurga NewsGuarantee schemeKannada Newskannada suddiMembersMLA T. RaghumurthyMLA ಟಿ.ರಘುಮೂರ್ತಿNammajana.comProgress Review MeetingTaluk Guarantee CommitteeVice Chairmanಅಧ್ಯಕ್ಷಉಪಾಧ್ಯಕ್ಷಕನ್ನಡ ನ್ಯೂಸ್ಕನ್ನಡ ಸುದ್ದಿಗ್ಯಾರೆಂಟಿ ಯೋಜನೆಚಳ್ಳಕೆರೆ ನ್ಯೂಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಾಲೂಕು ಗ್ಯಾರೆಂಟಿ ಸಮಿತಿನಮ್ಮಜನ.ಕಾಂಪ್ರಗತಿ ಪರಿಶೀಲನೆ ಸಭೆಸದಸ್ಯರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ಇಂದಿನ ದಿನ ಭವಿಷ್ಯ ಯಾರಿಗೆ ಶುಭ, ಅಶುಭ? 20 ಆಗಸ್ಟ್ 2024
Next Article PDO Suspended: ಪಿಡಿಓ ಎಸ್. ಬಸವರಾಜ್ ಅಮಾನತು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?